<p><strong>ಮೈಸೂರು:</strong> ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅಧ್ಯಯನ ಪೀಠಗಳಿಗೂ ಸರ್ಕಾರ ಸಮಾನ ಅನುದಾನ ಹಾಗೂ ಸ್ಥಾನಮಾನ ನೀಡಬೇಕು ಎಂದು ಮೈಸೂರು ವಿ.ವಿ ಕುವೆಂಪು ಅಧ್ಯಯನ ಕೇಂದ್ರದ ಬಸವ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.<br /> <br /> ರಂಗಾಯಣದ ಶ್ರೀರಂಗ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಾಗೂ ರಂಗಾಯಣದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ವಚನ ಸಾಹಿತ್ಯ ಮತ್ತು ಮೂಢನಂಬಿಕೆಯ ಪ್ರಶ್ನೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಗಣ್ಯರ ಹೆಸರಿನಲ್ಲಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಅಧ್ಯಯನ ಪೀಠಗಳಿವೆ. ಆದರೆ, ಅನುದಾನ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಕೆಲವು ಪೀಠಗಳಿಗೆ ₨ 10 ಲಕ್ಷ ನೀಡಿದರೆ, ಬಲಾಢ್ಯರ ಪೀಠಗಳಿಗೆ ಕೋಟಿಗಟ್ಟಲೆ ಅನುದಾನ ದಕ್ಕುತ್ತದೆ. ಅಲ್ಲದೇ, ಅವರ ಹೆಸರಿನಲ್ಲಿ ಹೆಚ್ಚು ಪೀಠಗಳೂ ಸ್ಥಾಪನೆಯಾಗುತ್ತವೆ. ಈ ತಾರತಮ್ಯವನ್ನು ಸರ್ಕಾರ ನಿಲ್ಲಿಸಬೇಕು. ಕಡಿಮೆ ಅನುದಾನದ ಬಡ್ಡಿಯಲ್ಲಿ ಪೀಠವನ್ನು ಮುನ್ನಡೆಸುವುದು ಕಷ್ಟ ಎಂದರು.<br /> <br /> ದೇವಸ್ಥಾನಗಳಿಗೆ ಹೋಗಬಾರದು ಎಂದು ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಹೇಳಿಲ್ಲ. ಕಾಯ್ದೆಯಲ್ಲಿ ಪಟ್ಟಿ ಮಾಡಿರುವ ಕೆಲವು ಆಚರಣೆಗಳನ್ನು ಮೌಢ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ, ಇದನ್ನು ಕಂದಾಚಾರ ಪ್ರತಿಬಂಧಕ ಕಾಯ್ದೆ ಎಂಬ ಹೆಸರಿನಿಂದ ಕರೆಯುವುದು ಸೂಕ್ತ. ಆಗ ಬಹುತೇಕ ಗೊಂದಲಗಳು ನಿವಾರಣೆಯಾಗುತ್ತವೆ ಎಂದರು. <br /> <br /> ರಂಗಾಯಣದ ನಿರ್ದೇಶಕ ಎಚ್. ಜನಾರ್ದನ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಂ.ಎನ್. ತಳವಾರ<br /> ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅಧ್ಯಯನ ಪೀಠಗಳಿಗೂ ಸರ್ಕಾರ ಸಮಾನ ಅನುದಾನ ಹಾಗೂ ಸ್ಥಾನಮಾನ ನೀಡಬೇಕು ಎಂದು ಮೈಸೂರು ವಿ.ವಿ ಕುವೆಂಪು ಅಧ್ಯಯನ ಕೇಂದ್ರದ ಬಸವ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.<br /> <br /> ರಂಗಾಯಣದ ಶ್ರೀರಂಗ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಾಗೂ ರಂಗಾಯಣದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ‘ವಚನ ಸಾಹಿತ್ಯ ಮತ್ತು ಮೂಢನಂಬಿಕೆಯ ಪ್ರಶ್ನೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಗಣ್ಯರ ಹೆಸರಿನಲ್ಲಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಅಧ್ಯಯನ ಪೀಠಗಳಿವೆ. ಆದರೆ, ಅನುದಾನ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಕೆಲವು ಪೀಠಗಳಿಗೆ ₨ 10 ಲಕ್ಷ ನೀಡಿದರೆ, ಬಲಾಢ್ಯರ ಪೀಠಗಳಿಗೆ ಕೋಟಿಗಟ್ಟಲೆ ಅನುದಾನ ದಕ್ಕುತ್ತದೆ. ಅಲ್ಲದೇ, ಅವರ ಹೆಸರಿನಲ್ಲಿ ಹೆಚ್ಚು ಪೀಠಗಳೂ ಸ್ಥಾಪನೆಯಾಗುತ್ತವೆ. ಈ ತಾರತಮ್ಯವನ್ನು ಸರ್ಕಾರ ನಿಲ್ಲಿಸಬೇಕು. ಕಡಿಮೆ ಅನುದಾನದ ಬಡ್ಡಿಯಲ್ಲಿ ಪೀಠವನ್ನು ಮುನ್ನಡೆಸುವುದು ಕಷ್ಟ ಎಂದರು.<br /> <br /> ದೇವಸ್ಥಾನಗಳಿಗೆ ಹೋಗಬಾರದು ಎಂದು ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಹೇಳಿಲ್ಲ. ಕಾಯ್ದೆಯಲ್ಲಿ ಪಟ್ಟಿ ಮಾಡಿರುವ ಕೆಲವು ಆಚರಣೆಗಳನ್ನು ಮೌಢ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ, ಇದನ್ನು ಕಂದಾಚಾರ ಪ್ರತಿಬಂಧಕ ಕಾಯ್ದೆ ಎಂಬ ಹೆಸರಿನಿಂದ ಕರೆಯುವುದು ಸೂಕ್ತ. ಆಗ ಬಹುತೇಕ ಗೊಂದಲಗಳು ನಿವಾರಣೆಯಾಗುತ್ತವೆ ಎಂದರು. <br /> <br /> ರಂಗಾಯಣದ ನಿರ್ದೇಶಕ ಎಚ್. ಜನಾರ್ದನ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಂ.ಎನ್. ತಳವಾರ<br /> ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>