ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು
ನೆಲಮಂಗಲ: ಬೊಲೆರೊ ಕಾರೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರದ ಮಿನರಲ್ ಕಂಪೆನಿ ಮ್ಯಾನೇಜರ್ ಎ. ನಾರಾಯಣ್ (57), ಕಾರು ಚಾಲಕ ರುದ್ರಯ್ಯ ಹಿರೇಮಠ್ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರು ಸ್ವಿಫ್ಟ್ ಕಾರಿನಲ್ಲಿದ್ದರು.
ನಾರಾಯಣ್ ಅವರ ಪತ್ನಿ ಲಕ್ಷ್ಮಿ, ಕಿರಣ್ಕುಮಾರ್, ಶೇಖರ್, ಕುಮಾರ್ ಗಾಯಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.