<p><strong>ಕುಷ್ಟಗಿ: </strong> ಪಟ್ಟಣದ ಅನ್ನದಾನೇಶ್ವರ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.<br /> <br /> ಸದರಿ ನಗರದಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನೀರು ಸರಬರಾಜು ಇಲ್ಲ, ಮಹಿಳೆಯರು, ಮಕ್ಕಳು ಎಲ್ಲ ಕೆಲಸ ಬಿಟ್ಟು ದೂರ ಇರುವ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿರುವ ಕೊಳವೆ ದುರಸ್ಥಿ ಸ್ಥಳಕ್ಕೆ ಹೋಗಿ ನೀರು ತರುವಂತಾಗಿದೆ.<br /> <br /> ಪಟ್ಟಣದಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎನ್ನಲಾಗುತ್ತಿದೆ ಆದರೆ ಈ ನಗರದಲ್ಲಿ ಮಾತ್ರ ಜನ ಒಂದೆಡೆ ಬೇಸಿಗೆ ಬೇಗೆ ಇನ್ನೊಂದೆಡೆ ನೀರಿನ ಅಭಾವದಿಂದ ಕಂಗೆಟ್ಟಿರುವುದಾಗಿ ಅಲ್ಲಿನ ನಿವಾಸಿಗಳು ದೂರಿದ್ದಾರೆ.<br /> <br /> ಈ ವಿಷಯವನ್ನು ಹಲವು ಬಾರಿ ಪುರಸಭೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ, ಅಷ್ಟೇ ಅಲ್ಲ ಸ್ವತಃ ಪುರಸಭೆ ಮುಖ್ಯಾಧಿಕಾರಿಯೇ ಅನ್ನದಾನೇಶ್ವರ ನಗರ ಎಲ್ಲಿದೆ? ಎಂದು ಕೇಳುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಪುರಸಭೆಗೆ ಮುತ್ತಿಗೆಹಾಕಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.<br /> <br /> ಅಲ್ಲದೇ ನೀರು ಪೂರೈಕೆ ಮತ್ತಿತರೆ ವಿಷಯಗಳಿಗೆ ಮುಖ್ಯಾಧಿಕಾರಿ ಮೊಬೈಲ್ಗೆ ಜನ ಕರೆ ಮಾಡಿದರೆ ಬೇರೆ ಯಾರೋ ಅದನ್ನು ಸ್ವೀಕರಿಸಿ ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ: </strong> ಪಟ್ಟಣದ ಅನ್ನದಾನೇಶ್ವರ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.<br /> <br /> ಸದರಿ ನಗರದಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನೀರು ಸರಬರಾಜು ಇಲ್ಲ, ಮಹಿಳೆಯರು, ಮಕ್ಕಳು ಎಲ್ಲ ಕೆಲಸ ಬಿಟ್ಟು ದೂರ ಇರುವ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿರುವ ಕೊಳವೆ ದುರಸ್ಥಿ ಸ್ಥಳಕ್ಕೆ ಹೋಗಿ ನೀರು ತರುವಂತಾಗಿದೆ.<br /> <br /> ಪಟ್ಟಣದಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎನ್ನಲಾಗುತ್ತಿದೆ ಆದರೆ ಈ ನಗರದಲ್ಲಿ ಮಾತ್ರ ಜನ ಒಂದೆಡೆ ಬೇಸಿಗೆ ಬೇಗೆ ಇನ್ನೊಂದೆಡೆ ನೀರಿನ ಅಭಾವದಿಂದ ಕಂಗೆಟ್ಟಿರುವುದಾಗಿ ಅಲ್ಲಿನ ನಿವಾಸಿಗಳು ದೂರಿದ್ದಾರೆ.<br /> <br /> ಈ ವಿಷಯವನ್ನು ಹಲವು ಬಾರಿ ಪುರಸಭೆ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ, ಅಷ್ಟೇ ಅಲ್ಲ ಸ್ವತಃ ಪುರಸಭೆ ಮುಖ್ಯಾಧಿಕಾರಿಯೇ ಅನ್ನದಾನೇಶ್ವರ ನಗರ ಎಲ್ಲಿದೆ? ಎಂದು ಕೇಳುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಪುರಸಭೆಗೆ ಮುತ್ತಿಗೆಹಾಕಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.<br /> <br /> ಅಲ್ಲದೇ ನೀರು ಪೂರೈಕೆ ಮತ್ತಿತರೆ ವಿಷಯಗಳಿಗೆ ಮುಖ್ಯಾಧಿಕಾರಿ ಮೊಬೈಲ್ಗೆ ಜನ ಕರೆ ಮಾಡಿದರೆ ಬೇರೆ ಯಾರೋ ಅದನ್ನು ಸ್ವೀಕರಿಸಿ ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>