<p><strong>ನವದೆಹಲಿ (ಐಎಎನ್ಎಸ್):</strong> ಕಳೆದ ಜುಲೈ 26 ಹಾಗೂ 28ರಂದು ರಾಜ್ಯ ಸರ್ಕಾರ ಹೇರಿದ್ದ <a href="http://www.prajavani.net/Content/Jul272010/national20100726196494.asp?section=updatenews">ಕಬ್ಬಿಣ ಅದಿರು ರಫ್ತು ನಿಷೇಧವನ್ನು</a> ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.</p>.<p>ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಹಾಗೂ ಎ.ಕೆ. ಪಟ್ನಾಯಕ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.<br /> <br /> ರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಬ್ಬಿಣ ಅದಿರು ಗಣಿಗಾರಿಕೆ , ಸಾಗಾಟ ಮತ್ತು ದಾಸ್ತಾನು ತಡೆಯಲು ಕ್ರಮ ಕೈಗೊಳ್ಳುವಂತೆ ಮಾರ್ಚ್ 31 ರಂದು ಸೂಚಿಸಿದ್ದಂತೆ ಪ್ರತಿಬಂಧಕ ನಿಯಮಗಳನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.</p>.<p>ಒಂದು ವೇಳೆ ಸರ್ಕಾರ ಪ್ರತಿಬಂಧಕ ನಿಯಮಗಳನ್ನು ಜಾರಿಗೆ ತರಲು ವಿಫಲವಾದಲ್ಲಿ ಕಬ್ಬಿಣ ಅದಿರು ಸಾಗಣೆ ಕಂಪೆನಿಗಳು ಮಧ್ಯಂತರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೊಗಬಹುದು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಕಳೆದ ಜುಲೈ 26 ಹಾಗೂ 28ರಂದು ರಾಜ್ಯ ಸರ್ಕಾರ ಹೇರಿದ್ದ <a href="http://www.prajavani.net/Content/Jul272010/national20100726196494.asp?section=updatenews">ಕಬ್ಬಿಣ ಅದಿರು ರಫ್ತು ನಿಷೇಧವನ್ನು</a> ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.</p>.<p>ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಹಾಗೂ ಎ.ಕೆ. ಪಟ್ನಾಯಕ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.<br /> <br /> ರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಬ್ಬಿಣ ಅದಿರು ಗಣಿಗಾರಿಕೆ , ಸಾಗಾಟ ಮತ್ತು ದಾಸ್ತಾನು ತಡೆಯಲು ಕ್ರಮ ಕೈಗೊಳ್ಳುವಂತೆ ಮಾರ್ಚ್ 31 ರಂದು ಸೂಚಿಸಿದ್ದಂತೆ ಪ್ರತಿಬಂಧಕ ನಿಯಮಗಳನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.</p>.<p>ಒಂದು ವೇಳೆ ಸರ್ಕಾರ ಪ್ರತಿಬಂಧಕ ನಿಯಮಗಳನ್ನು ಜಾರಿಗೆ ತರಲು ವಿಫಲವಾದಲ್ಲಿ ಕಬ್ಬಿಣ ಅದಿರು ಸಾಗಣೆ ಕಂಪೆನಿಗಳು ಮಧ್ಯಂತರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೊಗಬಹುದು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>