<p><strong>ಕ್ವಾಲಾಲಂಪುರ (ಪಿಟಿಐ):</strong> ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂದಿಸುವುದು, ತನಿಖೆಗೆ ಒಳಪಡಿಸುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪರಸ್ಪರ ಸಹಕಾರ ನೀಡುವ ಐತಿಹಾಸಿಕ ಒಪ್ಪಂದಕ್ಕೆ ಭಾರತ ಮತ್ತು ಮಲೇಷ್ಯಾ ಸಹಿ ಹಾಕಿದ್ದು, ಅಂತರರಾಷ್ಟ್ರೀಯ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದು ಮೈಲುಗಲ್ಲಾಗಿದೆ ಎಂದು ಮಲೇಷ್ಯಾ ಹೇಳಿದೆ.</p>.<p>ನಾಲ್ಕು ವರ್ಷಗಳ ಸತತ ಚರ್ಚೆಯ ಬಳಿಕ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾದಕ ದ್ರವ್ಯ ಸಾಗಣೆ, ಕಾರ್ಮಿಕರ ಕಳ್ಳ ಸಾಗಣೆ, ಭಯೋತ್ಪಾದನೆಯಂತಹ ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ದಿಸೆಯಲ್ಲಿ ಈ ಒಪ್ಪಂದ ನೆರವಾಗಲಿದೆ ಎನ್ನಲಾಗಿದೆ.</p>.<p>ಭಾರತದ ವಿದೇಶಾಂಗ ವ್ಯವಹಾರ ಕಾರ್ಯದರ್ಶಿ (ಪೂರ್ವ) ಸಂಜಯ್ ಸಿಂಗ್ ಹಾಗೂ ಮಲೇಷ್ಯಾದ ಅಟಾರ್ನಿ ಜನರಲ್ ಅಬ್ದುಲ್ ಗನಿ ಪಟೇಲ್ ಉಭಯ ದೇಶಗಳ ಪರವಾಗಿ ಒಪ್ಪಂದಕ್ಕೆ ಅಂಕಿತ ಹಾಕಿದರು.</p>.<p>ಈ ಒಪ್ಪಂದದ ಅನ್ವಯ ಎರಡೂ ದೇಶಗಳು ಅಪರಾಧಗಳ ತನಿಖೆಯ ವಿವರ ಹಂಚಿಕೊಳ್ಳಲಿವೆ. ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಸಾಕ್ಷ್ಯ ತೆಗೆದುಕೊಳ್ಳುವುದು, ನಿರ್ದಿಷ್ಟ ಅಪರಾಧ ನಡೆದಾಗ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳ ಹೇಳಿಕೆ ಪಡೆಯುವುದು, ದಾಖಲೆ ಪತ್ರ, ವಸ್ತುಗಳನ್ನು ವಶಕ್ಕೆ ಪಡೆಯುವುದು ಇತ್ಯಾದಿ ಈ ಒಪ್ಪಂದದ ವ್ಯಾಪ್ತಿಗೆ ಬರುತ್ತದೆ.</p>.<p>ಯಾವುದೇ ಒಂದು ದೇಶದ ಅಧಿಕಾರಿಗಳು ನಿರ್ದಿಷ್ಟ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ದೇಶದಲ್ಲಿ ತನಿಖೆ ನಡೆಸುತ್ತಿರುವಾಗ ಅವರ ನೆರವಿಗೆ ಅಧಿಕಾರಿಯೊಬ್ಬರನ್ನು ನೇಮಿಸುವ ಪ್ರಸ್ತಾಪವೂ ಈ ಒಪ್ಪಂದದಲ್ಲಿ ಇದೆ. ಈ ಹಿಂದೆ ಅನೌಪಚಾರಿಕವಾಗಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದ ಉಭಯ ದೇಶಗಳ ತನಿಖಾ ಸಂಸ್ಥೆಗಳು ಈಗ ಅಧಿಕೃತವಾಗಿ ಮಾಹಿತಿಗಳನ್ನು ಹಂಚಿಕೊಳ್ಳಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ (ಪಿಟಿಐ):</strong> ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂದಿಸುವುದು, ತನಿಖೆಗೆ ಒಳಪಡಿಸುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪರಸ್ಪರ ಸಹಕಾರ ನೀಡುವ ಐತಿಹಾಸಿಕ ಒಪ್ಪಂದಕ್ಕೆ ಭಾರತ ಮತ್ತು ಮಲೇಷ್ಯಾ ಸಹಿ ಹಾಕಿದ್ದು, ಅಂತರರಾಷ್ಟ್ರೀಯ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದು ಮೈಲುಗಲ್ಲಾಗಿದೆ ಎಂದು ಮಲೇಷ್ಯಾ ಹೇಳಿದೆ.</p>.<p>ನಾಲ್ಕು ವರ್ಷಗಳ ಸತತ ಚರ್ಚೆಯ ಬಳಿಕ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾದಕ ದ್ರವ್ಯ ಸಾಗಣೆ, ಕಾರ್ಮಿಕರ ಕಳ್ಳ ಸಾಗಣೆ, ಭಯೋತ್ಪಾದನೆಯಂತಹ ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ದಿಸೆಯಲ್ಲಿ ಈ ಒಪ್ಪಂದ ನೆರವಾಗಲಿದೆ ಎನ್ನಲಾಗಿದೆ.</p>.<p>ಭಾರತದ ವಿದೇಶಾಂಗ ವ್ಯವಹಾರ ಕಾರ್ಯದರ್ಶಿ (ಪೂರ್ವ) ಸಂಜಯ್ ಸಿಂಗ್ ಹಾಗೂ ಮಲೇಷ್ಯಾದ ಅಟಾರ್ನಿ ಜನರಲ್ ಅಬ್ದುಲ್ ಗನಿ ಪಟೇಲ್ ಉಭಯ ದೇಶಗಳ ಪರವಾಗಿ ಒಪ್ಪಂದಕ್ಕೆ ಅಂಕಿತ ಹಾಕಿದರು.</p>.<p>ಈ ಒಪ್ಪಂದದ ಅನ್ವಯ ಎರಡೂ ದೇಶಗಳು ಅಪರಾಧಗಳ ತನಿಖೆಯ ವಿವರ ಹಂಚಿಕೊಳ್ಳಲಿವೆ. ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಸಾಕ್ಷ್ಯ ತೆಗೆದುಕೊಳ್ಳುವುದು, ನಿರ್ದಿಷ್ಟ ಅಪರಾಧ ನಡೆದಾಗ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳ ಹೇಳಿಕೆ ಪಡೆಯುವುದು, ದಾಖಲೆ ಪತ್ರ, ವಸ್ತುಗಳನ್ನು ವಶಕ್ಕೆ ಪಡೆಯುವುದು ಇತ್ಯಾದಿ ಈ ಒಪ್ಪಂದದ ವ್ಯಾಪ್ತಿಗೆ ಬರುತ್ತದೆ.</p>.<p>ಯಾವುದೇ ಒಂದು ದೇಶದ ಅಧಿಕಾರಿಗಳು ನಿರ್ದಿಷ್ಟ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ದೇಶದಲ್ಲಿ ತನಿಖೆ ನಡೆಸುತ್ತಿರುವಾಗ ಅವರ ನೆರವಿಗೆ ಅಧಿಕಾರಿಯೊಬ್ಬರನ್ನು ನೇಮಿಸುವ ಪ್ರಸ್ತಾಪವೂ ಈ ಒಪ್ಪಂದದಲ್ಲಿ ಇದೆ. ಈ ಹಿಂದೆ ಅನೌಪಚಾರಿಕವಾಗಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದ ಉಭಯ ದೇಶಗಳ ತನಿಖಾ ಸಂಸ್ಥೆಗಳು ಈಗ ಅಧಿಕೃತವಾಗಿ ಮಾಹಿತಿಗಳನ್ನು ಹಂಚಿಕೊಳ್ಳಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>