<p><strong>ಅಥಣಿ:</strong> ಮುಂಗಾರು ಮಳೆಯ ಜೊತೆಗೆ ಹಿಂಗಾರು ಮಳೆಯೂ ಬಾರದೆ ತಾಲ್ಲೂಕಿನಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದಾಗಿ ರೈತರು ಕಂಗಾಲಾಗಿದ್ದು, ಬರಪೀಡಿತ ಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಶಹಜಹಾನ್ ಡೋಂಗರಗಾಂವ ಒತ್ತಾಯಿಸಿದ್ದಾರೆ.<br /> <br /> ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಕೆರೆ, ಹಳ್ಳಗಳಲ್ಲಿ ನೀರಿನ ಸಂಗ್ರಹವಾಗಿಲ್ಲ. ಕುಡಿಯುವ ನೀರಿನ ಕೊರತೆ ತೀವ್ರವಾಗಿ ಕಾಡುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗುವ ಸಮಸ್ಯೆಯನ್ನು ನಿವಾರಿಸಲು ತಕ್ಷಣವೇ ಕೊಳವೆ ಬಾವಿ ತೋಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.<br /> <br /> ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಿ, ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವದು ಸೇರಿದಂತೆ ವಿವಿಧ ಮುಂಜಾಗೃತ ಕ್ರಮ ಕೈಗೊಂಡು ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ಇದೀಗ ಮಳೆಗಾಲ ಮುಗಿಯುವ ಹಂತದಲ್ಲಿದೆ. ತಾಲ್ಲೂಕಿಗೆ ಆಸರೆಯಾಗಿರುವ ಕರಿಮಸೂತಿ ಏತ ನೀರಾವರಿ ಯೋಜನೆ ಪೂರ್ಣಗೊಂಡಿದ್ದರೆ ಸಮಸ್ಯೆಗೆ ಸ್ವಲ್ಪ ಮಟ್ಟಿಗೆ ಪರಿಹಾರ ಕೈಗೊಳ್ಳಬಹುದಿತ್ತು. ಆದರೆ ಅಧಿಕಾರಿಗಳ ವಿಳಂಬ ನೀತಿಯಿಂದ ಕಾಮಗಾರಿ ಕುಂಟುತ್ತ ಸಾಗುತ್ತಿದೆ. ಯೋಜನೆಯ ವಿಶ್ವಾಸವೂ ಕಮರಿ ಹೋಗಿದೆ ಎಂದು ವಿಷಾದಿಸಿದ್ದಾರೆ.</p>.<p><br /> <strong>ನೆಮ್ಮದಿ ಕೆಡಿಸಿದ ಕೇಂದ್ರಗಳು: </strong>ಬದಲಾದ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಪ್ರತಿನಿತ್ಯ ತಾಲ್ಲೂಕು ಕೇಂದ್ರಕ್ಕೆ ಎಡತಾಕಬೇಕಾಗಿದೆ. ಇದಕ್ಕೆ ಪರ್ಯಾಯವಾಗಿ ಆಯಾ ಪಂಚಾಯಿತಿವಾರು ಆದಾಯ ಮತ್ತು ಜಾತಿ ಪ್ರಮಾಣ ಪತ್ರ ವಿತರಿಸುವ ವ್ಯವಸ್ಥೆ ಆರಂಭಿಸಬೇಕೆಂದು ಡೋಂಗರಗಾಂವ ಆಗ್ರಹಿಸಿದ್ದಾರೆ. <br /> <br /> ಈಗ ಚಾಲ್ತಿಯಲ್ಲಿರುವ ನೆಮ್ಮದಿ ಕೇಂದ್ರಗಳಿಗೆ ನಿರಂತರ ವಿದ್ಯುತ್ ಪೂರೈಸುವುದು ಹಾಗೂ ಯಂತ್ರೋಪಕರಣಗಳು ಸ್ಥಗಿತಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸುವಂತೆಯೂ ಅವರು ಆಗ್ರಹಿಸಿದರು. <br /> <br /> <strong>ಆಹಾರ ಕೊರತೆ: ಆತಂಕ</strong><br /> ಆರ್ಥಿಕವಾಗಿ ಬಲಿಷ್ಠವೆಂದು ಗುರುತಿಸಿಕೊಂಡಿರುವ ಭಾರತದಲ್ಲಿ ಮಹಿಳೆಯರು ಮತ್ತು ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಸಾವನ್ನಪ್ಪುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಇಲ್ಲಿಯ ವಿಮೋಚನಾ ಸಂಘದ ಅಧ್ಯಕ್ಷ ಬಿ.ಎಲ್. ಪಾಟೀಲ ಆತಂಕ ವ್ಯಕ್ತಪಡಿಸಿದ್ದಾರೆ. <br /> <br /> ರಾಷ್ಟ್ರ ಮತ್ತು ರಾಜ್ಯ ಮಟ್ಟದ ಗೋದಾಮುಗಳಲ್ಲಿ ಆಹಾರ ಧಾನ್ಯ ಕೊಳೆಯುತ್ತಿದ್ದರೂ ಸಮರ್ಪಕ ವಿಲೇವಾರಿ ಮಾಡದೇ ಇರುವದರಿಂದ ಸಮಸ್ಯೆ ಸೃಷ್ಟಿಯಾಗಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಬಳ್ಳಾರಿ, ಗುಲಬರ್ಗಾ ಮತ್ತಿತರ ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಸಾಯುವಂತಾಗಿದೆ ಎಂದರು.<br /> <br /> ಮಕ್ಕಳ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಸಂಸ್ಥೆಯ ವತಿಯಿಂದ ನಿರಂತರ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ಮುಂಗಾರು ಮಳೆಯ ಜೊತೆಗೆ ಹಿಂಗಾರು ಮಳೆಯೂ ಬಾರದೆ ತಾಲ್ಲೂಕಿನಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದಾಗಿ ರೈತರು ಕಂಗಾಲಾಗಿದ್ದು, ಬರಪೀಡಿತ ಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಶಹಜಹಾನ್ ಡೋಂಗರಗಾಂವ ಒತ್ತಾಯಿಸಿದ್ದಾರೆ.<br /> <br /> ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಕೆರೆ, ಹಳ್ಳಗಳಲ್ಲಿ ನೀರಿನ ಸಂಗ್ರಹವಾಗಿಲ್ಲ. ಕುಡಿಯುವ ನೀರಿನ ಕೊರತೆ ತೀವ್ರವಾಗಿ ಕಾಡುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗುವ ಸಮಸ್ಯೆಯನ್ನು ನಿವಾರಿಸಲು ತಕ್ಷಣವೇ ಕೊಳವೆ ಬಾವಿ ತೋಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.<br /> <br /> ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಿ, ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವದು ಸೇರಿದಂತೆ ವಿವಿಧ ಮುಂಜಾಗೃತ ಕ್ರಮ ಕೈಗೊಂಡು ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.<br /> <br /> ಇದೀಗ ಮಳೆಗಾಲ ಮುಗಿಯುವ ಹಂತದಲ್ಲಿದೆ. ತಾಲ್ಲೂಕಿಗೆ ಆಸರೆಯಾಗಿರುವ ಕರಿಮಸೂತಿ ಏತ ನೀರಾವರಿ ಯೋಜನೆ ಪೂರ್ಣಗೊಂಡಿದ್ದರೆ ಸಮಸ್ಯೆಗೆ ಸ್ವಲ್ಪ ಮಟ್ಟಿಗೆ ಪರಿಹಾರ ಕೈಗೊಳ್ಳಬಹುದಿತ್ತು. ಆದರೆ ಅಧಿಕಾರಿಗಳ ವಿಳಂಬ ನೀತಿಯಿಂದ ಕಾಮಗಾರಿ ಕುಂಟುತ್ತ ಸಾಗುತ್ತಿದೆ. ಯೋಜನೆಯ ವಿಶ್ವಾಸವೂ ಕಮರಿ ಹೋಗಿದೆ ಎಂದು ವಿಷಾದಿಸಿದ್ದಾರೆ.</p>.<p><br /> <strong>ನೆಮ್ಮದಿ ಕೆಡಿಸಿದ ಕೇಂದ್ರಗಳು: </strong>ಬದಲಾದ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಪ್ರತಿನಿತ್ಯ ತಾಲ್ಲೂಕು ಕೇಂದ್ರಕ್ಕೆ ಎಡತಾಕಬೇಕಾಗಿದೆ. ಇದಕ್ಕೆ ಪರ್ಯಾಯವಾಗಿ ಆಯಾ ಪಂಚಾಯಿತಿವಾರು ಆದಾಯ ಮತ್ತು ಜಾತಿ ಪ್ರಮಾಣ ಪತ್ರ ವಿತರಿಸುವ ವ್ಯವಸ್ಥೆ ಆರಂಭಿಸಬೇಕೆಂದು ಡೋಂಗರಗಾಂವ ಆಗ್ರಹಿಸಿದ್ದಾರೆ. <br /> <br /> ಈಗ ಚಾಲ್ತಿಯಲ್ಲಿರುವ ನೆಮ್ಮದಿ ಕೇಂದ್ರಗಳಿಗೆ ನಿರಂತರ ವಿದ್ಯುತ್ ಪೂರೈಸುವುದು ಹಾಗೂ ಯಂತ್ರೋಪಕರಣಗಳು ಸ್ಥಗಿತಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸುವಂತೆಯೂ ಅವರು ಆಗ್ರಹಿಸಿದರು. <br /> <br /> <strong>ಆಹಾರ ಕೊರತೆ: ಆತಂಕ</strong><br /> ಆರ್ಥಿಕವಾಗಿ ಬಲಿಷ್ಠವೆಂದು ಗುರುತಿಸಿಕೊಂಡಿರುವ ಭಾರತದಲ್ಲಿ ಮಹಿಳೆಯರು ಮತ್ತು ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಸಾವನ್ನಪ್ಪುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಇಲ್ಲಿಯ ವಿಮೋಚನಾ ಸಂಘದ ಅಧ್ಯಕ್ಷ ಬಿ.ಎಲ್. ಪಾಟೀಲ ಆತಂಕ ವ್ಯಕ್ತಪಡಿಸಿದ್ದಾರೆ. <br /> <br /> ರಾಷ್ಟ್ರ ಮತ್ತು ರಾಜ್ಯ ಮಟ್ಟದ ಗೋದಾಮುಗಳಲ್ಲಿ ಆಹಾರ ಧಾನ್ಯ ಕೊಳೆಯುತ್ತಿದ್ದರೂ ಸಮರ್ಪಕ ವಿಲೇವಾರಿ ಮಾಡದೇ ಇರುವದರಿಂದ ಸಮಸ್ಯೆ ಸೃಷ್ಟಿಯಾಗಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಬಳ್ಳಾರಿ, ಗುಲಬರ್ಗಾ ಮತ್ತಿತರ ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಸಾಯುವಂತಾಗಿದೆ ಎಂದರು.<br /> <br /> ಮಕ್ಕಳ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಸಂಸ್ಥೆಯ ವತಿಯಿಂದ ನಿರಂತರ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>