<p><strong>ಲಕ್ಷ್ಮೇಶ್ವರ:</strong> ಸಮಾಜದಲ್ಲಿ ಇಂದು ಎಲ್ಲ ರಂಗಗಳಲ್ಲಿ ಭ್ರಷ್ಟಾಚಾರ ಹಾಗೂ ಅನ್ಯಾಯ ತುಂಬಿ ತುಳುಕುತ್ತಿದ್ದು ಸಂಘ ಸಂಸ್ಥೆಗಳು ಇವುಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಎಸ್.ಎನ್. ಪಾಟೀಲ ಸಲಹೆ ನೀಡಿದರು.<br /> <br /> ಪಟ್ಟಣದ ಕೆಂಚಲಾಪುರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ನವಕರ್ನಾಟಕ ಜನಪರ ಅಭಿವೃದ್ಧಿ ವೇದಿ ಕೆಯ ಲಕ್ಷ್ಮೇಶ್ವರ ಪಟ್ಟಣದ ಅಲ್ಪ ಸಂಖ್ಯಾತರ ಹಾಗೂ ಕಾರ್ಮಿಕ ಘಟಕ ಗಳನ್ನು ಉದ್ಘಾಟಿಸಿ ಮಾತನಾಡಿದರು. <br /> <br /> ಸಮಾಜ ಸೇವೆಯ ಸೋಗಿನಲ್ಲಿ ಇಂದು ನೂರಾರು ಸಂಘಟನೆಗಳು ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಆದರೆ ಜನರ ಸೇವೆಯೇ ಮುಖ್ಯ ಗುರಿಯನ್ನಾಗಿಸಿಕೊಂಡು ಹೋರಾಟ ಮಾಡುವ ಸಂಘಟನೆಗಳು ಬೆಳಕಿಗೆ ಬರುತ್ತವೆ. ಈ ನಿಟ್ಟಿನಲ್ಲಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡು ತ್ತಿರುವುದು ಶ್ಲಾಘನೀಯ ಎಂದರು.<br /> <br /> ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಐ.ಮುಳಗುಂದ ದೀನ ದಲಿತರು ಹಾಗೂ ಬಡವರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಆ ಯೋಜನೆಗಳು ಸರಿಯಾದ ಫಲಾನುಭವಿಗಳಗೆ ದೊರೆಯುತ್ತಿಲ್ಲ. ಹೀಗಾಗಿ ಬಡವರು ಇವುಗಳಿಂದ ವಂಚಿತರಾಗಿದ್ದು ಇಂಥವರ ಸಮಸ್ಯೆಗೆ ಸ್ಪಂದಿಸುವಲ್ಲಿ ವೇದಿಕೆ ಸದಾ ಮುಂದೆ ಇರುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಸಮಾಜದಲ್ಲಿ ಇಂದು ಎಲ್ಲ ರಂಗಗಳಲ್ಲಿ ಭ್ರಷ್ಟಾಚಾರ ಹಾಗೂ ಅನ್ಯಾಯ ತುಂಬಿ ತುಳುಕುತ್ತಿದ್ದು ಸಂಘ ಸಂಸ್ಥೆಗಳು ಇವುಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಎಸ್.ಎನ್. ಪಾಟೀಲ ಸಲಹೆ ನೀಡಿದರು.<br /> <br /> ಪಟ್ಟಣದ ಕೆಂಚಲಾಪುರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ನವಕರ್ನಾಟಕ ಜನಪರ ಅಭಿವೃದ್ಧಿ ವೇದಿ ಕೆಯ ಲಕ್ಷ್ಮೇಶ್ವರ ಪಟ್ಟಣದ ಅಲ್ಪ ಸಂಖ್ಯಾತರ ಹಾಗೂ ಕಾರ್ಮಿಕ ಘಟಕ ಗಳನ್ನು ಉದ್ಘಾಟಿಸಿ ಮಾತನಾಡಿದರು. <br /> <br /> ಸಮಾಜ ಸೇವೆಯ ಸೋಗಿನಲ್ಲಿ ಇಂದು ನೂರಾರು ಸಂಘಟನೆಗಳು ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಆದರೆ ಜನರ ಸೇವೆಯೇ ಮುಖ್ಯ ಗುರಿಯನ್ನಾಗಿಸಿಕೊಂಡು ಹೋರಾಟ ಮಾಡುವ ಸಂಘಟನೆಗಳು ಬೆಳಕಿಗೆ ಬರುತ್ತವೆ. ಈ ನಿಟ್ಟಿನಲ್ಲಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆ ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡು ತ್ತಿರುವುದು ಶ್ಲಾಘನೀಯ ಎಂದರು.<br /> <br /> ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಐ.ಮುಳಗುಂದ ದೀನ ದಲಿತರು ಹಾಗೂ ಬಡವರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಆ ಯೋಜನೆಗಳು ಸರಿಯಾದ ಫಲಾನುಭವಿಗಳಗೆ ದೊರೆಯುತ್ತಿಲ್ಲ. ಹೀಗಾಗಿ ಬಡವರು ಇವುಗಳಿಂದ ವಂಚಿತರಾಗಿದ್ದು ಇಂಥವರ ಸಮಸ್ಯೆಗೆ ಸ್ಪಂದಿಸುವಲ್ಲಿ ವೇದಿಕೆ ಸದಾ ಮುಂದೆ ಇರುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>