<p><strong>ನೆಲಮಂಗಲ:</strong> `ಗ್ರಂಥಾಲಯಗಳು ಆಧುನಿಕ ದೇವಾಲಯಗಳಿದ್ದಂತೆ. ವಿದ್ಯಾರ್ಥಿಗಳಲ್ಲಿ ಅಧ್ಯಯನಾಸಕ್ತಿಯನ್ನು ಮೂಡಿಸಲು ಪ್ರಾಥಮಿಕ ಶಾಲೆಗಳಲ್ಲಿಯೂ ಗ್ರಂಥಾಲಯಗಳನ್ನು ತೆರೆಯಲಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳುವ ಪೂರಕ ವಾತಾವರಣ ಸೃಷ್ಟಿಸಬೇಕು~ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಮಂಜುನಾಥ್ ಹೇಳಿದರು.<br /> <br /> ತಾಲ್ಲೂಕಿನ ಬೂದಿಹಾಲ್ನ ಮಾಚೋನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮುದಾಯದತ್ತ ಶಾಲೆ, ಗ್ರಂಥಾಲಯ ಉದ್ಘಾಟನೆ, ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಮತ್ತು ಹಿರಿಯ ಸಾಧಕ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್, `ನಿವೃತ್ತ ಮುಖ್ಯ ಶಿಕ್ಷಕ ಟಿ.ಗಂಗರಾಜು ಅವರನ್ನು ಗ್ರಾಮದ ವತಿಯಿಂದ ಸನ್ಮಾನಿಸುತ್ತಿರುವುದು ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ಸಾಕ್ಷಿ~ ಎಂದರು.<br /> ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಡಿ.ಎಚ್. ನಾಗರಾಜು, `ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ ಎನ್ನುವುದಕ್ಕೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳಲ್ಲಿರುವುದೇ ಸಾಕ್ಷಿ~ ಎಂದರು.<br /> ಎಸ್ಡಿಎಂಸಿ ಮಾಜಿ ಅಧ್ಯಕ್ಷ ಆರ್.ಅಶ್ವತ್ಥಪ್ಪ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. <br /> <br /> ಮುಖ್ಯ ಶಿಕ್ಷಕ ಎಂ.ಆರ್.ಮಲ್ಲಿಕಾರ್ಜುನ್, `ಮುಂದಿನ ಶೈಕ್ಷಣಿಕ ವರ್ಷದಿಂದ ದಾಖಲಾಗುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ತಲಾ 1000 ರೂಪಾಯಿಗಳ ಪ್ರೋತ್ಸಾಹ ಧನ ಕೊಡಿಸಲಾಗುವುದು~ ಎಂದರು.<br /> <br /> ಬರದಿ ಮಂಡಿಗೆರೆ ಶಾಲೆಯ ಮುಖ್ಯ ಶಿಕ್ಷಕಿಯಾದ ಸಿ.ಎಸ್.ಇಂದಿರಾ, ಸಂಯೋಜನಾಧಿಕಾರಿಗಳಾದ ರೇಣುಕಾಸ್ವಾಮಿ, ಮರುಳಸಿದ್ದಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರಾಮಲಕ್ಷ್ಮಮ್ಮ ಪುರುಷೋತ್ತಮ್, ಎಸ್ಡಿಎಂಸಿ ಅಧ್ಯಕ್ಷೆ ಆರ್.ಜಲಜಾಕ್ಷಿ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> `ಗ್ರಂಥಾಲಯಗಳು ಆಧುನಿಕ ದೇವಾಲಯಗಳಿದ್ದಂತೆ. ವಿದ್ಯಾರ್ಥಿಗಳಲ್ಲಿ ಅಧ್ಯಯನಾಸಕ್ತಿಯನ್ನು ಮೂಡಿಸಲು ಪ್ರಾಥಮಿಕ ಶಾಲೆಗಳಲ್ಲಿಯೂ ಗ್ರಂಥಾಲಯಗಳನ್ನು ತೆರೆಯಲಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳುವ ಪೂರಕ ವಾತಾವರಣ ಸೃಷ್ಟಿಸಬೇಕು~ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಮಂಜುನಾಥ್ ಹೇಳಿದರು.<br /> <br /> ತಾಲ್ಲೂಕಿನ ಬೂದಿಹಾಲ್ನ ಮಾಚೋನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮುದಾಯದತ್ತ ಶಾಲೆ, ಗ್ರಂಥಾಲಯ ಉದ್ಘಾಟನೆ, ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಮತ್ತು ಹಿರಿಯ ಸಾಧಕ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್, `ನಿವೃತ್ತ ಮುಖ್ಯ ಶಿಕ್ಷಕ ಟಿ.ಗಂಗರಾಜು ಅವರನ್ನು ಗ್ರಾಮದ ವತಿಯಿಂದ ಸನ್ಮಾನಿಸುತ್ತಿರುವುದು ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ಸಾಕ್ಷಿ~ ಎಂದರು.<br /> ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಡಿ.ಎಚ್. ನಾಗರಾಜು, `ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ ಎನ್ನುವುದಕ್ಕೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳಲ್ಲಿರುವುದೇ ಸಾಕ್ಷಿ~ ಎಂದರು.<br /> ಎಸ್ಡಿಎಂಸಿ ಮಾಜಿ ಅಧ್ಯಕ್ಷ ಆರ್.ಅಶ್ವತ್ಥಪ್ಪ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. <br /> <br /> ಮುಖ್ಯ ಶಿಕ್ಷಕ ಎಂ.ಆರ್.ಮಲ್ಲಿಕಾರ್ಜುನ್, `ಮುಂದಿನ ಶೈಕ್ಷಣಿಕ ವರ್ಷದಿಂದ ದಾಖಲಾಗುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ತಲಾ 1000 ರೂಪಾಯಿಗಳ ಪ್ರೋತ್ಸಾಹ ಧನ ಕೊಡಿಸಲಾಗುವುದು~ ಎಂದರು.<br /> <br /> ಬರದಿ ಮಂಡಿಗೆರೆ ಶಾಲೆಯ ಮುಖ್ಯ ಶಿಕ್ಷಕಿಯಾದ ಸಿ.ಎಸ್.ಇಂದಿರಾ, ಸಂಯೋಜನಾಧಿಕಾರಿಗಳಾದ ರೇಣುಕಾಸ್ವಾಮಿ, ಮರುಳಸಿದ್ದಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರಾಮಲಕ್ಷ್ಮಮ್ಮ ಪುರುಷೋತ್ತಮ್, ಎಸ್ಡಿಎಂಸಿ ಅಧ್ಯಕ್ಷೆ ಆರ್.ಜಲಜಾಕ್ಷಿ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>