<p>ಮಡಿಕೇರಿ: ಈ ಬಾರಿ ತೀರ್ಥೋದ್ಭವ ಸಂದರ್ಭದಲ್ಲಿ ತಲಕಾವೇರಿಯಲ್ಲಿ ದೇವಸ್ಥಾನ ಸಮಿತಿಯಿಂದಲೇ ಅನ್ನದಾನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೆ ಸಂಘ-ಸಂಸ್ಥೆಗಳು ಸಹಕರಿಸಬೇಕು ಎಂದು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಕೋರಿದರು.<br /> <br /> ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೀರ್ಥೋದ್ಭವ ಸಿದ್ಧತಾ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ದೇವಾಲಯದೊಳಗೆ ದೇವಸ್ಥಾನ ಸಮಿತಿಯಿಂದ ಹಾಗೂ ಭಾಗಮಂಡಲದಲ್ಲಿ ಇತರ ಸಂಘಸಂಸ್ಥೆಗಳಿಗೆ ಅನ್ನದಾನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಎಲ್ಲರೂ ಸಹಕರಿಸಬೇಕು ಎಂದರು.<br /> <br /> ತೀರ್ಥೋದ್ಭವ ಸಂದರ್ಭದಲ್ಲಿ ತಲಕಾವೇರಿಗೆ ಆಗಮಿಸುವ ಸಹಸ್ರಾರು ಭಕ್ತರಿಗೆ ಅನ್ನದಾನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ವಿವಾದ ಇಲ್ಲ ಎಂದು ಸ್ಪಷ್ಟಪಡಿಸಿದರು.<br /> <br /> ಕಾನೂನಿನಲ್ಲಿ ಅವಕಾಶ ಇಲ್ಲ: ಮುಜರಾಯಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಭಕ್ತಾದಿಗಳಿಂದ ಹಣ ಸಂಗ್ರಹಿಸಿ, ಅನ್ನದಾನ ಮಾಡಲು ಅವಕಾಶ ಇಲ್ಲ ಎಂದು ಅವರು ಹೇಳಿದರು.<br /> <br /> ಜಾತ್ರೆ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳು ನಡೆದರೆ ಅವುಗಳನ್ನು ದೇವಸ್ಥಾನ ಸಮಿತಿಯಿಂದಲೇ ನಡೆಸಬೇಕಾಗುತ್ತದೆ. ಅದರಂತೆ ಈ ಬಾರಿ ಆಯೋಜಿಸಲಾಗುತ್ತಿದೆ ಎಂದರು.<br /> <br /> ಜಾಗ ನೀಡಲು ಅವಕಾಶ ಇಲ್ಲ: ಅನ್ನಸಂತರ್ಪಣೆ ಮಾಡುವ ಸಂಘ-ಸಂಸ್ಥೆಗಳಿಗೆ ದೇವಸ್ಥಾನದ ಬಳಿಯಾಗಲಿ, ಅಥವಾ ಭಾಗಮಂಡಲದಲ್ಲಾಗಲಿ ಶಾಶ್ವತವಾಗಿ ಜಾಗ ನೀಡಲು ಸಾಧ್ಯವಿಲ್ಲ. ತೀರ್ಥೋದ್ಭವ ಸಂದರ್ಭದಲ್ಲಿ ಎರಡು ದಿನಗಳ ಮಟ್ಟಿಗೆ ಮಾತ್ರ ಸೂಕ್ತ ಜಾಗ ಕಲ್ಪಿಸಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.<br /> <br /> ನಾಣಯ್ಯ ಸ್ವಾಗತ: ಅನ್ನದಾನ ಮಾಡುವುದನ್ನು ದೇವಸ್ಥಾನದ ಸಮಿತಿಗೆ ವಹಿಸಿಕೊಟ್ಟಿರುವುದು ಒಳ್ಳೆಯದು ಎಂದು ವಿಧಾನಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಹೇಳಿದರು.<br /> <br /> ಕಾವೇರಿ ಮಾತೆಯ ಸನ್ನಿಧಿಯಲ್ಲಿ ಅನ್ನದಾನ ಮಾಡುವ ವಿಷಯಕ್ಕೆ ರಾಜಕೀಯ ಬೆರೆತದ್ದು ಖೇದಕರ. ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ತೀರ್ಥೋದ್ಭವ ಜಾತ್ರೆಯನ್ನು ಸಂಭ್ರಮದಿಂದ ಆಚರಿಸೋಣ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಈ ಬಾರಿ ತೀರ್ಥೋದ್ಭವ ಸಂದರ್ಭದಲ್ಲಿ ತಲಕಾವೇರಿಯಲ್ಲಿ ದೇವಸ್ಥಾನ ಸಮಿತಿಯಿಂದಲೇ ಅನ್ನದಾನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೆ ಸಂಘ-ಸಂಸ್ಥೆಗಳು ಸಹಕರಿಸಬೇಕು ಎಂದು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಕೋರಿದರು.<br /> <br /> ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೀರ್ಥೋದ್ಭವ ಸಿದ್ಧತಾ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ದೇವಾಲಯದೊಳಗೆ ದೇವಸ್ಥಾನ ಸಮಿತಿಯಿಂದ ಹಾಗೂ ಭಾಗಮಂಡಲದಲ್ಲಿ ಇತರ ಸಂಘಸಂಸ್ಥೆಗಳಿಗೆ ಅನ್ನದಾನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಎಲ್ಲರೂ ಸಹಕರಿಸಬೇಕು ಎಂದರು.<br /> <br /> ತೀರ್ಥೋದ್ಭವ ಸಂದರ್ಭದಲ್ಲಿ ತಲಕಾವೇರಿಗೆ ಆಗಮಿಸುವ ಸಹಸ್ರಾರು ಭಕ್ತರಿಗೆ ಅನ್ನದಾನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ವಿವಾದ ಇಲ್ಲ ಎಂದು ಸ್ಪಷ್ಟಪಡಿಸಿದರು.<br /> <br /> ಕಾನೂನಿನಲ್ಲಿ ಅವಕಾಶ ಇಲ್ಲ: ಮುಜರಾಯಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಭಕ್ತಾದಿಗಳಿಂದ ಹಣ ಸಂಗ್ರಹಿಸಿ, ಅನ್ನದಾನ ಮಾಡಲು ಅವಕಾಶ ಇಲ್ಲ ಎಂದು ಅವರು ಹೇಳಿದರು.<br /> <br /> ಜಾತ್ರೆ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳು ನಡೆದರೆ ಅವುಗಳನ್ನು ದೇವಸ್ಥಾನ ಸಮಿತಿಯಿಂದಲೇ ನಡೆಸಬೇಕಾಗುತ್ತದೆ. ಅದರಂತೆ ಈ ಬಾರಿ ಆಯೋಜಿಸಲಾಗುತ್ತಿದೆ ಎಂದರು.<br /> <br /> ಜಾಗ ನೀಡಲು ಅವಕಾಶ ಇಲ್ಲ: ಅನ್ನಸಂತರ್ಪಣೆ ಮಾಡುವ ಸಂಘ-ಸಂಸ್ಥೆಗಳಿಗೆ ದೇವಸ್ಥಾನದ ಬಳಿಯಾಗಲಿ, ಅಥವಾ ಭಾಗಮಂಡಲದಲ್ಲಾಗಲಿ ಶಾಶ್ವತವಾಗಿ ಜಾಗ ನೀಡಲು ಸಾಧ್ಯವಿಲ್ಲ. ತೀರ್ಥೋದ್ಭವ ಸಂದರ್ಭದಲ್ಲಿ ಎರಡು ದಿನಗಳ ಮಟ್ಟಿಗೆ ಮಾತ್ರ ಸೂಕ್ತ ಜಾಗ ಕಲ್ಪಿಸಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.<br /> <br /> ನಾಣಯ್ಯ ಸ್ವಾಗತ: ಅನ್ನದಾನ ಮಾಡುವುದನ್ನು ದೇವಸ್ಥಾನದ ಸಮಿತಿಗೆ ವಹಿಸಿಕೊಟ್ಟಿರುವುದು ಒಳ್ಳೆಯದು ಎಂದು ವಿಧಾನಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಹೇಳಿದರು.<br /> <br /> ಕಾವೇರಿ ಮಾತೆಯ ಸನ್ನಿಧಿಯಲ್ಲಿ ಅನ್ನದಾನ ಮಾಡುವ ವಿಷಯಕ್ಕೆ ರಾಜಕೀಯ ಬೆರೆತದ್ದು ಖೇದಕರ. ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ತೀರ್ಥೋದ್ಭವ ಜಾತ್ರೆಯನ್ನು ಸಂಭ್ರಮದಿಂದ ಆಚರಿಸೋಣ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>