<p>ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಕಳೆದ ಒಂಬತ್ತು ತಿಂಗಳಿಂದ ಔಷಧಿ ಪೂರೈಕೆಯಾಗಿಲ್ಲ ಎಂಬ ಸಂಗತಿ ಆರೋಗ್ಯ ಇಲಾಖೆಯ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. <br /> <br /> ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲಿ ಇಲಾಖೆ ತನ್ನ ಆಸ್ಪತ್ರೆಗಳಿಗೆ ಬೇಕಾದ ಔಷಧಿಗಳನ್ನು ಟೆಂಡರ್ ಮೂಲಕ ಖರೀದಿಸುತ್ತದೆ. ಪ್ರಸಕ್ತ ಹಣಕಾಸು ವರ್ಷ ಮುಗಿಯಲು ಇನ್ನು ಎರಡೂವರೆ ತಿಂಗಳಷ್ಟೇ ಉಳಿದಿದೆ, ಆದರೆ, ಇದುವರೆಗೂ ಔಷಧಿ ಖರೀದಿಗೆ ಟೆಂಡರ್ ನಡೆದಿಲ್ಲವೆಂದರೆ ಈ ಲೋಪಕ್ಕೆ ಆರೋಗ್ಯ ಇಲಾಖೆಯೇ ಕಾರಣ.<br /> <br /> ಆರೋಗ್ಯ ಸಚಿವ ರಾಮದಾಸ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು. ಭ್ರಷ್ಟಾಚಾರದ ಹಗರಣಗಳು ಹಾಗೂ ಗುಂಪುಗಾರಿಕೆಯಲ್ಲೇ ಕಾಲಹರಣ ಮಾಡುತ್ತಿರುವ ಸರ್ಕಾರ, ರೋಗಿಗಳ ಬಗ್ಗೆ ತಾಳಿರುವ ಇಂಥ ನಿರ್ಲಕ್ಷ್ಯದ ಧೋರಣೆ ಅಮಾನವೀಯ ಮಾತ್ರವಲ್ಲ, ಖಂಡನೀಯ. <br /> <br /> ಆಸ್ಪತ್ರೆಗಳಲ್ಲಿ ಔಷಧಿಯೇ ಇಲ್ಲ ಎಂದಾದರೆ ಸಾವಿರಾರು ವೈದ್ಯರು, ನರ್ಸುಗಳು ಹಾಗೂ ಇತರ ಸಿಬ್ಬಂದಿಯ ಅಗತ್ಯವೇನಿದೆ? ರೋಗಿಗಳೇ ಹೊರಗಿನಿಂದ ಔಷಧಿ ಖರೀದಿಸಿ ತಂದು ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ಸರ್ಕಾರಕ್ಕೆ ಗೌರವ ತರುವುದಿಲ್ಲ.<br /> <br /> ಔಷಧಗಳ ಖರೀದಿಗೆ ಸರ್ಕಾರ ಮೀಸಲಿಟ್ಟ ಹಣ ಏನಾಯಿತು? ಮುಖ್ಯಮಂತ್ರಿ ಸದಾನಂದ ಗೌಡರಿಂದ ಹಿಡಿದು ಎಲ್ಲ ಸಚಿವರೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವ ಪರಿಸ್ಥಿತಿ ಬೇರೆಯೇ ಇದೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ಈ ಲೋಪಗಳಿಗೆ ಸಚಿವ ರಾಮದಾಸ್ ಅವರೇ ಹೊಣೆ. <br /> <br /> ಕೇಂದ್ರ ಸರ್ಕಾರದ ನೆರವಿನ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯ ಅಡಿಯಲ್ಲಿ ರಾಜ್ಯದ ಹಿಂದುಳಿದ ತಾಲ್ಲೂಕುಗಳಲ್ಲಿ ದೇಶಿ ವೈದ್ಯಕೀಯ ಪದ್ಧತಿಯಲ್ಲಿ ಜನರಿಗೆ ಚಿಕಿತ್ಸೆ ನೀಡಲು ನೇಮಕಗೊಂಡಿರುವ 551 ಆಯುಷ್ ವೈದ್ಯರಿಗೂ ಕಳೆದ ಹದಿನಾಲ್ಕು ತಿಂಗಳಿಂದ ಔಷಧಿ ಪೂರೈಕೆಯಾಗಿಲ್ಲ.<br /> <br /> ಸಾವಿರಾರು ಬಡ ರೋಗಿಗಳಿಗೆ ಔಷಧೋಪಚಾರ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಬಿಡುಗಡೆ ಮಾಡಿಸುವ ವಿಷಯದಲ್ಲಿಯೂ ಆರೋಗ್ಯ ಸಚಿವರು ಆಸಕ್ತಿ ತೋರಿಸಿಲ್ಲ. ಅವರು ತಮ್ಮ ಜವಾಬ್ದಾರಿ ನಿರ್ವಹಿಸುವ ವಿಷಯದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.<br /> <br /> ಟೆಂಡರ್ ನಡೆದಿಲ್ಲ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆಯಾಗಿಲ್ಲ ಎಂಬ ಸಬೂಬುಗಳನ್ನು ಹೇಳುತ್ತ ಹೀಗೆ ಕಾಲಹರಣ ಮಾಡುವುದು ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ಎಸಗುವ ದ್ರೋಹ. ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸದ ಸಚಿವರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. <br /> <br /> ಒಂದೋ, ಸಚಿವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಇಲ್ಲವಾದರೆ ಕೆಲಸ ಮಾಡುವವರಿಗೆ ಸ್ಥಾನ ಬಿಟ್ಟು ಕೊಡಬೇಕು. ಆರೋಗ್ಯ ಇಲಾಖೆಯಂಥ ಪ್ರಮುಖ ಖಾತೆ ಹೀಗೆ ನಿಷ್ಕ್ರಿಯವಾಗುವುದನ್ನು ಮುಖ್ಯಮಂತ್ರಿಯವರು ಸುಮ್ಮನೆ ನೋಡಲಾಗದು. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಬೇಕು.<br /> <br /> ತಕ್ಷಣವೇ ಆಸ್ಪತ್ರೆಗಳಿಗೆ ಔಷಧಿ ಪೂರೈಸಬೇಕು. ಔಷಧ ಖರೀದಿ ವಿಳಂಬಕ್ಕೆ ಏನು ಕಾರಣ ಎಂಬುದರ ಬಗ್ಗೆ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಕಳೆದ ಒಂಬತ್ತು ತಿಂಗಳಿಂದ ಔಷಧಿ ಪೂರೈಕೆಯಾಗಿಲ್ಲ ಎಂಬ ಸಂಗತಿ ಆರೋಗ್ಯ ಇಲಾಖೆಯ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. <br /> <br /> ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲಿ ಇಲಾಖೆ ತನ್ನ ಆಸ್ಪತ್ರೆಗಳಿಗೆ ಬೇಕಾದ ಔಷಧಿಗಳನ್ನು ಟೆಂಡರ್ ಮೂಲಕ ಖರೀದಿಸುತ್ತದೆ. ಪ್ರಸಕ್ತ ಹಣಕಾಸು ವರ್ಷ ಮುಗಿಯಲು ಇನ್ನು ಎರಡೂವರೆ ತಿಂಗಳಷ್ಟೇ ಉಳಿದಿದೆ, ಆದರೆ, ಇದುವರೆಗೂ ಔಷಧಿ ಖರೀದಿಗೆ ಟೆಂಡರ್ ನಡೆದಿಲ್ಲವೆಂದರೆ ಈ ಲೋಪಕ್ಕೆ ಆರೋಗ್ಯ ಇಲಾಖೆಯೇ ಕಾರಣ.<br /> <br /> ಆರೋಗ್ಯ ಸಚಿವ ರಾಮದಾಸ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು. ಭ್ರಷ್ಟಾಚಾರದ ಹಗರಣಗಳು ಹಾಗೂ ಗುಂಪುಗಾರಿಕೆಯಲ್ಲೇ ಕಾಲಹರಣ ಮಾಡುತ್ತಿರುವ ಸರ್ಕಾರ, ರೋಗಿಗಳ ಬಗ್ಗೆ ತಾಳಿರುವ ಇಂಥ ನಿರ್ಲಕ್ಷ್ಯದ ಧೋರಣೆ ಅಮಾನವೀಯ ಮಾತ್ರವಲ್ಲ, ಖಂಡನೀಯ. <br /> <br /> ಆಸ್ಪತ್ರೆಗಳಲ್ಲಿ ಔಷಧಿಯೇ ಇಲ್ಲ ಎಂದಾದರೆ ಸಾವಿರಾರು ವೈದ್ಯರು, ನರ್ಸುಗಳು ಹಾಗೂ ಇತರ ಸಿಬ್ಬಂದಿಯ ಅಗತ್ಯವೇನಿದೆ? ರೋಗಿಗಳೇ ಹೊರಗಿನಿಂದ ಔಷಧಿ ಖರೀದಿಸಿ ತಂದು ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ಸರ್ಕಾರಕ್ಕೆ ಗೌರವ ತರುವುದಿಲ್ಲ.<br /> <br /> ಔಷಧಗಳ ಖರೀದಿಗೆ ಸರ್ಕಾರ ಮೀಸಲಿಟ್ಟ ಹಣ ಏನಾಯಿತು? ಮುಖ್ಯಮಂತ್ರಿ ಸದಾನಂದ ಗೌಡರಿಂದ ಹಿಡಿದು ಎಲ್ಲ ಸಚಿವರೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವ ಪರಿಸ್ಥಿತಿ ಬೇರೆಯೇ ಇದೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ಈ ಲೋಪಗಳಿಗೆ ಸಚಿವ ರಾಮದಾಸ್ ಅವರೇ ಹೊಣೆ. <br /> <br /> ಕೇಂದ್ರ ಸರ್ಕಾರದ ನೆರವಿನ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯ ಅಡಿಯಲ್ಲಿ ರಾಜ್ಯದ ಹಿಂದುಳಿದ ತಾಲ್ಲೂಕುಗಳಲ್ಲಿ ದೇಶಿ ವೈದ್ಯಕೀಯ ಪದ್ಧತಿಯಲ್ಲಿ ಜನರಿಗೆ ಚಿಕಿತ್ಸೆ ನೀಡಲು ನೇಮಕಗೊಂಡಿರುವ 551 ಆಯುಷ್ ವೈದ್ಯರಿಗೂ ಕಳೆದ ಹದಿನಾಲ್ಕು ತಿಂಗಳಿಂದ ಔಷಧಿ ಪೂರೈಕೆಯಾಗಿಲ್ಲ.<br /> <br /> ಸಾವಿರಾರು ಬಡ ರೋಗಿಗಳಿಗೆ ಔಷಧೋಪಚಾರ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಬಿಡುಗಡೆ ಮಾಡಿಸುವ ವಿಷಯದಲ್ಲಿಯೂ ಆರೋಗ್ಯ ಸಚಿವರು ಆಸಕ್ತಿ ತೋರಿಸಿಲ್ಲ. ಅವರು ತಮ್ಮ ಜವಾಬ್ದಾರಿ ನಿರ್ವಹಿಸುವ ವಿಷಯದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.<br /> <br /> ಟೆಂಡರ್ ನಡೆದಿಲ್ಲ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆಯಾಗಿಲ್ಲ ಎಂಬ ಸಬೂಬುಗಳನ್ನು ಹೇಳುತ್ತ ಹೀಗೆ ಕಾಲಹರಣ ಮಾಡುವುದು ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ಎಸಗುವ ದ್ರೋಹ. ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸದ ಸಚಿವರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. <br /> <br /> ಒಂದೋ, ಸಚಿವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಇಲ್ಲವಾದರೆ ಕೆಲಸ ಮಾಡುವವರಿಗೆ ಸ್ಥಾನ ಬಿಟ್ಟು ಕೊಡಬೇಕು. ಆರೋಗ್ಯ ಇಲಾಖೆಯಂಥ ಪ್ರಮುಖ ಖಾತೆ ಹೀಗೆ ನಿಷ್ಕ್ರಿಯವಾಗುವುದನ್ನು ಮುಖ್ಯಮಂತ್ರಿಯವರು ಸುಮ್ಮನೆ ನೋಡಲಾಗದು. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಬೇಕು.<br /> <br /> ತಕ್ಷಣವೇ ಆಸ್ಪತ್ರೆಗಳಿಗೆ ಔಷಧಿ ಪೂರೈಸಬೇಕು. ಔಷಧ ಖರೀದಿ ವಿಳಂಬಕ್ಕೆ ಏನು ಕಾರಣ ಎಂಬುದರ ಬಗ್ಗೆ ತನಿಖೆ ನಡೆಸಿ ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>