<p><span style="font-size: 26px;"><strong>ಕೃಷ್ಣರಾಜಪೇಟೆ :</strong> ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕು ರೈತ ಸಂಘದ ಕಾರ್ಯಕರ್ತರು ಬುಧವಾರ ಮಿನಿ ವಿಧಾನಸೌಧದ ಬಾಗಿಲಿಗೆ ಅಡ್ಡಲಾಗಿ ಕುಳಿತು, ಅಧಿಕಾರಿಗಳಿಗೆ ದಿಗ್ಭಂದನ ವಿಧಿಸಿ ದಿಢೀರ್ ಪ್ರತಿಭಟನೆ ನಡೆಸಿದರು.</span><br /> <br /> ರೈತರು ಮಾರಾಟ ಮಾಡಿರುವ ಭೂಮಿಗಳ ಖಾತೆ ಬದಲಾವಣೆ ಮಾಡುವುದು ಸೇರಿದಂತೆ ಹಲವಾರು ಕೆಲಸಗಳು ಬಾಕಿ ಉಳಿದಿವೆ. ರೈತರು ತಮ್ಮ ಭೂಮಿಯ ಪಹಣಿ ಪತ್ರವನ್ನು ಪಡೆದುಕೊಳ್ಳಲು ದಿನವಿಡೀ ಕಾಯಬೇಕಾದ ಪರಿಸ್ಥಿತಿಯಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.<br /> <br /> ರೈತಾಪಿ ವರ್ಗದವರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳು ನಿಗದಿತ ಸಮಯದಲ್ಲಿ ಆಗಬೇಕು ಈ ಕುರಿತು ತಾಲ್ಲೂಕು ದಂಡಾಧಿಕಾರಿಗಳು ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.<br /> <br /> ಪಟ್ಟಣ ಪೋಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ರಂಗಸ್ವಾಮಿ ಮಧ್ಯಸ್ಥಿಕೆಯಲ್ಲಿ, ಆಗಿರುವ ಲೋಪಗಳನ್ನು ಸರಿಪಡಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ತಹಶೀಲ್ದಾರ್ ಬಿ. ಅಹೋಬಲಯ್ಯ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಕೃಷ್ಣರಾಜಪೇಟೆ :</strong> ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕು ರೈತ ಸಂಘದ ಕಾರ್ಯಕರ್ತರು ಬುಧವಾರ ಮಿನಿ ವಿಧಾನಸೌಧದ ಬಾಗಿಲಿಗೆ ಅಡ್ಡಲಾಗಿ ಕುಳಿತು, ಅಧಿಕಾರಿಗಳಿಗೆ ದಿಗ್ಭಂದನ ವಿಧಿಸಿ ದಿಢೀರ್ ಪ್ರತಿಭಟನೆ ನಡೆಸಿದರು.</span><br /> <br /> ರೈತರು ಮಾರಾಟ ಮಾಡಿರುವ ಭೂಮಿಗಳ ಖಾತೆ ಬದಲಾವಣೆ ಮಾಡುವುದು ಸೇರಿದಂತೆ ಹಲವಾರು ಕೆಲಸಗಳು ಬಾಕಿ ಉಳಿದಿವೆ. ರೈತರು ತಮ್ಮ ಭೂಮಿಯ ಪಹಣಿ ಪತ್ರವನ್ನು ಪಡೆದುಕೊಳ್ಳಲು ದಿನವಿಡೀ ಕಾಯಬೇಕಾದ ಪರಿಸ್ಥಿತಿಯಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.<br /> <br /> ರೈತಾಪಿ ವರ್ಗದವರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳು ನಿಗದಿತ ಸಮಯದಲ್ಲಿ ಆಗಬೇಕು ಈ ಕುರಿತು ತಾಲ್ಲೂಕು ದಂಡಾಧಿಕಾರಿಗಳು ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.<br /> <br /> ಪಟ್ಟಣ ಪೋಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ರಂಗಸ್ವಾಮಿ ಮಧ್ಯಸ್ಥಿಕೆಯಲ್ಲಿ, ಆಗಿರುವ ಲೋಪಗಳನ್ನು ಸರಿಪಡಿಸಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದಾಗಿ ತಹಶೀಲ್ದಾರ್ ಬಿ. ಅಹೋಬಲಯ್ಯ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>