<p><strong>ದಾವಣಗೆರೆ: </strong> ಕರಾವಳಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಅನಧಿಕೃತ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಘಟಕ ಒತ್ತಾಯಿಸಿದೆ.</p>.<p>ಮಂಗಳೂರಿನಲ್ಲಿ ಈಚೆಗೆ ನಡೆದ ದಾಳಿಯಲ್ಲಿ ಅನವಶ್ಯಕವಾಗಿ ವೇದಿಕೆಯ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದನ್ನು ವೇದಿಕೆ ಖಂಡಿಸುತ್ತದೆ. ಇಂತಹ ಘಟನೆಗಳು ಮರುಕಳುಹಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ವೇದಿಕೆಯ ಪ್ರಾಂತ ಕಾರ್ಯದರ್ಶಿ ದೀಪಕ್ ರಾನಡೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಅನಧಿಕೃತ ರೆಸಾರ್ಟ್, ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಡ್ರಗ್ಸ್ ಹಾಗೂ ಸೆಕ್ಸ್ ಮಾಫಿಯಾ ನಡೆಯುತ್ತಿದ್ದು, ಅದನ್ನು ಪೊಲೀಸರು ಬಗ್ಗುಬಡಿಯಬೇಕು. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಮಾದಕ ದ್ರವ್ಯ ವ್ಯಸನಕ್ಕೆ ಎಳೆಯುವ ಪಬ್, ಲೈವ್ಬ್ಯಾಂಡ್, ಡಿಸ್ಕೋ ಥೆಕ್ಗಳನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಅಂತರರಾಜ್ಯ ಕ್ರಿಮಿನಲ್ಗಳು ಹಾಗೂ ಭೂಗತ ಮಾಫಿಯಾ ದೊರೆಗಳು ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸಿ, ಇಂತಹ ರೆಸಾರ್ಟ್, ಹೋಂ ಸ್ಟೇಗಳನ್ನು ಅಡಗುತಾಣ ಇಲ್ಲವೇ ಮೋಜಿನ ತಾಣಗಳನ್ನಾಗಿಸಿಕೊಂಡಿರುತ್ತಾರೆ. ಇಂಥ ರೆಸಾರ್ಟ್, ಹೋಂ ಸ್ಟೇಗಳ ಮೇಲೆ ಕಡಿವಾಣ ಹಾಕಬೇಕು ಎಂದರು.<br /> ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಸತೀಶ ಪೂಜಾರಿ, ಜಿಲ್ಲಾ ಸಹ ಸಂಚಾಲಕ ಮೃತ್ಯುಂಜಯ, ಪದಾಧಿಕಾರಿಗಳಾದ ಮಂಜುನಾಥ, ಶಿವಾಜಿ, ಡಿ.ವಿ. ಪ್ರಶಾಂತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong> ಕರಾವಳಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಅನಧಿಕೃತ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಘಟಕ ಒತ್ತಾಯಿಸಿದೆ.</p>.<p>ಮಂಗಳೂರಿನಲ್ಲಿ ಈಚೆಗೆ ನಡೆದ ದಾಳಿಯಲ್ಲಿ ಅನವಶ್ಯಕವಾಗಿ ವೇದಿಕೆಯ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದನ್ನು ವೇದಿಕೆ ಖಂಡಿಸುತ್ತದೆ. ಇಂತಹ ಘಟನೆಗಳು ಮರುಕಳುಹಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ವೇದಿಕೆಯ ಪ್ರಾಂತ ಕಾರ್ಯದರ್ಶಿ ದೀಪಕ್ ರಾನಡೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಅನಧಿಕೃತ ರೆಸಾರ್ಟ್, ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಡ್ರಗ್ಸ್ ಹಾಗೂ ಸೆಕ್ಸ್ ಮಾಫಿಯಾ ನಡೆಯುತ್ತಿದ್ದು, ಅದನ್ನು ಪೊಲೀಸರು ಬಗ್ಗುಬಡಿಯಬೇಕು. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಮಾದಕ ದ್ರವ್ಯ ವ್ಯಸನಕ್ಕೆ ಎಳೆಯುವ ಪಬ್, ಲೈವ್ಬ್ಯಾಂಡ್, ಡಿಸ್ಕೋ ಥೆಕ್ಗಳನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಅಂತರರಾಜ್ಯ ಕ್ರಿಮಿನಲ್ಗಳು ಹಾಗೂ ಭೂಗತ ಮಾಫಿಯಾ ದೊರೆಗಳು ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸಿ, ಇಂತಹ ರೆಸಾರ್ಟ್, ಹೋಂ ಸ್ಟೇಗಳನ್ನು ಅಡಗುತಾಣ ಇಲ್ಲವೇ ಮೋಜಿನ ತಾಣಗಳನ್ನಾಗಿಸಿಕೊಂಡಿರುತ್ತಾರೆ. ಇಂಥ ರೆಸಾರ್ಟ್, ಹೋಂ ಸ್ಟೇಗಳ ಮೇಲೆ ಕಡಿವಾಣ ಹಾಕಬೇಕು ಎಂದರು.<br /> ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಸತೀಶ ಪೂಜಾರಿ, ಜಿಲ್ಲಾ ಸಹ ಸಂಚಾಲಕ ಮೃತ್ಯುಂಜಯ, ಪದಾಧಿಕಾರಿಗಳಾದ ಮಂಜುನಾಥ, ಶಿವಾಜಿ, ಡಿ.ವಿ. ಪ್ರಶಾಂತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>