<p><strong>ಬಾಗಲಕೋಟೆ:</strong> ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ದೊಡ್ಡನಗೌಡ ಪಾಟೀಲ ಅವರು ಹುನಗುಂದ ತಾಲ್ಲೂಕಿನಲ್ಲಿ ಇತ್ತೀಚೆಗೆ ಅಪೂರ್ಣ ಮತ್ತು ಕಳಪೆ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ ಆರೋಪಿಸಿದರು.<br /> <br /> ನಗರದಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿನ ವಿವಿಧ ಕಾಮಗಾರಿಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎಂದು ಸಚಿವರು ಸುಳ್ಳು ಹೇಳಿದ್ದಾರೆ ಎಂದು ದೂರಿದರು.<br /> <br /> ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಲೋಕೋಪ ಯೋಗಿ ಸಚಿವರಾಗಿದ್ದಾಗ ಆರಂಭ ಗೊಂಡಿದ್ದ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಬಿಜೆಪಿ ಸಚಿವರು ತಮ್ಮ ಅವಧಿಯಲ್ಲಿ ಆಗಿದೆ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.<br /> <br /> ಇಳಕಲ್ ಪಟ್ಟಣದ ಮಧ್ಯಭಾಗ ದಲ್ಲಿ ನಿರ್ಮಾಣವಾಗಿರುವ ಸೇತುವೆ ಇನ್ನೂ ಪೂರ್ಣಗೊಂಡಿಲ್ಲ ಅಲ್ಲದೇ ಕಳಪೆ ಕಾಮಗಾರಿ ನಡೆದಿದೆ. ಇಷ್ಟಾ ದರೂ ಸಚಿವರು ಉದ್ಘಾಟಿಸಿದ್ದಾರೆ ಎಂದು ಹೇಳಿದರು.<br /> <br /> <strong>ಲೋಕಾಯುಕ್ತರಿಗೆ ದೂರು</strong>: ಹುನಗುಂದ ತಾಲ್ಲೂಕಿನ 63 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ರೂ. 20 ಕೋಟಿ ಯೋಜನೆಯಲ್ಲಿ ಶಾಸ ಕರು ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಇದು ವರೆಗೂ ಒಂದು ಹಳ್ಳಿಗೂ ಕುಡಿಯುವ ನೀರು ಪೂರೈಕೆಯಾಗಿಲ್ಲ, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡು ವುದಾಗಿ ತಿಳಿಸಿದರು.<br /> <br /> ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಂದ 63 ಶಾಸಕರು ಹಣ ಪಡೆದು ಕೊಂಡಿದ್ದಾರೆ ಎಂಬ ಮಾಹಿತಿ ಅವರ ದಿನಚರಿಯಲ್ಲಿ ಪತ್ತೆಯಾಗಿದ್ದು, ಹಣಪಡೆದವರಲ್ಲಿ ಶಾಸಕ ದೊಡ್ಡನ ಗೌಡ ಪಾಟೀಲ ಅವರು ಒಬ್ಬರಾಗಿದ್ದು, ಶೀಘ್ರದಲ್ಲೇ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದರು.<br /> <br /> <strong>ನಗರಸಭೆ ಸಾಮಾನ್ಯ ಸಭೆ ನಾಳೆ<br /> ಬಾಗಲಕೋಟೆ:</strong> ಬಾಗಲಕೋಟೆ ನಗರ ಸಭೆಯ ಸಾಮಾನ್ಯ ಸಭೆ ಇದೇ 12ರಂದು ಬೆಳಿಗ್ಗೆ 10.30ಕ್ಕೆ ನಗರಸಭೆ ಸಭಾಭವನದಲ್ಲಿ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ದೊಡ್ಡನಗೌಡ ಪಾಟೀಲ ಅವರು ಹುನಗುಂದ ತಾಲ್ಲೂಕಿನಲ್ಲಿ ಇತ್ತೀಚೆಗೆ ಅಪೂರ್ಣ ಮತ್ತು ಕಳಪೆ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ ಆರೋಪಿಸಿದರು.<br /> <br /> ನಗರದಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿನ ವಿವಿಧ ಕಾಮಗಾರಿಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎಂದು ಸಚಿವರು ಸುಳ್ಳು ಹೇಳಿದ್ದಾರೆ ಎಂದು ದೂರಿದರು.<br /> <br /> ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಲೋಕೋಪ ಯೋಗಿ ಸಚಿವರಾಗಿದ್ದಾಗ ಆರಂಭ ಗೊಂಡಿದ್ದ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಬಿಜೆಪಿ ಸಚಿವರು ತಮ್ಮ ಅವಧಿಯಲ್ಲಿ ಆಗಿದೆ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.<br /> <br /> ಇಳಕಲ್ ಪಟ್ಟಣದ ಮಧ್ಯಭಾಗ ದಲ್ಲಿ ನಿರ್ಮಾಣವಾಗಿರುವ ಸೇತುವೆ ಇನ್ನೂ ಪೂರ್ಣಗೊಂಡಿಲ್ಲ ಅಲ್ಲದೇ ಕಳಪೆ ಕಾಮಗಾರಿ ನಡೆದಿದೆ. ಇಷ್ಟಾ ದರೂ ಸಚಿವರು ಉದ್ಘಾಟಿಸಿದ್ದಾರೆ ಎಂದು ಹೇಳಿದರು.<br /> <br /> <strong>ಲೋಕಾಯುಕ್ತರಿಗೆ ದೂರು</strong>: ಹುನಗುಂದ ತಾಲ್ಲೂಕಿನ 63 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ರೂ. 20 ಕೋಟಿ ಯೋಜನೆಯಲ್ಲಿ ಶಾಸ ಕರು ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಇದು ವರೆಗೂ ಒಂದು ಹಳ್ಳಿಗೂ ಕುಡಿಯುವ ನೀರು ಪೂರೈಕೆಯಾಗಿಲ್ಲ, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡು ವುದಾಗಿ ತಿಳಿಸಿದರು.<br /> <br /> ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಂದ 63 ಶಾಸಕರು ಹಣ ಪಡೆದು ಕೊಂಡಿದ್ದಾರೆ ಎಂಬ ಮಾಹಿತಿ ಅವರ ದಿನಚರಿಯಲ್ಲಿ ಪತ್ತೆಯಾಗಿದ್ದು, ಹಣಪಡೆದವರಲ್ಲಿ ಶಾಸಕ ದೊಡ್ಡನ ಗೌಡ ಪಾಟೀಲ ಅವರು ಒಬ್ಬರಾಗಿದ್ದು, ಶೀಘ್ರದಲ್ಲೇ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದರು.<br /> <br /> <strong>ನಗರಸಭೆ ಸಾಮಾನ್ಯ ಸಭೆ ನಾಳೆ<br /> ಬಾಗಲಕೋಟೆ:</strong> ಬಾಗಲಕೋಟೆ ನಗರ ಸಭೆಯ ಸಾಮಾನ್ಯ ಸಭೆ ಇದೇ 12ರಂದು ಬೆಳಿಗ್ಗೆ 10.30ಕ್ಕೆ ನಗರಸಭೆ ಸಭಾಭವನದಲ್ಲಿ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>