<p><strong>ರಾಯಚೂರು:</strong> ಭೂಮಿ ವರ್ಗಾವಣೆ, ಪಡಿತರ ಚೀಟಿ, ಪಹಣಿ ವಿತರಣೆ ಮಾಡುವಲ್ಲಿ ವಿಳಂಬವಾಗುತ್ತಿದೆ. ಜನತೆಗೆ ಶೀಘ್ರವಾಗಿ ಸಿಗಬೇಕಾದ ಸೇವಾ ಸೌಲಭ್ಯ ದೊರಕುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.<br /> <br /> ತಾಲ್ಲೂಕು ಘಟಕ ಹಮ್ಮಿಕೊಂಡ ಧರಣಿಯಲ್ಲಿ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿಪಾಟೀಲ್ ಪಾಲ್ಗೊಂಡು ಜನತೆಗೆ ಆಗುತ್ತಿರುವ ತೊಂದೆರೆಯನ್ನು ಅಧಿಕಾರಿಗಳ ಗಮನಕ್ಕೆ ತಂದರು.<br /> <br /> ಕಂದಾಯ ಇಲಾಖೆಯಿಂದ ಪಹಣಿ ಪಡೆಯಲು ಒಂದು ವಾರ ನಾಡ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಮೀನು ಸರ್ವೆ ಹಾಗೂ ವರ್ಗಾವಣೆ ಮಾಡಲು ಮನವಿ ಸಲ್ಲಿಸಿದರೂ ವಿಳಂಬವಾಗುತ್ತಿವೆ ಎಂದು ವಿವರಿಸಿದರು.<br /> <br /> ಪಡಿತರ ಚೀಟಿದಾರರಿಗೆ ಗ್ರಾಮೀಣ ಪ್ರದೇಶದಲ್ಲಿ ಅಕ್ಕಿ, ಗೋಧಿ, ಸೀಮೆಎಣ್ಣೆಯನ್ನು ತಿಂಗಳಲ್ಲಿ ಒಂದು ಅಥವಾ ಎರಡು ದಿನ ಮಾತ್ರ ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿದೆ. ಕಡ್ಡಾಯವಾಗಿ 15 ದಿನ ವಿತರಣೆ ಮಾಡಬೇಕು. ಈ ಬಗ್ಗೆ ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು<br /> <br /> ಎಂದು ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಗರಾವ್ ಕುಲಕರ್ಣಿ, ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ ತಹಶೀಲ್ದಾರ್ಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ರಾಜ್ಯ ಘಟಕದ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಹಾಗೂ ಪದಾಧಿಕಾರಿಗಳಾದ ಬೂದಯ್ಯಸ್ವಾಮಿ, ಜಯಪ್ಪಸ್ವಾಮಿ, ಬಿ.ವೆಂಕಟೇಶ, ಕುರಬದೊಡ್ಡಿ ನರಸಪ್ಪ, ಎಸ್.ವೆಂಕಟೇಶ, ಜಿ.ಹುಲಿಗೆಪ್ಪ ಜಾಲಿಬೆಂಚಿ, ತಿಕ್ಕಯ್ಯ, ಮಾಸದೊಡ್ಡ ನಸರಣ್ಣ, ಭೂಪಯ್ಯಗೌಡ, ಮಲ್ಲೇಶ ಮಂಡಲಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಭೂಮಿ ವರ್ಗಾವಣೆ, ಪಡಿತರ ಚೀಟಿ, ಪಹಣಿ ವಿತರಣೆ ಮಾಡುವಲ್ಲಿ ವಿಳಂಬವಾಗುತ್ತಿದೆ. ಜನತೆಗೆ ಶೀಘ್ರವಾಗಿ ಸಿಗಬೇಕಾದ ಸೇವಾ ಸೌಲಭ್ಯ ದೊರಕುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.<br /> <br /> ತಾಲ್ಲೂಕು ಘಟಕ ಹಮ್ಮಿಕೊಂಡ ಧರಣಿಯಲ್ಲಿ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿಪಾಟೀಲ್ ಪಾಲ್ಗೊಂಡು ಜನತೆಗೆ ಆಗುತ್ತಿರುವ ತೊಂದೆರೆಯನ್ನು ಅಧಿಕಾರಿಗಳ ಗಮನಕ್ಕೆ ತಂದರು.<br /> <br /> ಕಂದಾಯ ಇಲಾಖೆಯಿಂದ ಪಹಣಿ ಪಡೆಯಲು ಒಂದು ವಾರ ನಾಡ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಮೀನು ಸರ್ವೆ ಹಾಗೂ ವರ್ಗಾವಣೆ ಮಾಡಲು ಮನವಿ ಸಲ್ಲಿಸಿದರೂ ವಿಳಂಬವಾಗುತ್ತಿವೆ ಎಂದು ವಿವರಿಸಿದರು.<br /> <br /> ಪಡಿತರ ಚೀಟಿದಾರರಿಗೆ ಗ್ರಾಮೀಣ ಪ್ರದೇಶದಲ್ಲಿ ಅಕ್ಕಿ, ಗೋಧಿ, ಸೀಮೆಎಣ್ಣೆಯನ್ನು ತಿಂಗಳಲ್ಲಿ ಒಂದು ಅಥವಾ ಎರಡು ದಿನ ಮಾತ್ರ ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿದೆ. ಕಡ್ಡಾಯವಾಗಿ 15 ದಿನ ವಿತರಣೆ ಮಾಡಬೇಕು. ಈ ಬಗ್ಗೆ ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು<br /> <br /> ಎಂದು ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಗರಾವ್ ಕುಲಕರ್ಣಿ, ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ ತಹಶೀಲ್ದಾರ್ಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ರಾಜ್ಯ ಘಟಕದ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಹಾಗೂ ಪದಾಧಿಕಾರಿಗಳಾದ ಬೂದಯ್ಯಸ್ವಾಮಿ, ಜಯಪ್ಪಸ್ವಾಮಿ, ಬಿ.ವೆಂಕಟೇಶ, ಕುರಬದೊಡ್ಡಿ ನರಸಪ್ಪ, ಎಸ್.ವೆಂಕಟೇಶ, ಜಿ.ಹುಲಿಗೆಪ್ಪ ಜಾಲಿಬೆಂಚಿ, ತಿಕ್ಕಯ್ಯ, ಮಾಸದೊಡ್ಡ ನಸರಣ್ಣ, ಭೂಪಯ್ಯಗೌಡ, ಮಲ್ಲೇಶ ಮಂಡಲಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>