<p><strong>ಬೆಂಗಳೂರು:</strong> ಮುಖ್ಯಮಂತ್ರಿ ಹುದ್ದೆ ಇನ್ನೇನು ಕೈಜಾರಲಿದೆ ಎನ್ನುವ ಹಂತದಲ್ಲಿ ಜತೆಯಲ್ಲಿದ್ದ ತಮ್ಮ ಆಪ್ತ ಸಚಿವರು ಮತ್ತು ಶಾಸಕರಿಗೆ ಡಿ.ವಿ.ಸದಾನಂದ ಗೌಡ ಅವರು ಗುರುವಾರ ರಾತ್ರಿ `ಅನುಗ್ರಹ~ದಲ್ಲಿ ಔತಣ ಕೂಟ ಆಯೋಜಿಸಿದ್ದರು.<br /> <br /> ಸಚಿವರಾದ ಗೋವಿಂದ ಕಾರಜೋಳ, ಬಾಲಚಂದ್ರ ಜಾರಕಿಹೊಳಿ, ಬಿ.ಎನ್.ಬಚ್ಚೇಗೌಡ, ಸಿ.ಪಿ.ಯೋಗೇಶ್ವರ್, ವರ್ತೂರು ಪ್ರಕಾಶ್, ಅಪ್ಪಚ್ಚು ರಂಜನ್, ಎಸ್.ಎ.ರವೀಂದ್ರನಾಥ್, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ 35ಕ್ಕೂ ಹೆಚ್ಚು ಶಾಸಕರು ಔತಣಕೂಟದಲ್ಲಿ ಭಾಗವಹಿಸಿದ್ದರು.<br /> <br /> ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಬೇಳೂರು ಗೋಪಾಲಕೃಷ್ಣ ಅವರು ಸದಾನಂದಗೌಡರು ಆಯೋಜಿಸಿದ್ದ ಔತಣ ಕೂಟದಲ್ಲಿ ಕಾಣಿಸಿಕೊಂಡಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಸಿಟ್ಟಾಗಿರುವ ಅವರು ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸುವ ಮೂಲಕ ಭಿನ್ನಮತೀಯ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.<br /> <br /> ಗೌಡರ ಜತೆ ಇದ್ದ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಸ್.ಸುರೇಶಕುಮಾರ್, ಸೊಗಡು ಶಿವಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಎಸ್.ಎ.ರಾಮದಾಸ್ ಸೇರಿದಂತೆ ಇನ್ನೂ ಕೆಲವರು ಔತಣ ಕೂಟಕ್ಕೆ ಗೈರುಹಾಜರಾಗಿದ್ದರು ಎನ್ನಲಾಗಿದೆ. `ಊಟಕ್ಕೆ ಸೇರಿದ್ದು ಬಿಟ್ಟರೆ ಯಾವುದೇ ರಾಜಕೀಯ ಚರ್ಚಿಸಲಿಲ್ಲ~ ಎಂದು ಸಚಿವರೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಹುದ್ದೆ ಇನ್ನೇನು ಕೈಜಾರಲಿದೆ ಎನ್ನುವ ಹಂತದಲ್ಲಿ ಜತೆಯಲ್ಲಿದ್ದ ತಮ್ಮ ಆಪ್ತ ಸಚಿವರು ಮತ್ತು ಶಾಸಕರಿಗೆ ಡಿ.ವಿ.ಸದಾನಂದ ಗೌಡ ಅವರು ಗುರುವಾರ ರಾತ್ರಿ `ಅನುಗ್ರಹ~ದಲ್ಲಿ ಔತಣ ಕೂಟ ಆಯೋಜಿಸಿದ್ದರು.<br /> <br /> ಸಚಿವರಾದ ಗೋವಿಂದ ಕಾರಜೋಳ, ಬಾಲಚಂದ್ರ ಜಾರಕಿಹೊಳಿ, ಬಿ.ಎನ್.ಬಚ್ಚೇಗೌಡ, ಸಿ.ಪಿ.ಯೋಗೇಶ್ವರ್, ವರ್ತೂರು ಪ್ರಕಾಶ್, ಅಪ್ಪಚ್ಚು ರಂಜನ್, ಎಸ್.ಎ.ರವೀಂದ್ರನಾಥ್, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ 35ಕ್ಕೂ ಹೆಚ್ಚು ಶಾಸಕರು ಔತಣಕೂಟದಲ್ಲಿ ಭಾಗವಹಿಸಿದ್ದರು.<br /> <br /> ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಬೇಳೂರು ಗೋಪಾಲಕೃಷ್ಣ ಅವರು ಸದಾನಂದಗೌಡರು ಆಯೋಜಿಸಿದ್ದ ಔತಣ ಕೂಟದಲ್ಲಿ ಕಾಣಿಸಿಕೊಂಡಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಸಿಟ್ಟಾಗಿರುವ ಅವರು ಕರುಣಾಕರ ರೆಡ್ಡಿ ನೇತೃತ್ವದಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸುವ ಮೂಲಕ ಭಿನ್ನಮತೀಯ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.<br /> <br /> ಗೌಡರ ಜತೆ ಇದ್ದ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಸ್.ಸುರೇಶಕುಮಾರ್, ಸೊಗಡು ಶಿವಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಎಸ್.ಎ.ರಾಮದಾಸ್ ಸೇರಿದಂತೆ ಇನ್ನೂ ಕೆಲವರು ಔತಣ ಕೂಟಕ್ಕೆ ಗೈರುಹಾಜರಾಗಿದ್ದರು ಎನ್ನಲಾಗಿದೆ. `ಊಟಕ್ಕೆ ಸೇರಿದ್ದು ಬಿಟ್ಟರೆ ಯಾವುದೇ ರಾಜಕೀಯ ಚರ್ಚಿಸಲಿಲ್ಲ~ ಎಂದು ಸಚಿವರೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>