<p><strong>ಗದಗ:</strong> ವಿದ್ಯಾರ್ಥಿಗಳು ಪಠ್ಯ ವಿಷಯದೊಂದಿಗೆ ಹೊಸ ಆವಿಷ್ಕಾರ, ಪ್ರಚಲಿತ ವಿದ್ಯಮಾನಗಳ ಕುರಿತು ಅರಿತುಕೊಳ್ಳಬೇಕು ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಸಂಗಮೇಶ ದುಂದೂರ ಸಲಹೆ ನೀಡಿದರು. <br /> <br /> ಸ್ಥಳೀಯ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಪ್ರಸಕ್ತ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ವಾಣಿಜ್ಯ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಆಸಕ್ತಿ ತೋರಬೇಕು. ವಿದ್ಯಾರ್ಥಿ ದೆಸೆಯಲ್ಲಿ ಕಠಿಣ ಪ್ರರಿಶ್ರಮ ಹಾಗೂ ಬದ್ಧತೆಗಳ ಜೊತೆಗೆ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಗುರಿ ಸಾಧನೆಗಾಗಿ ಸತತ ಅಧ್ಯಯನಶೀಲರಾಗಬೇಕು ಎಂದು ಹೇಳಿದರು.<br /> <br /> ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಿ.ಆರ್. ಕುಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಪ್ರೊ. ಐ.ವಿ. ಬೆಳ್ಳಿಕಟ್ಟಿ, ವಿ.ಎಲ್. ಚಳ್ಳಮರದ ಮತ್ತಿತರರು ಹಾಜರಿದ್ದರು. <br /> <br /> ಡಾ. ಎಂ.ಎಲ್. ಗುಳೇದಗುಡ್ಡ ಸ್ವಾಗತಿಸಿದರು. ರೇಶ್ಮಾ ಹುಬ್ಬಳ್ಳಿ, ಕುಶಾಲ ಹುಂಡಿಯಾ ಹಾಗೂ ಶ್ರೀಕಾಂತ ಐಲಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಎಂ. ಬೆಳಗಾಂವ ವಂದಿಸಿದರು. <br /> <br /> <strong>ಡಿ.ಇಡಿ ಫಲಿತಾಂಶ<br /> ನರೇಗಲ್:</strong> ಸ್ಥಳೀಯ ಎಸ್.ಆರ್. ಪಾಟೀಲ ಡಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಒಟ್ಟು ಫಲಿತಾಂಶ ಶೇಕಡಾ 100ರಷ್ಟಾಗಿದೆ. <br /> ಮೈಲಾರಪ್ಪ ಅಳವಂಡಿ (ಶೇ. 87.09) ಕಾಲೇಜಿಗೆ ಪ್ರಥಮ, ವೀರೇಶ ಹಿರೇಮಠ (ಶೇ. 86.04) ದ್ವಿತೀಯ ಹಾಗೂ ಸುವರ್ಣಾ ದೇಸಾಯಿ (ಶೇ. 85.81) ತೃತೀಯ ಸ್ಥಾನ ಪಡೆದಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ವಿದ್ಯಾರ್ಥಿಗಳು ಪಠ್ಯ ವಿಷಯದೊಂದಿಗೆ ಹೊಸ ಆವಿಷ್ಕಾರ, ಪ್ರಚಲಿತ ವಿದ್ಯಮಾನಗಳ ಕುರಿತು ಅರಿತುಕೊಳ್ಳಬೇಕು ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಸಂಗಮೇಶ ದುಂದೂರ ಸಲಹೆ ನೀಡಿದರು. <br /> <br /> ಸ್ಥಳೀಯ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಪ್ರಸಕ್ತ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ವಾಣಿಜ್ಯ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಆಸಕ್ತಿ ತೋರಬೇಕು. ವಿದ್ಯಾರ್ಥಿ ದೆಸೆಯಲ್ಲಿ ಕಠಿಣ ಪ್ರರಿಶ್ರಮ ಹಾಗೂ ಬದ್ಧತೆಗಳ ಜೊತೆಗೆ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಗುರಿ ಸಾಧನೆಗಾಗಿ ಸತತ ಅಧ್ಯಯನಶೀಲರಾಗಬೇಕು ಎಂದು ಹೇಳಿದರು.<br /> <br /> ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಿ.ಆರ್. ಕುಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಪ್ರೊ. ಐ.ವಿ. ಬೆಳ್ಳಿಕಟ್ಟಿ, ವಿ.ಎಲ್. ಚಳ್ಳಮರದ ಮತ್ತಿತರರು ಹಾಜರಿದ್ದರು. <br /> <br /> ಡಾ. ಎಂ.ಎಲ್. ಗುಳೇದಗುಡ್ಡ ಸ್ವಾಗತಿಸಿದರು. ರೇಶ್ಮಾ ಹುಬ್ಬಳ್ಳಿ, ಕುಶಾಲ ಹುಂಡಿಯಾ ಹಾಗೂ ಶ್ರೀಕಾಂತ ಐಲಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಎಂ. ಬೆಳಗಾಂವ ವಂದಿಸಿದರು. <br /> <br /> <strong>ಡಿ.ಇಡಿ ಫಲಿತಾಂಶ<br /> ನರೇಗಲ್:</strong> ಸ್ಥಳೀಯ ಎಸ್.ಆರ್. ಪಾಟೀಲ ಡಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ಒಟ್ಟು ಫಲಿತಾಂಶ ಶೇಕಡಾ 100ರಷ್ಟಾಗಿದೆ. <br /> ಮೈಲಾರಪ್ಪ ಅಳವಂಡಿ (ಶೇ. 87.09) ಕಾಲೇಜಿಗೆ ಪ್ರಥಮ, ವೀರೇಶ ಹಿರೇಮಠ (ಶೇ. 86.04) ದ್ವಿತೀಯ ಹಾಗೂ ಸುವರ್ಣಾ ದೇಸಾಯಿ (ಶೇ. 85.81) ತೃತೀಯ ಸ್ಥಾನ ಪಡೆದಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>