<p><strong>ನವದೆಹಲಿ (ಪಿಟಿಐ):</strong> ಜನಲೋಕಪಾಲ ಮಸೂದೆ ಪರ ಹೋರಾಟವನ್ನು ತೀವ್ರಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇತರ ಪಕ್ಷಗಳ ಬೆಂಬಲವಿಲ್ಲದೆ ರಾಜ್ಯ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.<br /> <br /> ‘ವಿವಾದಾತ್ಮಕ ಮಸೂದೆಗೆ ಅಂಗೀಕಾರ ದೊರೆಯದಿದ್ದರೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಹಕ್ಕಿಲ್ಲ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.<br /> <br /> ‘ದೇಶದಿಂದ ಭ್ರಷ್ಟಾಚಾರವನ್ನು ನಿರ್ಮೂಲನಗೊಳಿಸಲು ನೂರು ಬಾರಿ ಬೇಕಿದ್ದರೂ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸುತ್ತೇನೆ. ಜನ ಲೋಕಪಾಲ ಮತ್ತು ಸ್ವರಾಜ್ಯ ಮಸೂದೆ ಅಂಗೀಕಾರವಾಗದಿದ್ದರೆ ಸರ್ಕಾರ ಉರುಳಲಿದೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.<br /> <br /> ಆಮ್ ಆದ್ಮಿ ಪಕ್ಷ ಚುನಾವಣೆಯ ಸಂದರ್ಭದಲ್ಲಿ ನೀಡಿದ ಪ್ರಮುಖ ಭರವಸೆಗಳಲ್ಲಿ ಜನ ಲೋಕಪಾಲ ಮಸೂದೆ ಅಂಗೀಕಾರ ಕೂಡ ಒಂದು. ಮಸೂದೆಯನ್ನು ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ವಿರೋಧಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಜನಲೋಕಪಾಲ ಮಸೂದೆ ಪರ ಹೋರಾಟವನ್ನು ತೀವ್ರಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇತರ ಪಕ್ಷಗಳ ಬೆಂಬಲವಿಲ್ಲದೆ ರಾಜ್ಯ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.<br /> <br /> ‘ವಿವಾದಾತ್ಮಕ ಮಸೂದೆಗೆ ಅಂಗೀಕಾರ ದೊರೆಯದಿದ್ದರೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಹಕ್ಕಿಲ್ಲ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.<br /> <br /> ‘ದೇಶದಿಂದ ಭ್ರಷ್ಟಾಚಾರವನ್ನು ನಿರ್ಮೂಲನಗೊಳಿಸಲು ನೂರು ಬಾರಿ ಬೇಕಿದ್ದರೂ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸುತ್ತೇನೆ. ಜನ ಲೋಕಪಾಲ ಮತ್ತು ಸ್ವರಾಜ್ಯ ಮಸೂದೆ ಅಂಗೀಕಾರವಾಗದಿದ್ದರೆ ಸರ್ಕಾರ ಉರುಳಲಿದೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.<br /> <br /> ಆಮ್ ಆದ್ಮಿ ಪಕ್ಷ ಚುನಾವಣೆಯ ಸಂದರ್ಭದಲ್ಲಿ ನೀಡಿದ ಪ್ರಮುಖ ಭರವಸೆಗಳಲ್ಲಿ ಜನ ಲೋಕಪಾಲ ಮಸೂದೆ ಅಂಗೀಕಾರ ಕೂಡ ಒಂದು. ಮಸೂದೆಯನ್ನು ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ ವಿರೋಧಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>