<p><strong>ಬೆಂಗಳೂರು:</strong> ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಯಾವುದೇ ಕಾರಣಕ್ಕೂ ಸವಾರಿ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಂಗಳವಾರ ಇಲ್ಲಿ ಸೂಚಿಸಿದರು.<br /> <br /> ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.ಜನಪ್ರತಿನಿಧಿಗಳ ಕಿರುಕುಳದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. <br /> <br /> ಇದು ಒಂದು ರೀತಿ ಸರ್ಕಾರಕ್ಕೂ ಮುಜುಗರ. ಅಧಿಕಾರಿಗಳ ಜತೆ ಜಿಲ್ಲಾ ಪಂಚಾಯಿತಿ ಜನಪ್ರತಿನಿಧಿಗಳು ಸೌಜನ್ಯದಿಂದ ವರ್ತಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.<br /> <br /> ಇದಕ್ಕೂ ಮುನ್ನ ರಾಜ್ಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷ/ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಈರಪ್ಪ ಕಡಾಡಿ ಬೇಡಿಕೆಗಳ ಬಗ್ಗೆ ವಿವರಿಸಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಬೇಕು. ಅವರಿಗೆ ಉತ್ತಮ ಕಾರು ಮತ್ತು ಅದಕ್ಕೆ ಕೆಂಪು ದೀಪ ಅಳವಡಿಸಲು ಅವಕಾಶ ನೀಡಬೇಕು. <br /> <br /> ಗೌರವಧನ ಹೆಚ್ಚಿಸಬೇಕು. ಟೆಂಡರ್ ಇಲ್ಲದೆ ಐದು ಲಕ್ಷ ರೂಪಾಯಿವರೆಗೆ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.ಇದಕ್ಕೆ ಸ್ಪಂದಿಸಿದ ಸದಾನಂದ ಗೌಡ ಅವರು, ರಾಜ್ಯ ಸಚಿವರ ಸ್ಥಾನಮಾನ ನೀಡುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧರಿಸಲಾಗುವುದು. <br /> <br /> 3ನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆಯೂ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.ಪ್ರಕೃತಿ ವಿಕೋಪ ನಿಧಿಯನ್ನು ರೂ 1 ಲಕ್ಷದಿಂದ 50 ಲಕ್ಷಕ್ಕೆ ಏರಿಸಬೇಕು ಎಂಬ ಬೇಡಿಕೆ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯ ಇಲ್ಲ.ಮುಂದಿನ ದಿನಗಳಲ್ಲಿ ಈ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.<br /> ಟೆಂಡರ್ ಇಲ್ಲದೆ ಐದು ಲಕ್ಷ ರೂಪಾಯಿವರೆಗೆ ಕಾಮಗಾರಿ ಗುತ್ತಿಗೆ ನೀಡಲು ಒಪ್ಪಿಗೆ ಸೂಚಿಸಿದರು. ಗೌರವಧನ ಹೆಚ್ಚಳ ಮತ್ತು ಉತ್ತಮ ಕಾರು ನೀಡುವುದಕ್ಕೂ ಒಪ್ಪಿದರು.<br /> <br /> <strong>ಗುಂಡಿ ಇಲ್ಲದ ರಸ್ತೆ:</strong> ರಾಜ್ಯದ ರಸ್ತೆಗಳಲ್ಲಿನ ಗುಂಡಿಗಳನ್ನು ಎರಡು ತಿಂಗಳಲ್ಲಿ ಮುಚ್ಚಬೇಕು. ಈ ಕೆಲಸಕ್ಕೆ ತಕ್ಷಣ ಚಾಲನೆ ನೀಡಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಹಣಕಾಸಿನ ಕೊರತೆ ಇಲ್ಲ. ಎರಡು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಗುಣಮಟ್ಟದ ಕಡೆಗೂ ಗಮನ ಕೊಡಬೇಕು ಎಂದೂ ಸಲಹೆ ನೀಡಿದರು.<br /> <br /> ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮಿತಾ ಪ್ರಸಾದ್, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ.ಜೈರಾಜ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಯಾವುದೇ ಕಾರಣಕ್ಕೂ ಸವಾರಿ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಂಗಳವಾರ ಇಲ್ಲಿ ಸೂಚಿಸಿದರು.<br /> <br /> ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.ಜನಪ್ರತಿನಿಧಿಗಳ ಕಿರುಕುಳದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. <br /> <br /> ಇದು ಒಂದು ರೀತಿ ಸರ್ಕಾರಕ್ಕೂ ಮುಜುಗರ. ಅಧಿಕಾರಿಗಳ ಜತೆ ಜಿಲ್ಲಾ ಪಂಚಾಯಿತಿ ಜನಪ್ರತಿನಿಧಿಗಳು ಸೌಜನ್ಯದಿಂದ ವರ್ತಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.<br /> <br /> ಇದಕ್ಕೂ ಮುನ್ನ ರಾಜ್ಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷ/ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಈರಪ್ಪ ಕಡಾಡಿ ಬೇಡಿಕೆಗಳ ಬಗ್ಗೆ ವಿವರಿಸಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಬೇಕು. ಅವರಿಗೆ ಉತ್ತಮ ಕಾರು ಮತ್ತು ಅದಕ್ಕೆ ಕೆಂಪು ದೀಪ ಅಳವಡಿಸಲು ಅವಕಾಶ ನೀಡಬೇಕು. <br /> <br /> ಗೌರವಧನ ಹೆಚ್ಚಿಸಬೇಕು. ಟೆಂಡರ್ ಇಲ್ಲದೆ ಐದು ಲಕ್ಷ ರೂಪಾಯಿವರೆಗೆ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.ಇದಕ್ಕೆ ಸ್ಪಂದಿಸಿದ ಸದಾನಂದ ಗೌಡ ಅವರು, ರಾಜ್ಯ ಸಚಿವರ ಸ್ಥಾನಮಾನ ನೀಡುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧರಿಸಲಾಗುವುದು. <br /> <br /> 3ನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆಯೂ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.ಪ್ರಕೃತಿ ವಿಕೋಪ ನಿಧಿಯನ್ನು ರೂ 1 ಲಕ್ಷದಿಂದ 50 ಲಕ್ಷಕ್ಕೆ ಏರಿಸಬೇಕು ಎಂಬ ಬೇಡಿಕೆ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯ ಇಲ್ಲ.ಮುಂದಿನ ದಿನಗಳಲ್ಲಿ ಈ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.<br /> ಟೆಂಡರ್ ಇಲ್ಲದೆ ಐದು ಲಕ್ಷ ರೂಪಾಯಿವರೆಗೆ ಕಾಮಗಾರಿ ಗುತ್ತಿಗೆ ನೀಡಲು ಒಪ್ಪಿಗೆ ಸೂಚಿಸಿದರು. ಗೌರವಧನ ಹೆಚ್ಚಳ ಮತ್ತು ಉತ್ತಮ ಕಾರು ನೀಡುವುದಕ್ಕೂ ಒಪ್ಪಿದರು.<br /> <br /> <strong>ಗುಂಡಿ ಇಲ್ಲದ ರಸ್ತೆ:</strong> ರಾಜ್ಯದ ರಸ್ತೆಗಳಲ್ಲಿನ ಗುಂಡಿಗಳನ್ನು ಎರಡು ತಿಂಗಳಲ್ಲಿ ಮುಚ್ಚಬೇಕು. ಈ ಕೆಲಸಕ್ಕೆ ತಕ್ಷಣ ಚಾಲನೆ ನೀಡಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಹಣಕಾಸಿನ ಕೊರತೆ ಇಲ್ಲ. ಎರಡು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಗುಣಮಟ್ಟದ ಕಡೆಗೂ ಗಮನ ಕೊಡಬೇಕು ಎಂದೂ ಸಲಹೆ ನೀಡಿದರು.<br /> <br /> ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮಿತಾ ಪ್ರಸಾದ್, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ.ಜೈರಾಜ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>