ಅಪಘಾತ: ಐವರು ಬಲಿ
ಜೇವರ್ಗಿ: ಮಂದೇವಾಲ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಐದು ಜನರು ಮೃತಪಟ್ಟಿದ್ದಾರೆ. ಎಂಟು ಜನರಿಗೆ ತೀವ್ರ ಗಾಯಗಳಾಗಿವೆ.
ಹುಮನಾಬಾದ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 218 (ಈ)ಯ ಹಿಪ್ಪರಗಿ-ಮಂದೇವಾಲ ಮಧ್ಯೆ ಲಾರಿಯೊಂದು ಟೈರ್ ಒಡೆದು ನಿಂತಿತ್ತು. ಆ ಲಾರಿಗೆ ಟವೇರಾ ಜೀಪ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಬೀದರ್ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ರಾಮಾಪುರ ಗ್ರಾಮದವರೆಂದು ಗುರುತಿಸಲಾಗಿದೆ. ಬೆಳಿಗ್ಗೆ ರಾಮಾಪುರದಿಂದ- ಕೂಡಲಸಂಗಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.