<p>ಕುಶಾಲನಗರ: ಉತ್ತರ ಕೊಡಗಿನ ಕಣಿವೆ ಬಳಿ ಹಾರಂಗಿ ಬಲದಂಡೆ ಕಾಲುವೆಯ ಏರಿಯಲ್ಲಿ ಮಂಗಳವಾರ ರಾತ್ರಿ ಬಿರುಕು ಕಾಣಿಸಿಕೊಂಡು ನೀರು ಪೋಲಾಗುತ್ತಿದೆ.<br /> <br /> ಕಣಿವೆ ಗ್ರಾಮದ ಬಳಿ ಕಾವೇರಿ ನದಿಗೆ ನಿರ್ಮಿಸಿರುವ ಹಾರಂಗಿ ಮೇಲ್ಗಾಲುವೆ ಬಳಿ ಇರುವ ಕಾಲುವೆಯಲ್ಲಿ ಮಂಗಳವಾರ ರಾತ್ರಿಯಿಂದ ಈ ಬಿರುಕು ಕಾಣಿಸಿಕೊಂಡಿದೆ. ಈ ನೀರನ್ನು ತಡೆಗಟ್ಟದಿದ್ದಲ್ಲಿ ಬತ್ತದ ಗದ್ದೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ನಷ್ಟ ಸಂಭವಿಸಲಿದೆ ಎಂದು ರೈತರು ಆತಂಕಗೊಂಡಿದ್ದಾರೆ. <br /> <br /> ಕಾಲುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಬಗ್ಗೆ ಹಾರಂಗಿ ನೀರಾವರಿ ಇಲಾಖಾಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ಯಾರೂ ಸ್ಪಂದಿಸಿರುವುದಿಲ್ಲ ಎಂದು ಕೃಷಿಕ ಶಿವಣ್ಣ ದೂರಿದ್ದಾರೆ.<br /> <br /> ಬಿರುಕನ್ನು ತಕ್ಷಣ ಸರಿಪಡಿಸದಿದ್ದಲ್ಲಿ ಬಲದಂಡೆಯ ಕಾಲುವೆಗೆ ಹರಿಸುತ್ತಿರುವ ನೀರು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಕೆ.ಆರ್.ನಗರ, ಹುಣಸೂರು ತಾಲ್ಲೂಕಿನ ಭಾಗದ ರೈತರಿಗೆ ತೊಂದರೆಯಾಗುವ ಸಾಧ್ಯತೆ ಇದೆ. <br /> <br /> ಪೋಲಾಗುತ್ತಿರುವ ನೀರು ತಗ್ಗು ಪ್ರದೇಶದ ಗದ್ದೆಗಳಿಗೆ ಹರಿಯುತ್ತಿದ್ದು, ಪಕ್ಕದಲ್ಲೇ ಇರುವ ಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೂ ಸೇರಿಕೊಂಡಿದೆ.<br /> <br /> ಕಾಲುವೆಯ ಏರಿಯಲ್ಲಿ ಕಾಣಿಸಿಕೊಂಡಿರುವ ಬಿರುಕನ್ನು ತಕ್ಷಣದಲ್ಲಿ ಮುಚ್ಚದಿದ್ದಲ್ಲಿ ಕಾಲುವೆಯಿಂದ ಅಪಾರ ಪ್ರಮಾಣದ ನೀರು ಪೋಲಾಗುವ ಸಾಧ್ಯತೆ ಇದೆ. ಕಾಲುವೆಯ ಬಿರುಕನ್ನು ತಕ್ಷಣ ಮುಚ್ಚಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಿ.ಪಿ. ಶಶಿಧರ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಉತ್ತರ ಕೊಡಗಿನ ಕಣಿವೆ ಬಳಿ ಹಾರಂಗಿ ಬಲದಂಡೆ ಕಾಲುವೆಯ ಏರಿಯಲ್ಲಿ ಮಂಗಳವಾರ ರಾತ್ರಿ ಬಿರುಕು ಕಾಣಿಸಿಕೊಂಡು ನೀರು ಪೋಲಾಗುತ್ತಿದೆ.<br /> <br /> ಕಣಿವೆ ಗ್ರಾಮದ ಬಳಿ ಕಾವೇರಿ ನದಿಗೆ ನಿರ್ಮಿಸಿರುವ ಹಾರಂಗಿ ಮೇಲ್ಗಾಲುವೆ ಬಳಿ ಇರುವ ಕಾಲುವೆಯಲ್ಲಿ ಮಂಗಳವಾರ ರಾತ್ರಿಯಿಂದ ಈ ಬಿರುಕು ಕಾಣಿಸಿಕೊಂಡಿದೆ. ಈ ನೀರನ್ನು ತಡೆಗಟ್ಟದಿದ್ದಲ್ಲಿ ಬತ್ತದ ಗದ್ದೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ನಷ್ಟ ಸಂಭವಿಸಲಿದೆ ಎಂದು ರೈತರು ಆತಂಕಗೊಂಡಿದ್ದಾರೆ. <br /> <br /> ಕಾಲುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಬಗ್ಗೆ ಹಾರಂಗಿ ನೀರಾವರಿ ಇಲಾಖಾಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ಯಾರೂ ಸ್ಪಂದಿಸಿರುವುದಿಲ್ಲ ಎಂದು ಕೃಷಿಕ ಶಿವಣ್ಣ ದೂರಿದ್ದಾರೆ.<br /> <br /> ಬಿರುಕನ್ನು ತಕ್ಷಣ ಸರಿಪಡಿಸದಿದ್ದಲ್ಲಿ ಬಲದಂಡೆಯ ಕಾಲುವೆಗೆ ಹರಿಸುತ್ತಿರುವ ನೀರು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಕೆ.ಆರ್.ನಗರ, ಹುಣಸೂರು ತಾಲ್ಲೂಕಿನ ಭಾಗದ ರೈತರಿಗೆ ತೊಂದರೆಯಾಗುವ ಸಾಧ್ಯತೆ ಇದೆ. <br /> <br /> ಪೋಲಾಗುತ್ತಿರುವ ನೀರು ತಗ್ಗು ಪ್ರದೇಶದ ಗದ್ದೆಗಳಿಗೆ ಹರಿಯುತ್ತಿದ್ದು, ಪಕ್ಕದಲ್ಲೇ ಇರುವ ಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೂ ಸೇರಿಕೊಂಡಿದೆ.<br /> <br /> ಕಾಲುವೆಯ ಏರಿಯಲ್ಲಿ ಕಾಣಿಸಿಕೊಂಡಿರುವ ಬಿರುಕನ್ನು ತಕ್ಷಣದಲ್ಲಿ ಮುಚ್ಚದಿದ್ದಲ್ಲಿ ಕಾಲುವೆಯಿಂದ ಅಪಾರ ಪ್ರಮಾಣದ ನೀರು ಪೋಲಾಗುವ ಸಾಧ್ಯತೆ ಇದೆ. ಕಾಲುವೆಯ ಬಿರುಕನ್ನು ತಕ್ಷಣ ಮುಚ್ಚಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಿ.ಪಿ. ಶಶಿಧರ್ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>