<p>ಸಾಗರ : ಇಲ್ಲಿಗೆ ಸಮೀಪದ ಆಡುಕಟ್ಟಾ ಕ್ರಾಸ್ ಬಳಿ ಬೊಲೆರೊ ವಾಹನವು ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊದಲ್ಲಿದ್ದ ಕೇರಳದ ಕೊಲ್ಲಂನ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಒಬ್ಬ ತೀವ್ರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.<br /> <br /> ಎದುರಿನಿಂದ ಬಂದ ಕ್ರೂಸರ್ ವಾಹನವನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.<br /> ಮೃತರನ್ನು ರಾಜು, ಸಜಿ, ಶಿವನ್, ಶ್ರೀನಾಥ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿದೇಶದಲ್ಲಿ ಕೆಲಸದಲ್ಲಿದ್ದು, ರಜೆ ಪಡೆದು ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ. ಮೃತಪಟ್ಟವರು 27ರಿಂದ 30 ವರ್ಷದ ಒಳಗಿನ ವಯೋಮಾನದವರು. <br /> <br /> ಗಾಯಗೊಂಡ ಸಾಜಿದ್ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ಸಾಜಿದ್ ಮತ್ತು ಅವರ ಸಂಗಡಿಗರು ಕೇರಳದಿಂದ ಗೋವಾ ಪ್ರವಾಸ ಮುಗಿಸಿಕೊಂಡು ಜೋಗ್ಫಾಲ್ಸ್ ನೋಡಲು ಆಗಮಿಸಿದ್ದರು. ಜೋಗ ನೋಡಿಕೊಂಡು ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. <br /> <br /> ಅಪಘಾತವಾದ ಸ್ಥಳ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯ ವ್ಯಾಪ್ತಿಗೆ ಸೇರಿದ್ದು, ಅಲ್ಲಿನ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರ್ ನಡೆಸಿ ಪ್ರಕರಣ ದಾಖಲಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ : ಇಲ್ಲಿಗೆ ಸಮೀಪದ ಆಡುಕಟ್ಟಾ ಕ್ರಾಸ್ ಬಳಿ ಬೊಲೆರೊ ವಾಹನವು ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊದಲ್ಲಿದ್ದ ಕೇರಳದ ಕೊಲ್ಲಂನ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಒಬ್ಬ ತೀವ್ರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.<br /> <br /> ಎದುರಿನಿಂದ ಬಂದ ಕ್ರೂಸರ್ ವಾಹನವನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.<br /> ಮೃತರನ್ನು ರಾಜು, ಸಜಿ, ಶಿವನ್, ಶ್ರೀನಾಥ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿದೇಶದಲ್ಲಿ ಕೆಲಸದಲ್ಲಿದ್ದು, ರಜೆ ಪಡೆದು ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ. ಮೃತಪಟ್ಟವರು 27ರಿಂದ 30 ವರ್ಷದ ಒಳಗಿನ ವಯೋಮಾನದವರು. <br /> <br /> ಗಾಯಗೊಂಡ ಸಾಜಿದ್ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ಸಾಜಿದ್ ಮತ್ತು ಅವರ ಸಂಗಡಿಗರು ಕೇರಳದಿಂದ ಗೋವಾ ಪ್ರವಾಸ ಮುಗಿಸಿಕೊಂಡು ಜೋಗ್ಫಾಲ್ಸ್ ನೋಡಲು ಆಗಮಿಸಿದ್ದರು. ಜೋಗ ನೋಡಿಕೊಂಡು ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. <br /> <br /> ಅಪಘಾತವಾದ ಸ್ಥಳ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯ ವ್ಯಾಪ್ತಿಗೆ ಸೇರಿದ್ದು, ಅಲ್ಲಿನ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರ್ ನಡೆಸಿ ಪ್ರಕರಣ ದಾಖಲಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>