<p><strong>ನವದೆಹಲಿ:</strong> ರಸ್ತೆ ಅಪಘಾತಗಳಲ್ಲಿ ನೊಂದವರಿಗೆ ಪರಿಹಾರ ನಿರ್ಧರಿಸುವಾಗ `ಉದಾರ ಮತ್ತು ಸಮತೋಲನ~ದ ಧೋರಣೆಯನ್ನು ನ್ಯಾಯಾಲಯಗಳು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.<br /> <br /> ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಎಡಗಾಲು ಕಳೆದುಕೊಂಡಿದ್ದ ಸುಬ್ಬುಲಕ್ಷ್ಮಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಸ್. ರಾಧಾಕೃಷ್ಣನ್ ಮತ್ತು ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.<br /> <br /> ಸುಬ್ಬುಲಕ್ಷ್ಮಿ ಬೆಂಕಿಪೊಟ್ಟಣ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. 1998ರಲ್ಲಿ ಅಪಘಾತ ನಡೆದಾಗ ಪರಿಹಾರ ಯಾಚಿಸಿ ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ಶಾಶ್ವತ ಅಂಗವೈಕಲ್ಯ ಮತ್ತು ಭವಿಷ್ಯದ ಆದಾಯ ನಷ್ಟದ ಮೊತ್ತ ಪರಿಗಣಿಸಿ ರೂ 2 ಲಕ್ಷ ಪರಿಹಾರ ನೀಡಲು ಮಂಡಳಿಯು 2002ರಲ್ಲಿ ಆದೇಶಿಸಿತ್ತು.<br /> <br /> ಈ ತೀರ್ಪಿನ ವಿರುದ್ಧ ಸುಬ್ಬುಲಕ್ಷ್ಮಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದಾಗ ಕೋರ್ಟ್ ಪರಿಹಾರವನ್ನು ರೂ 2.75ಲಕ್ಷಕ್ಕೆ ಹೆಚ್ಚಿಸಿತ್ತು. ಆದರೆ ಶಾಶ್ವತ ಅಂಗವೈಕಲ್ಯಕ್ಕೆ ಯಾವುದೇ ಪರಿಹಾರ ಸೂಚಿಸಿರಲಿಲ್ಲ.<br /> ಈ ಆದೇಶವನ್ನು ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.<br /> <br /> ಕೃತಕ ಕಾಲು ಜೋಡಣೆಗಾಗಿ ಮತ್ತು ಅವರು ಅನುಭವಿಸಿದ ದೈಹಿಕ ಹಾಗೂ ಮಾನಸಿಕ ನೋವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂಕೋರ್ಟ್ ಸುಬ್ಬುಲಕ್ಷ್ಮಿ ಅವರಿಗೆ ನೀಡಬೇಕಾಗಿರುವ ಒಟ್ಟು ಪರಿಹಾರವನ್ನು ರೂ 6,48,640ಕ್ಕೆ ಹೆಚ್ಚಿಸಿತು. ಎಂಟು ವಾರಗಳೊಳಗೆ ವಾರ್ಷಿಕ ಶೇ 9ರಷ್ಟು ಬಡ್ಡಿಯೊಂದಿಗೆ ಈ ಮೊತ್ತವನ್ನು ಪಾವತಿ ಮಾಡಬೇಕು ಎಂದು ಸಾರಿಗೆ ನಿಗಮಕ್ಕೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಸ್ತೆ ಅಪಘಾತಗಳಲ್ಲಿ ನೊಂದವರಿಗೆ ಪರಿಹಾರ ನಿರ್ಧರಿಸುವಾಗ `ಉದಾರ ಮತ್ತು ಸಮತೋಲನ~ದ ಧೋರಣೆಯನ್ನು ನ್ಯಾಯಾಲಯಗಳು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.<br /> <br /> ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಎಡಗಾಲು ಕಳೆದುಕೊಂಡಿದ್ದ ಸುಬ್ಬುಲಕ್ಷ್ಮಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಸ್. ರಾಧಾಕೃಷ್ಣನ್ ಮತ್ತು ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.<br /> <br /> ಸುಬ್ಬುಲಕ್ಷ್ಮಿ ಬೆಂಕಿಪೊಟ್ಟಣ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. 1998ರಲ್ಲಿ ಅಪಘಾತ ನಡೆದಾಗ ಪರಿಹಾರ ಯಾಚಿಸಿ ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ಶಾಶ್ವತ ಅಂಗವೈಕಲ್ಯ ಮತ್ತು ಭವಿಷ್ಯದ ಆದಾಯ ನಷ್ಟದ ಮೊತ್ತ ಪರಿಗಣಿಸಿ ರೂ 2 ಲಕ್ಷ ಪರಿಹಾರ ನೀಡಲು ಮಂಡಳಿಯು 2002ರಲ್ಲಿ ಆದೇಶಿಸಿತ್ತು.<br /> <br /> ಈ ತೀರ್ಪಿನ ವಿರುದ್ಧ ಸುಬ್ಬುಲಕ್ಷ್ಮಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದಾಗ ಕೋರ್ಟ್ ಪರಿಹಾರವನ್ನು ರೂ 2.75ಲಕ್ಷಕ್ಕೆ ಹೆಚ್ಚಿಸಿತ್ತು. ಆದರೆ ಶಾಶ್ವತ ಅಂಗವೈಕಲ್ಯಕ್ಕೆ ಯಾವುದೇ ಪರಿಹಾರ ಸೂಚಿಸಿರಲಿಲ್ಲ.<br /> ಈ ಆದೇಶವನ್ನು ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.<br /> <br /> ಕೃತಕ ಕಾಲು ಜೋಡಣೆಗಾಗಿ ಮತ್ತು ಅವರು ಅನುಭವಿಸಿದ ದೈಹಿಕ ಹಾಗೂ ಮಾನಸಿಕ ನೋವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂಕೋರ್ಟ್ ಸುಬ್ಬುಲಕ್ಷ್ಮಿ ಅವರಿಗೆ ನೀಡಬೇಕಾಗಿರುವ ಒಟ್ಟು ಪರಿಹಾರವನ್ನು ರೂ 6,48,640ಕ್ಕೆ ಹೆಚ್ಚಿಸಿತು. ಎಂಟು ವಾರಗಳೊಳಗೆ ವಾರ್ಷಿಕ ಶೇ 9ರಷ್ಟು ಬಡ್ಡಿಯೊಂದಿಗೆ ಈ ಮೊತ್ತವನ್ನು ಪಾವತಿ ಮಾಡಬೇಕು ಎಂದು ಸಾರಿಗೆ ನಿಗಮಕ್ಕೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>