<p><strong>ತಿಪಟೂರು: </strong>ರೈತರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ರೂಪಿಸುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ಹಳ್ಳಿಗಳ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.<br /> <br /> ನಗರದ ಎಪಿಎಂಸಿ ಆವರಣದಲ್ಲಿ ಸೋಮವಾರ ನಡೆದ ರೈತರ ದಿನಾಚರಣೆಯಲ್ಲಿ ಮಾತನಾಡಿ, ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದೊಯ್ದು ರೈತರ ಮನೆ ಬಾಗಿಲಲ್ಲೇ ಪರಿಹರಿಸುವ ಪ್ರಯತ್ನ ನಡೆಯಲಿದೆ. ಫೆಬ್ರುವರಿಯಿಂದ ಈ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.<br /> <br /> ಎಪಿಎಂಸಿ ಅಧ್ಯಕ್ಷ ಮಾದಿಹಳ್ಳಿ ಪ್ರಕಾಶ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಸ್.ದೇವರಾಜ್, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಸುಜಿತ್, ವಿಷಯ ತಜ್ಞ ಡಾ.ಶ್ರೀನಿವಾಸ್, ತಾ.ಪಂ. ಮಾಜಿ ಅಧ್ಯಕ್ಷೆ ಪುಷ್ಪಾ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಎಸ್.ಸದಾಶಿವಯ್ಯ ಮಾತನಾಡಿದರು.<br /> <br /> ಜಿ.ಪಂ.ಸದಸ್ಯೆ ರಾಧಾ ನಾರಾಯಣಗೌಡ, ತಾ.ಪಂ.ಪ್ರಭಾರ ಅಧ್ಯಕ್ಷ ರಾಜು, ಎಪಿಎಂಸಿ ಉಪಾಧ್ಯಕ್ಷ ರಮೇಶ್, ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಸುರೇಶ್, ಕಾರ್ಯದರ್ಶಿ ನ್ಯಾಮಗೌಡ, ತಹಶೀಲ್ದಾರ್ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳು, ತಾ.ಪಂ. ಸದಸ್ಯರು ಇದ್ದರು.<br /> <br /> ರೈತರಾದ ಸದಾಶಿವಯ್ಯ, ಓಂಕಾರಪ್ಪ, ಹೇಮಣ್ಣ, ನೊಣವಿನಕೆರೆ ಸ್ವಾಮಿ, ಜಯದೇವಪ್ಪ ಅವರಿಗೆ ತಾಲ್ಲೂಕು ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ರೈತರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ರೂಪಿಸುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ಹಳ್ಳಿಗಳ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.<br /> <br /> ನಗರದ ಎಪಿಎಂಸಿ ಆವರಣದಲ್ಲಿ ಸೋಮವಾರ ನಡೆದ ರೈತರ ದಿನಾಚರಣೆಯಲ್ಲಿ ಮಾತನಾಡಿ, ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದೊಯ್ದು ರೈತರ ಮನೆ ಬಾಗಿಲಲ್ಲೇ ಪರಿಹರಿಸುವ ಪ್ರಯತ್ನ ನಡೆಯಲಿದೆ. ಫೆಬ್ರುವರಿಯಿಂದ ಈ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.<br /> <br /> ಎಪಿಎಂಸಿ ಅಧ್ಯಕ್ಷ ಮಾದಿಹಳ್ಳಿ ಪ್ರಕಾಶ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಸ್.ದೇವರಾಜ್, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಸುಜಿತ್, ವಿಷಯ ತಜ್ಞ ಡಾ.ಶ್ರೀನಿವಾಸ್, ತಾ.ಪಂ. ಮಾಜಿ ಅಧ್ಯಕ್ಷೆ ಪುಷ್ಪಾ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಎಸ್.ಸದಾಶಿವಯ್ಯ ಮಾತನಾಡಿದರು.<br /> <br /> ಜಿ.ಪಂ.ಸದಸ್ಯೆ ರಾಧಾ ನಾರಾಯಣಗೌಡ, ತಾ.ಪಂ.ಪ್ರಭಾರ ಅಧ್ಯಕ್ಷ ರಾಜು, ಎಪಿಎಂಸಿ ಉಪಾಧ್ಯಕ್ಷ ರಮೇಶ್, ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಸುರೇಶ್, ಕಾರ್ಯದರ್ಶಿ ನ್ಯಾಮಗೌಡ, ತಹಶೀಲ್ದಾರ್ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳು, ತಾ.ಪಂ. ಸದಸ್ಯರು ಇದ್ದರು.<br /> <br /> ರೈತರಾದ ಸದಾಶಿವಯ್ಯ, ಓಂಕಾರಪ್ಪ, ಹೇಮಣ್ಣ, ನೊಣವಿನಕೆರೆ ಸ್ವಾಮಿ, ಜಯದೇವಪ್ಪ ಅವರಿಗೆ ತಾಲ್ಲೂಕು ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>