<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿವಿಧ ಯೋಜನೆಗಳ ಅನುದಾನದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.<br /> <br /> ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯುತ್ತಿದ್ದಾಗ ವಸತಿ ಯೋಜನೆಗಳ ವಂಚಿತರು ಹಾಗೂ ಸಾರ್ವಜನಿಕರು ಪಂಚಾಯಿತಿಗೆ ಮುತ್ತಿಗೆ ಘೋಷಣೆ ಕೂಗಿದರು.<br /> <br /> ಅಭಿವೃದ್ಧಿ ಅಧಿಕಾರಿ ನಾಗರಾಜರಾವ್ ಕೇಂದ್ರ ಸರ್ಕಾರದ ಐದು ಲಕ್ಷ, 12, 13ನೇ ಹಣಕಾಸು ಯೋಜನೆಯ 20 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.<br /> <br /> ದಲಿತರಿಗೆ ಮಂಜೂರಾಗಿದ್ದ ವಸತಿಗಳನ್ನು ಇತರರಿಗೆ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಮತ್ತು ಕಾರ್ಯದರ್ಶಿಗಳನ್ನು ಕರೆಸಿಕೊಂಡು ಚೆಕ್ಕುಗಳಿಗೆ ಸಹಿ ಮಾಡಿಸಿಕೊಂಡು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ದೂರಿದರು.<br /> <br /> ಪ್ರತಿಭಟನೆಯಲ್ಲಿ ಗ್ರಾ.ಪಂ.ಸದಸ್ಯ ರಾಮಚಂದ್ರಪ್ಪ, ವಿ.ಶೈಲಜಾ ಮಂಜುನಾಥ್, ಉಮಾದೇವಿ, ಮಾಜಿ ಅಧ್ಯಕ್ಷ ಕೃಷ್ಣಪ್ಪ, ಮಾಜಿ ಸದಸ್ಯ ಜಾಫರ್ ಹಾಗೂ ಕೈವಾರ ಗ್ರಾಮ ಪಂಚಾಯಿತಿ ಎದುರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಕೈವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿವಿಧ ಯೋಜನೆಗಳ ಅನುದಾನದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.<br /> <br /> ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯುತ್ತಿದ್ದಾಗ ವಸತಿ ಯೋಜನೆಗಳ ವಂಚಿತರು ಹಾಗೂ ಸಾರ್ವಜನಿಕರು ಪಂಚಾಯಿತಿಗೆ ಮುತ್ತಿಗೆ ಘೋಷಣೆ ಕೂಗಿದರು.<br /> <br /> ಅಭಿವೃದ್ಧಿ ಅಧಿಕಾರಿ ನಾಗರಾಜರಾವ್ ಕೇಂದ್ರ ಸರ್ಕಾರದ ಐದು ಲಕ್ಷ, 12, 13ನೇ ಹಣಕಾಸು ಯೋಜನೆಯ 20 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.<br /> <br /> ದಲಿತರಿಗೆ ಮಂಜೂರಾಗಿದ್ದ ವಸತಿಗಳನ್ನು ಇತರರಿಗೆ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಮತ್ತು ಕಾರ್ಯದರ್ಶಿಗಳನ್ನು ಕರೆಸಿಕೊಂಡು ಚೆಕ್ಕುಗಳಿಗೆ ಸಹಿ ಮಾಡಿಸಿಕೊಂಡು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ದೂರಿದರು.<br /> <br /> ಪ್ರತಿಭಟನೆಯಲ್ಲಿ ಗ್ರಾ.ಪಂ.ಸದಸ್ಯ ರಾಮಚಂದ್ರಪ್ಪ, ವಿ.ಶೈಲಜಾ ಮಂಜುನಾಥ್, ಉಮಾದೇವಿ, ಮಾಜಿ ಅಧ್ಯಕ್ಷ ಕೃಷ್ಣಪ್ಪ, ಮಾಜಿ ಸದಸ್ಯ ಜಾಫರ್ ಹಾಗೂ ಕೈವಾರ ಗ್ರಾಮ ಪಂಚಾಯಿತಿ ಎದುರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>