<p><strong>ಬೀದರ್:</strong> ರಸ್ತೆಯ ತುಂಬಾ ತಗ್ಗು ದಿನ್ನೆಗಳು, ವರ್ಷಗಳು ಕಳೆದರೂ ದುರಸ್ತಿಯ ಭಾಗ್ಯವಿಲ್ಲ; ಚರಂಡಿ ಸೌಲಭ್ಯವೂ ಇಲ್ಲ. ಮಳೆ ಬಂದರೆ ರಸ್ತೆಯೇ ಕೆರೆ. ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ತೀರ ಪರದಾಟ.<br /> ಇದು, ನಗರದ ಹೃದಯ ಭಾಗದಲ್ಲಿರುವ ಗಾಂಧಿಗಂಜ್ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿನ ರಸ್ತೆಯ ದುಃಸ್ಥಿತಿ. <br /> <br /> ಇಲ್ಲಿ ಕೆಲ ರಸ್ತೆಗಳು ಎಪಿಎಂಸಿ ವ್ಯಾಪ್ತಿಗೆ ಬರುತ್ತವೆ; ಇನ್ನೂ ಕೆಲವು ನಗರಸಭೆಯ ವ್ಯಾಪ್ತಿಗೆ ಬರುತ್ತವೆ. ಎರಡೂ ಸಂಸ್ಥೆಗಳು ಸಮಾನವಾಗಿ ಮೌನ ವಹಿಸಿದ ಪರಿಣಾಮ ಸಾರ್ವಜನಿಕರೂ ನಿತ್ಯವೂ ಸಮಸ್ಯೆ ಎದುರಿಸಬೇಕಾಗಿದೆ.<br /> <br /> ವ್ಯಾಪಾರ, ವಹಿವಾಟಿಗಾಗಿ ನಿತ್ಯ ನೂರಾರು ಸಂಖ್ಯೆಯಲ್ಲಿ ಲಾರಿ, ಆಟೋ, ಟಂಟಂ, ಟೆಂಪೊ, ದ್ವಿಚಕ್ರ ವಾಹನಗಳು ಸಂಚರಿಸಲಿವೆ. ರಸ್ತೆಯ ಡಾಂಬರೀಕರಣ ಕಿತ್ತು ಹೋಗಿದ್ದು, ತಗ್ಗುಗಳು ನಿರ್ಮಾಣವಾಗಿವೆ. ಮಳೆ ನೀರು ಹರಿದುಹೋಗುವ ವ್ಯವಸ್ಥೆ ಇಲ್ಲದ್ದರಿಂದ ರಸ್ತೆ ತುಂಬಾ ಕೆಸರು ನಿರ್ಮಾಣವಾಗುತ್ತದೆ. ಪಾದಚಾರಿಗಳಿಗೂ ಕಷ್ಟವಾಗಲಿದೆ.<br /> <br /> ರಸ್ತೆಯ ಡಾಂಬರೀಕರಣ ಹಾಳಾಗಿ ಅನೇಕ ವರ್ಷಗಳೇ ಕಳೆದಿವೇ ಆದರೂ, ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ದೂರು ಸ್ಥಳೀಯ ವ್ಯಾಪಾರಿ ಶಾಂತಕುಮಾರ ಸೇರಿದಂತೆ ಹಲವರದು. <br /> <br /> <strong>ಅನುದಾನವಿಲ್ಲ: </strong>ಈ ರಸ್ತೆಗಳ ಅಭಿವೃದ್ಧಿಗೆ ಅನುದಾನದ ಬಂದಿಲ್ಲ. 20 ಕೋಟಿ ಅನುದಾನ ಕೋರಿ ಕೃಷಿ ಮಾರುಕಟ್ಟೆಯ ನಿರ್ದೇಶಕರಿಗೆ ಮನವಿ ಮಾಡಿದ್ದೇವೆ. ಬಂದ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಲಿದ್ದೇವೆ ಎನ್ನುತ್ತಾರೆ ಎಪಿಎಂಸಿ ಅಧ್ಯಕ್ಷ ಶಾಂತಕುಮಾರ ಪನಸಾಲೆ.<br /> <br /> ಗಾಂಧಿಗಂಜ್ನ ಕೆಲವು ರಸ್ತೆಗಳು ಬೀದರ್ ಕೃಷಿ ಮಾರುಕಟ್ಟೆ ಸಮಿತಿ ಅಡಿಯಲ್ಲಿ ಬಂದರೆ, ಇನ್ನೂ ಕೆಲ ರಸ್ತೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರುತ್ತವೆ. ಎಂಪಿಎಂಸಿ ಅಡಿಯಲ್ಲಿ ಬರುವ ರಸ್ತೆಗಳನ್ನು ಸಿ.ಸಿ. ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಉದ್ದೇಶವಿದೆ ಎಂದು ಪ್ರತಿಕ್ರಿಯಿಸಿದರು.<br /> <br /> ಸದಸ್ಯಕ್ಕೆ ರಸ್ತೆಯು ತೀರಾ ಹದಗೆಟ್ಟಿರುವ ಕಾರಣ ತಗ್ಗುದಿನ್ನೆಗಳನ್ನು ಮುಚ್ಚಲು ಒತ್ತು ನೀಡಲಾಗಿದೆ. ಈ ಕಾಮಗಾರಿಯೂ ಒಂದು ವಾರದೊಳಗೆ ಆರಂಭಿಸಲಾಗುತ್ತದೆ ಎಂದು ವಿವರಿಸಿದರು. ಹೈದರಾಬಾದ್ ರಸ್ತೆಯಲ್ಲಿನ ಹಣ್ಣು, ತರಕಾರಿ ಮಾರುಕಟ್ಟೆ ಒಂದೆರೆಡು ತಿಂಗಳಲ್ಲಿ ಆರಂಭವಾಗಲಿದೆ. ಆ ಬಾಡಿಗೆ ಮೊತ್ತವನ್ನು ಇದಕ್ಕೆ ಬಳಸಲಾಗುವುದು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ರಸ್ತೆಯ ತುಂಬಾ ತಗ್ಗು ದಿನ್ನೆಗಳು, ವರ್ಷಗಳು ಕಳೆದರೂ ದುರಸ್ತಿಯ ಭಾಗ್ಯವಿಲ್ಲ; ಚರಂಡಿ ಸೌಲಭ್ಯವೂ ಇಲ್ಲ. ಮಳೆ ಬಂದರೆ ರಸ್ತೆಯೇ ಕೆರೆ. ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ತೀರ ಪರದಾಟ.<br /> ಇದು, ನಗರದ ಹೃದಯ ಭಾಗದಲ್ಲಿರುವ ಗಾಂಧಿಗಂಜ್ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿನ ರಸ್ತೆಯ ದುಃಸ್ಥಿತಿ. <br /> <br /> ಇಲ್ಲಿ ಕೆಲ ರಸ್ತೆಗಳು ಎಪಿಎಂಸಿ ವ್ಯಾಪ್ತಿಗೆ ಬರುತ್ತವೆ; ಇನ್ನೂ ಕೆಲವು ನಗರಸಭೆಯ ವ್ಯಾಪ್ತಿಗೆ ಬರುತ್ತವೆ. ಎರಡೂ ಸಂಸ್ಥೆಗಳು ಸಮಾನವಾಗಿ ಮೌನ ವಹಿಸಿದ ಪರಿಣಾಮ ಸಾರ್ವಜನಿಕರೂ ನಿತ್ಯವೂ ಸಮಸ್ಯೆ ಎದುರಿಸಬೇಕಾಗಿದೆ.<br /> <br /> ವ್ಯಾಪಾರ, ವಹಿವಾಟಿಗಾಗಿ ನಿತ್ಯ ನೂರಾರು ಸಂಖ್ಯೆಯಲ್ಲಿ ಲಾರಿ, ಆಟೋ, ಟಂಟಂ, ಟೆಂಪೊ, ದ್ವಿಚಕ್ರ ವಾಹನಗಳು ಸಂಚರಿಸಲಿವೆ. ರಸ್ತೆಯ ಡಾಂಬರೀಕರಣ ಕಿತ್ತು ಹೋಗಿದ್ದು, ತಗ್ಗುಗಳು ನಿರ್ಮಾಣವಾಗಿವೆ. ಮಳೆ ನೀರು ಹರಿದುಹೋಗುವ ವ್ಯವಸ್ಥೆ ಇಲ್ಲದ್ದರಿಂದ ರಸ್ತೆ ತುಂಬಾ ಕೆಸರು ನಿರ್ಮಾಣವಾಗುತ್ತದೆ. ಪಾದಚಾರಿಗಳಿಗೂ ಕಷ್ಟವಾಗಲಿದೆ.<br /> <br /> ರಸ್ತೆಯ ಡಾಂಬರೀಕರಣ ಹಾಳಾಗಿ ಅನೇಕ ವರ್ಷಗಳೇ ಕಳೆದಿವೇ ಆದರೂ, ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ದೂರು ಸ್ಥಳೀಯ ವ್ಯಾಪಾರಿ ಶಾಂತಕುಮಾರ ಸೇರಿದಂತೆ ಹಲವರದು. <br /> <br /> <strong>ಅನುದಾನವಿಲ್ಲ: </strong>ಈ ರಸ್ತೆಗಳ ಅಭಿವೃದ್ಧಿಗೆ ಅನುದಾನದ ಬಂದಿಲ್ಲ. 20 ಕೋಟಿ ಅನುದಾನ ಕೋರಿ ಕೃಷಿ ಮಾರುಕಟ್ಟೆಯ ನಿರ್ದೇಶಕರಿಗೆ ಮನವಿ ಮಾಡಿದ್ದೇವೆ. ಬಂದ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಲಿದ್ದೇವೆ ಎನ್ನುತ್ತಾರೆ ಎಪಿಎಂಸಿ ಅಧ್ಯಕ್ಷ ಶಾಂತಕುಮಾರ ಪನಸಾಲೆ.<br /> <br /> ಗಾಂಧಿಗಂಜ್ನ ಕೆಲವು ರಸ್ತೆಗಳು ಬೀದರ್ ಕೃಷಿ ಮಾರುಕಟ್ಟೆ ಸಮಿತಿ ಅಡಿಯಲ್ಲಿ ಬಂದರೆ, ಇನ್ನೂ ಕೆಲ ರಸ್ತೆಗಳು ನಗರಸಭೆ ವ್ಯಾಪ್ತಿಯಲ್ಲಿ ಬರುತ್ತವೆ. ಎಂಪಿಎಂಸಿ ಅಡಿಯಲ್ಲಿ ಬರುವ ರಸ್ತೆಗಳನ್ನು ಸಿ.ಸಿ. ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಉದ್ದೇಶವಿದೆ ಎಂದು ಪ್ರತಿಕ್ರಿಯಿಸಿದರು.<br /> <br /> ಸದಸ್ಯಕ್ಕೆ ರಸ್ತೆಯು ತೀರಾ ಹದಗೆಟ್ಟಿರುವ ಕಾರಣ ತಗ್ಗುದಿನ್ನೆಗಳನ್ನು ಮುಚ್ಚಲು ಒತ್ತು ನೀಡಲಾಗಿದೆ. ಈ ಕಾಮಗಾರಿಯೂ ಒಂದು ವಾರದೊಳಗೆ ಆರಂಭಿಸಲಾಗುತ್ತದೆ ಎಂದು ವಿವರಿಸಿದರು. ಹೈದರಾಬಾದ್ ರಸ್ತೆಯಲ್ಲಿನ ಹಣ್ಣು, ತರಕಾರಿ ಮಾರುಕಟ್ಟೆ ಒಂದೆರೆಡು ತಿಂಗಳಲ್ಲಿ ಆರಂಭವಾಗಲಿದೆ. ಆ ಬಾಡಿಗೆ ಮೊತ್ತವನ್ನು ಇದಕ್ಕೆ ಬಳಸಲಾಗುವುದು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>