<p>ಗುಲ್ಬರ್ಗ: ಜ್ಞಾನ ಸ್ಫೋಟದ ಈಗಿನ ಯುಗದಲ್ಲಿ ಸಾಮಾಜಿಕ ಅವಶ್ಯಕತೆಗಳನ್ನು ಪೂರೈಸುವ ಅನುವಾದ ಸಾಹಿತ್ಯದಿಂದ ಅಭಿವೃದ್ಧಿ ಸಾಧ್ಯ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಪ್ರಧಾನ ಗುರುದತ್ ತಿಳಿಸಿದರು.<br /> <br /> ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಾಣಿ ವಿಜ್ಞಾನ ವಿಭಾಗದ ಡಾರ್ವಿನ್ ಸಭಾಂಗಣದಲ್ಲಿ ಶನಿವಾರ `ಹಿಂದಿ ಅನುವಾದ: ಊಳಿಗಮಾನ್ಯ ಕಾಲದಿಂದ ಉತ್ತರ ಊಳಿಗಮಾನ್ಯ ಕಾಲದವರೆಗೆ~ ವಿಷಯ ಕುರಿತು ಜರುಗಿದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.<br /> <br /> ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಅನುವಾದಕರಿಗೆ ವಿಶೇಷ ತರಬೇತಿ, ಪುಸ್ತಕ ಪ್ರಕಟಣೆಗೆ ಆರ್ಥಿಕ ನೆರವು ನೀಡುವ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.<br /> <br /> ರಾಷ್ಟ್ರೀಯ ಭಾಷೆ ಹಿಂದಿಗೆ ಸರಿಸಮಾನವಾದ ಕನ್ನಡ ಭಾಷೆಗೂ ಎಂಟು ಜ್ಞಾನಪೀಠ ಪ್ರಶಸ್ತಿ ದೊರೆತಿರುವುದು ಕನ್ನಡದ ಶ್ರೇಷ್ಠತೆಯನ್ನು ಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.<br /> <br /> ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಅವರು ಡಾ. ಪರಿಮಳ ಅಂಬೇಕರ ರಚಿಸಿದ `ಗಾಂಧಿ ದೃಷ್ಟಿಕೋನದಲ್ಲಿ ಹಿಂದೂ ಧರ್ಮ~ ಎನ್ನುವ ಹಿಂದಿ ಅನುವಾದಿತ ಕೃತಿಯನ್ನು ಬಿಡುಗಡೆಗೊಳಿಸಿದರು. ಸುರೇಶ ಹೇರೂರ ಕೃತಿ ಕುರಿತು ಮಾತನಾಡಿದರು.<br /> <br /> ಖ್ಯಾತ ಅನುವಾದಕಿ ಪ್ರೊ. ಮಾಣಿಕಾಂಬಾ ಮುಖ್ಯ ಅತಿಥಿಗಳಾಗಿದ್ದರು. ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕಿ ಡಾ. ಪರಿಮಳಾ ಅಂಬೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಲ್ಬರ್ಗ: ಜ್ಞಾನ ಸ್ಫೋಟದ ಈಗಿನ ಯುಗದಲ್ಲಿ ಸಾಮಾಜಿಕ ಅವಶ್ಯಕತೆಗಳನ್ನು ಪೂರೈಸುವ ಅನುವಾದ ಸಾಹಿತ್ಯದಿಂದ ಅಭಿವೃದ್ಧಿ ಸಾಧ್ಯ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಪ್ರಧಾನ ಗುರುದತ್ ತಿಳಿಸಿದರು.<br /> <br /> ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಾಣಿ ವಿಜ್ಞಾನ ವಿಭಾಗದ ಡಾರ್ವಿನ್ ಸಭಾಂಗಣದಲ್ಲಿ ಶನಿವಾರ `ಹಿಂದಿ ಅನುವಾದ: ಊಳಿಗಮಾನ್ಯ ಕಾಲದಿಂದ ಉತ್ತರ ಊಳಿಗಮಾನ್ಯ ಕಾಲದವರೆಗೆ~ ವಿಷಯ ಕುರಿತು ಜರುಗಿದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.<br /> <br /> ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಅನುವಾದಕರಿಗೆ ವಿಶೇಷ ತರಬೇತಿ, ಪುಸ್ತಕ ಪ್ರಕಟಣೆಗೆ ಆರ್ಥಿಕ ನೆರವು ನೀಡುವ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.<br /> <br /> ರಾಷ್ಟ್ರೀಯ ಭಾಷೆ ಹಿಂದಿಗೆ ಸರಿಸಮಾನವಾದ ಕನ್ನಡ ಭಾಷೆಗೂ ಎಂಟು ಜ್ಞಾನಪೀಠ ಪ್ರಶಸ್ತಿ ದೊರೆತಿರುವುದು ಕನ್ನಡದ ಶ್ರೇಷ್ಠತೆಯನ್ನು ಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.<br /> <br /> ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಅವರು ಡಾ. ಪರಿಮಳ ಅಂಬೇಕರ ರಚಿಸಿದ `ಗಾಂಧಿ ದೃಷ್ಟಿಕೋನದಲ್ಲಿ ಹಿಂದೂ ಧರ್ಮ~ ಎನ್ನುವ ಹಿಂದಿ ಅನುವಾದಿತ ಕೃತಿಯನ್ನು ಬಿಡುಗಡೆಗೊಳಿಸಿದರು. ಸುರೇಶ ಹೇರೂರ ಕೃತಿ ಕುರಿತು ಮಾತನಾಡಿದರು.<br /> <br /> ಖ್ಯಾತ ಅನುವಾದಕಿ ಪ್ರೊ. ಮಾಣಿಕಾಂಬಾ ಮುಖ್ಯ ಅತಿಥಿಗಳಾಗಿದ್ದರು. ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕಿ ಡಾ. ಪರಿಮಳಾ ಅಂಬೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>