<p><strong>ಬೆಂಗಳೂರು:</strong> `ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಜಾತಿಗಳನ್ನು ವಿಭಜನೆ ಮಾಡಿ ಸಮಾಜದ ಸ್ಥಾಸ್ಥ್ಯ ಕೆಡಿಸುತ್ತಿವೆ~ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಕಿಡಿಕಾರಿದರು. <br /> <br /> ವಿಜಯನಗರ ವಿಪ್ರವೃಂದದ ಆಶ್ರಯದಲ್ಲಿ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ವಿಪ್ರ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. <br /> <br /> `ಬ್ರಾಹ್ಮಣ ಸಂಘಟನೆಗಳು ತಮ್ಮ ಚಟುವಟಿಕೆಯನ್ನು ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತ ಮಾಡಬಾರದು. ಜಾತ್ಯತೀತ ಮನೋಭಾವ ಬೆಳೆಸಿಕೊಂಡು ಸಂಕಷ್ಟದಲ್ಲಿರುವವವರ ನೋವಿಗೆ ಸ್ಪಂದಿಸಬೇಕು~ ಎಂದು ಅವರು ಕಿವಿಮಾತು ಹೇಳಿದರು. <br /> <br /> ಶಾಸಕ ದಿನೇಶ್ ಗುಂಡೂರಾವ್, ಇಸ್ಕಾನ್ನ ತಿರು ಪ್ರಭು, ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಬಿ.ಎನ್.ವಿ. ಸುಬ್ರಹ್ಮಣ್ಯ, ವಿಜಯನಗರ ವಿಪ್ರ ವೃಂದದ ಅಧ್ಯಕ್ಷ ಅಶ್ವತ್ಥನಾರಾಯಣ್ ಇದ್ದರು. ಸಮಾರೋಪದಲ್ಲಿ ಶಾಸಕ ಎಂ.ಕೃಷ್ಣಪ್ಪ, ಬೆಂಗಳೂರು ದೂರದರ್ಶನ ಕೇಂದ್ರದ ಉಪಮಹಾನಿರ್ದೇಶಕ ಮಹೇಶ್ ಜೋಷಿ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ಜಾತಿಗಳನ್ನು ವಿಭಜನೆ ಮಾಡಿ ಸಮಾಜದ ಸ್ಥಾಸ್ಥ್ಯ ಕೆಡಿಸುತ್ತಿವೆ~ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಕಿಡಿಕಾರಿದರು. <br /> <br /> ವಿಜಯನಗರ ವಿಪ್ರವೃಂದದ ಆಶ್ರಯದಲ್ಲಿ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ವಿಪ್ರ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. <br /> <br /> `ಬ್ರಾಹ್ಮಣ ಸಂಘಟನೆಗಳು ತಮ್ಮ ಚಟುವಟಿಕೆಯನ್ನು ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತ ಮಾಡಬಾರದು. ಜಾತ್ಯತೀತ ಮನೋಭಾವ ಬೆಳೆಸಿಕೊಂಡು ಸಂಕಷ್ಟದಲ್ಲಿರುವವವರ ನೋವಿಗೆ ಸ್ಪಂದಿಸಬೇಕು~ ಎಂದು ಅವರು ಕಿವಿಮಾತು ಹೇಳಿದರು. <br /> <br /> ಶಾಸಕ ದಿನೇಶ್ ಗುಂಡೂರಾವ್, ಇಸ್ಕಾನ್ನ ತಿರು ಪ್ರಭು, ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಬಿ.ಎನ್.ವಿ. ಸುಬ್ರಹ್ಮಣ್ಯ, ವಿಜಯನಗರ ವಿಪ್ರ ವೃಂದದ ಅಧ್ಯಕ್ಷ ಅಶ್ವತ್ಥನಾರಾಯಣ್ ಇದ್ದರು. ಸಮಾರೋಪದಲ್ಲಿ ಶಾಸಕ ಎಂ.ಕೃಷ್ಣಪ್ಪ, ಬೆಂಗಳೂರು ದೂರದರ್ಶನ ಕೇಂದ್ರದ ಉಪಮಹಾನಿರ್ದೇಶಕ ಮಹೇಶ್ ಜೋಷಿ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>