<p><strong>ಶಿರಾ:</strong> ಗೊಲ್ಲರ ಹಟ್ಟಿಗಳಲ್ಲಿ ಪರಿಶಿಷ್ಟ ಜನರನ್ನು ಬಿಟ್ಟುಕೊಳ್ಳದ ಪದ್ಧತಿ ಇದ್ದು, ಇದನ್ನು ಕೊನೆಗಾಣಿಸಬೇಕು ಎಂದು ಮಾಜಿ ಸಚಿವ ಎ.ಕೃಷ್ಣಪ್ಪ ಅಭಿಪ್ರಾಯ ಪಟ್ಟರು.<br /> <br /> ತಾಲ್ಲೂಕಿನ ಬರಗೂರಿನಲ್ಲಿ ಭಾನುವಾರ ನಡೆದ ಹುಲಿಕುಂಟೆ ಹೋಬಳಿ ಮಟ್ಟದ ಯಾದವ ಜನಾಂಗದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮೂಢ ನಂಬಿಕೆಗಳಿಂದ ಯಾದವ ಸಮಾಜದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಮೊದಲು ಯಾದವ ಸಮಾಜದ ಮಹಿಳೆಯರು ವಿದ್ಯಾವಂತರಾಗಬೇಕು ಎಂದರು.<br /> <br /> ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಮಾಜಿ ಸಚಿವ ಬಿ.ಸತ್ಯನಾರಾಯಣ ಮಾತ ನಾಡಿ, ಸರ್ಕಾರ ಹಿಂದುಳಿದ ವರ್ಗಗಳ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಇದನ್ನು ಅರಿತು ಯಾದವ ಸಮಾಜ ಎಚ್ಚೆತ್ತು ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.<br /> <br /> ಯಾದವ ಮಹಾ ಸಂಸ್ಥಾನದ ಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಯಾದವರ ಜನಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಪರಸ್ಪರ ಕಾಲೆಳೆಯುವ ಪ್ರವೃತ್ತಿಯಿಂದ ಯಾವುದೇ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲು ಆಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಕೆ.ಬಡೀರಣ್ಣ, ವಿಶಾಲಕ್ಷಮ್ಮ, ಸಿ.ಆರ್.ಉಮೇಶ್, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಶ್ರೀನಿವಾಸಬಾಬು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ನಾಗಭೂಷಣ್, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜೇಶ್, ಪಿಎಸ್ಐ ಎಫ್.ಕೆ.ನದಾಫ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಣ್ಣ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಗೊಲ್ಲರ ಹಟ್ಟಿಗಳಲ್ಲಿ ಪರಿಶಿಷ್ಟ ಜನರನ್ನು ಬಿಟ್ಟುಕೊಳ್ಳದ ಪದ್ಧತಿ ಇದ್ದು, ಇದನ್ನು ಕೊನೆಗಾಣಿಸಬೇಕು ಎಂದು ಮಾಜಿ ಸಚಿವ ಎ.ಕೃಷ್ಣಪ್ಪ ಅಭಿಪ್ರಾಯ ಪಟ್ಟರು.<br /> <br /> ತಾಲ್ಲೂಕಿನ ಬರಗೂರಿನಲ್ಲಿ ಭಾನುವಾರ ನಡೆದ ಹುಲಿಕುಂಟೆ ಹೋಬಳಿ ಮಟ್ಟದ ಯಾದವ ಜನಾಂಗದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮೂಢ ನಂಬಿಕೆಗಳಿಂದ ಯಾದವ ಸಮಾಜದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಮೊದಲು ಯಾದವ ಸಮಾಜದ ಮಹಿಳೆಯರು ವಿದ್ಯಾವಂತರಾಗಬೇಕು ಎಂದರು.<br /> <br /> ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಮಾಜಿ ಸಚಿವ ಬಿ.ಸತ್ಯನಾರಾಯಣ ಮಾತ ನಾಡಿ, ಸರ್ಕಾರ ಹಿಂದುಳಿದ ವರ್ಗಗಳ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಇದನ್ನು ಅರಿತು ಯಾದವ ಸಮಾಜ ಎಚ್ಚೆತ್ತು ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.<br /> <br /> ಯಾದವ ಮಹಾ ಸಂಸ್ಥಾನದ ಕೃಷ್ಣ ಯಾದವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಯಾದವರ ಜನಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಪರಸ್ಪರ ಕಾಲೆಳೆಯುವ ಪ್ರವೃತ್ತಿಯಿಂದ ಯಾವುದೇ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲು ಆಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಕೆ.ಬಡೀರಣ್ಣ, ವಿಶಾಲಕ್ಷಮ್ಮ, ಸಿ.ಆರ್.ಉಮೇಶ್, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಶ್ರೀನಿವಾಸಬಾಬು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ನಾಗಭೂಷಣ್, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜೇಶ್, ಪಿಎಸ್ಐ ಎಫ್.ಕೆ.ನದಾಫ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಣ್ಣ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>