<p><strong>ನವದೆಹಲಿ (ಐಎಎನ್ಎಸ್): </strong> ಕೇರಳದ ಅನಂತಪದ್ಮನಾಭ ದೇವಸ್ಥಾನದ ನೆಲಮಾಳಿಗೆಯ `ಬಿ~ ಕೋಣೆಯನ್ನು ಸದ್ಯಕ್ಕೆ ತೆರೆಯದಿರುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.<br /> <br /> ಈಗಾಗಲೇ ಇತರ ಕೋಣೆಗಳಿಂದ ವಶ ಪಡಿಸಿಕೊಂಡಿರುವ ಆಭರಣಗಳ ರಕ್ಷಣೆ ಹಾಗೂ ಸಂರಕ್ಷಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಂಡ ನಂತರ `ಬಿ~ ಕೋಣೆ ತೆರೆಯಬೇಕೇ ಬೇಡವೆ ಎನ್ನುವ ಕುರಿತು ಪರಿಶೀಲಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಆರ್.ವಿ.ರವೀಂದ್ರನ್ ಮತ್ತು ಎ.ಕೆ.ಪಟ್ನಾಯಕ್ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.<br /> <br /> ದೇವಸ್ಥಾನದ ಇತರ ಕೋಣೆಗಳಿಂದ ಈಗಾಗಲೇ ಶೋಧಿಸಿರುವ ಆಭರಣಗಳ ಸುರಕ್ಷತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ಮಾಡಿದ ಶಿಫಾರಸುಗಳನ್ನು ಕುರಿತು ಪೀಠ ಆದೇಶವನ್ನು ಕಾಯ್ದಿರಿಸಿತು.<br /> <br /> ಮುಂದಿನ ಆದೇಶವನ್ನು ಬುಧವಾರ ಪ್ರಕಟಿಸಲಾಗುವುದು ಎಂದು ಹೇಳಿದ ರವೀಂದ್ರನ್, ದೇವಸ್ಥಾನದ ಸಂಪ್ರದಾಯ ಮತ್ತು ಭಕ್ತರ ನಂಬಿಕೆಯನ್ನು ಮಾನ್ಯ ಮಾಡಲಾಗುವುದು ಎಂದೂ ಹೇಳಿದರು.<br /> <br /> ದೇವಸ್ಥಾನದ ಸಂಪ್ರದಾಯ, ಭಕ್ತರ ನಂಬಿಕೆ ಹಾಗೂ ದೇವಸ್ಥಾನದ ಖಜಾನೆ ಭದ್ರತೆ ಕುರಿತಂತೆ ಒಮ್ಮತಾಭಿಪ್ರಾಯಕ್ಕೆ ಸದ್ಯದ ಪರಿಸ್ಥಿತಿ ಧಕ್ಕೆ ಉಂಟು ಮಾಡಿದೆ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong> ಕೇರಳದ ಅನಂತಪದ್ಮನಾಭ ದೇವಸ್ಥಾನದ ನೆಲಮಾಳಿಗೆಯ `ಬಿ~ ಕೋಣೆಯನ್ನು ಸದ್ಯಕ್ಕೆ ತೆರೆಯದಿರುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.<br /> <br /> ಈಗಾಗಲೇ ಇತರ ಕೋಣೆಗಳಿಂದ ವಶ ಪಡಿಸಿಕೊಂಡಿರುವ ಆಭರಣಗಳ ರಕ್ಷಣೆ ಹಾಗೂ ಸಂರಕ್ಷಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಂಡ ನಂತರ `ಬಿ~ ಕೋಣೆ ತೆರೆಯಬೇಕೇ ಬೇಡವೆ ಎನ್ನುವ ಕುರಿತು ಪರಿಶೀಲಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಆರ್.ವಿ.ರವೀಂದ್ರನ್ ಮತ್ತು ಎ.ಕೆ.ಪಟ್ನಾಯಕ್ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.<br /> <br /> ದೇವಸ್ಥಾನದ ಇತರ ಕೋಣೆಗಳಿಂದ ಈಗಾಗಲೇ ಶೋಧಿಸಿರುವ ಆಭರಣಗಳ ಸುರಕ್ಷತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ಮಾಡಿದ ಶಿಫಾರಸುಗಳನ್ನು ಕುರಿತು ಪೀಠ ಆದೇಶವನ್ನು ಕಾಯ್ದಿರಿಸಿತು.<br /> <br /> ಮುಂದಿನ ಆದೇಶವನ್ನು ಬುಧವಾರ ಪ್ರಕಟಿಸಲಾಗುವುದು ಎಂದು ಹೇಳಿದ ರವೀಂದ್ರನ್, ದೇವಸ್ಥಾನದ ಸಂಪ್ರದಾಯ ಮತ್ತು ಭಕ್ತರ ನಂಬಿಕೆಯನ್ನು ಮಾನ್ಯ ಮಾಡಲಾಗುವುದು ಎಂದೂ ಹೇಳಿದರು.<br /> <br /> ದೇವಸ್ಥಾನದ ಸಂಪ್ರದಾಯ, ಭಕ್ತರ ನಂಬಿಕೆ ಹಾಗೂ ದೇವಸ್ಥಾನದ ಖಜಾನೆ ಭದ್ರತೆ ಕುರಿತಂತೆ ಒಮ್ಮತಾಭಿಪ್ರಾಯಕ್ಕೆ ಸದ್ಯದ ಪರಿಸ್ಥಿತಿ ಧಕ್ಕೆ ಉಂಟು ಮಾಡಿದೆ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>