<p>ಹಾಸನ: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿ ರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲು 20 ಹಾಸಿಗೆಗಳ ಎನ್ಆರ್ಸಿ ವಾರ್ಡ್ ಪ್ರಾರಂಭಿಸಲಾ ಗುವುದು ಎಂದು ವದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.<br /> <br /> ಭಾನುವಾರ ಹಾಸನ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಡೆದ ಗೌರ್ನಿಂಗ್ ಕಮಿಟಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.<br /> <br /> ಇದಕ್ಕೆ ಬೇಕಾಗುವ ಎಲ್ಲ ಸೌಲಭ್ಯವನ್ನು ಪೂರೈಸಲು ಸರ್ಕಾರ ಬದ್ಧವಾಗಿದೆ.ಬೆಂಗಳೂರು,ರಾಯಚೂರು , ಗುಲ್ಬರ್ಗ ಹಾಗೂ ಮೈಸೂರಿನಲ್ಲಿ ಈ ರೀತಿಯ ವಾರ್ಡ್ ತೆರೆಯಲಾಗಿದೆ ಎಂದರು.<br /> <br /> ವಾರ್ಡ್ನಲ್ಲಿ ಪೌಷ್ಟಿಕ ಆಹಾರ ತಯಾರಿಕೆಗೆ ಅಡುಗೆಕೊಣೆ, ಮಕ್ಕಳಿಗೆ ಆಟಿಕೆ ಪೂರೈಸಲಾಗುವುದು. ಪೋಷಕರಿಗೆ ಈ ಬಗ್ಗೆ ತಿಳಿವಳಿಕೆ ನೀಡಲು ನುರಿತ ತಜ್ಞರನ್ನು ನೇಮಿಸಲಾಗುವುದು ಎಂದರು. <br /> <br /> ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕರ್ತವ್ಯ ನಿರ್ವಹಣೆ ಪಾರದರ್ಶಕತೆ ಕಾಯ್ದುಕೊಳ್ಳಲು ಆಸ್ಪತ್ರೆಯಲ್ಲಿ ವೈದ್ಯರ ಹಾಜರಾತಿ ಪರೀಕ್ಷಿಸಲು `ಈ ಹಾಜರಾತಿ~ ಬಯೊಮೇಟ್ರಿಕ್ ವ್ಯವಸ್ಥೆ ಜಾರಿಗೆ ಮೂಲಕ ಹಾಜರಾತಿ ಹಾಗೂ ಜಾಬ್ ಚಾರ್ಟ್ ಆಧಾರದಲ್ಲಿ ಸಂಬಳ ನೀಡಲು ನಿರ್ಧರಿಸಲಾಗಿದೆ ಎಂದರು. <br /> <br /> ಭಾರತೀಯ ವೈದ್ಯಕೀಯ ಮಂಡಳಿ ರಾಜ್ಯದ ಆರು ಸರ್ಕಾರಿ ವೈದ್ಯಕೀಯ ವಿದ್ಯಾಲಯಗಳಿಗೆ ಶಾಶ್ವತ ಮಾನ್ಯತೆ ನೀಡಿದೆ ಎಂದು ಸಚಿವರು ತಿಳಿಸಿದರು.<br /> <br /> ರಾಜ್ಯ ಆರು ವೈದ್ಯಕೀಯ ಕಾಲೇಜಿನ ಮಾನ್ಯತೆ ಯನ್ನು ಪ್ರತಿ ವರ್ಷ ನವೀಕರಣ ಮಾಡಿಸಲಾಗುತ್ತಿತ್ತು. ಎಂ.ಸಿ.ಐ ನಿಬಂಧನೆಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಶಾಶ್ವತ ಮಾನ್ಯತೆ ದೊರೆತಿದೆ ಎಂದರು. <br /> <br /> ರಾಜ್ಯದಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ 2013-14 ಸಾಲಿನಿಂದ ರಾಜ್ಯದ ಆರು ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು 150ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.<br /> <br /> ಹಾಸನ ವೈದ್ಯಕೀಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆ ಕಾಮಗಾರಿಗೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲಿದ್ದು, ಅಕ್ಟೋಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.<br /> <br /> ಜಿಲ್ಲೆಯ ಸರ್ಕಾರಿ ನರ್ಸಿಂಗ್ ಕಾಲೇಜ್ಅನ್ನು ಹಾಸನ ವೈದ್ಯಕೀಯ ಮಂಡಳಿ ಅಧಿನದಲ್ಲಿ ನಡೆಸಲು ಆದೇಶ ನೀಡಲಾಗಿದೆ ಎಂದರು. <br /> <br /> ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬಿಸಿನೀರು ಒದಗಿಸಲು ಸೋಲಾರ್ ಹೀಟರ್ ವ್ಯವಸ್ಥೆ ಹಾಗೂ ನೀರು ಶುದ್ಧಿಕರಣ ಘಟಕ ಪ್ರಾರಂಭಿಸುವ ಮೂಲಕ 1 ರೂಪಾಯಿನಲ್ಲಿ 10 ಲೀಟರ್ ಶುದ್ಧ ನೀರು ಪೂರೈಸಲು ಕ್ರಮಕೈಗೊಳ್ಳಲಾಗಿದೆ.<br /> <br /> ರೋಗಿಗಳನ್ನು ನೋಡಲು ಬರುವ ಸಂಬಂಧಿಕರಿಗೆ ವಿಶ್ರಾಂತಿ ಕೊಠಡಿ ತೆರೆಯಲಾಗುವುದು. ಹಾಸನ ಸರ್ಕಾರಿ ಆಸ್ಪತ್ರೆಗೆ ಸಿ.ಟಿ ಸ್ಕ್ಯಾನ್ ಉಪಕರಣ ಸೌಲಭ್ಯ ಕಲ್ಪಿಸಲು ಆದೇಶಿಸಲಾ ಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿ ರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲು 20 ಹಾಸಿಗೆಗಳ ಎನ್ಆರ್ಸಿ ವಾರ್ಡ್ ಪ್ರಾರಂಭಿಸಲಾ ಗುವುದು ಎಂದು ವದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.<br /> <br /> ಭಾನುವಾರ ಹಾಸನ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಡೆದ ಗೌರ್ನಿಂಗ್ ಕಮಿಟಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.<br /> <br /> ಇದಕ್ಕೆ ಬೇಕಾಗುವ ಎಲ್ಲ ಸೌಲಭ್ಯವನ್ನು ಪೂರೈಸಲು ಸರ್ಕಾರ ಬದ್ಧವಾಗಿದೆ.ಬೆಂಗಳೂರು,ರಾಯಚೂರು , ಗುಲ್ಬರ್ಗ ಹಾಗೂ ಮೈಸೂರಿನಲ್ಲಿ ಈ ರೀತಿಯ ವಾರ್ಡ್ ತೆರೆಯಲಾಗಿದೆ ಎಂದರು.<br /> <br /> ವಾರ್ಡ್ನಲ್ಲಿ ಪೌಷ್ಟಿಕ ಆಹಾರ ತಯಾರಿಕೆಗೆ ಅಡುಗೆಕೊಣೆ, ಮಕ್ಕಳಿಗೆ ಆಟಿಕೆ ಪೂರೈಸಲಾಗುವುದು. ಪೋಷಕರಿಗೆ ಈ ಬಗ್ಗೆ ತಿಳಿವಳಿಕೆ ನೀಡಲು ನುರಿತ ತಜ್ಞರನ್ನು ನೇಮಿಸಲಾಗುವುದು ಎಂದರು. <br /> <br /> ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕರ್ತವ್ಯ ನಿರ್ವಹಣೆ ಪಾರದರ್ಶಕತೆ ಕಾಯ್ದುಕೊಳ್ಳಲು ಆಸ್ಪತ್ರೆಯಲ್ಲಿ ವೈದ್ಯರ ಹಾಜರಾತಿ ಪರೀಕ್ಷಿಸಲು `ಈ ಹಾಜರಾತಿ~ ಬಯೊಮೇಟ್ರಿಕ್ ವ್ಯವಸ್ಥೆ ಜಾರಿಗೆ ಮೂಲಕ ಹಾಜರಾತಿ ಹಾಗೂ ಜಾಬ್ ಚಾರ್ಟ್ ಆಧಾರದಲ್ಲಿ ಸಂಬಳ ನೀಡಲು ನಿರ್ಧರಿಸಲಾಗಿದೆ ಎಂದರು. <br /> <br /> ಭಾರತೀಯ ವೈದ್ಯಕೀಯ ಮಂಡಳಿ ರಾಜ್ಯದ ಆರು ಸರ್ಕಾರಿ ವೈದ್ಯಕೀಯ ವಿದ್ಯಾಲಯಗಳಿಗೆ ಶಾಶ್ವತ ಮಾನ್ಯತೆ ನೀಡಿದೆ ಎಂದು ಸಚಿವರು ತಿಳಿಸಿದರು.<br /> <br /> ರಾಜ್ಯ ಆರು ವೈದ್ಯಕೀಯ ಕಾಲೇಜಿನ ಮಾನ್ಯತೆ ಯನ್ನು ಪ್ರತಿ ವರ್ಷ ನವೀಕರಣ ಮಾಡಿಸಲಾಗುತ್ತಿತ್ತು. ಎಂ.ಸಿ.ಐ ನಿಬಂಧನೆಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಶಾಶ್ವತ ಮಾನ್ಯತೆ ದೊರೆತಿದೆ ಎಂದರು. <br /> <br /> ರಾಜ್ಯದಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ 2013-14 ಸಾಲಿನಿಂದ ರಾಜ್ಯದ ಆರು ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು 150ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.<br /> <br /> ಹಾಸನ ವೈದ್ಯಕೀಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆ ಕಾಮಗಾರಿಗೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲಿದ್ದು, ಅಕ್ಟೋಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.<br /> <br /> ಜಿಲ್ಲೆಯ ಸರ್ಕಾರಿ ನರ್ಸಿಂಗ್ ಕಾಲೇಜ್ಅನ್ನು ಹಾಸನ ವೈದ್ಯಕೀಯ ಮಂಡಳಿ ಅಧಿನದಲ್ಲಿ ನಡೆಸಲು ಆದೇಶ ನೀಡಲಾಗಿದೆ ಎಂದರು. <br /> <br /> ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬಿಸಿನೀರು ಒದಗಿಸಲು ಸೋಲಾರ್ ಹೀಟರ್ ವ್ಯವಸ್ಥೆ ಹಾಗೂ ನೀರು ಶುದ್ಧಿಕರಣ ಘಟಕ ಪ್ರಾರಂಭಿಸುವ ಮೂಲಕ 1 ರೂಪಾಯಿನಲ್ಲಿ 10 ಲೀಟರ್ ಶುದ್ಧ ನೀರು ಪೂರೈಸಲು ಕ್ರಮಕೈಗೊಳ್ಳಲಾಗಿದೆ.<br /> <br /> ರೋಗಿಗಳನ್ನು ನೋಡಲು ಬರುವ ಸಂಬಂಧಿಕರಿಗೆ ವಿಶ್ರಾಂತಿ ಕೊಠಡಿ ತೆರೆಯಲಾಗುವುದು. ಹಾಸನ ಸರ್ಕಾರಿ ಆಸ್ಪತ್ರೆಗೆ ಸಿ.ಟಿ ಸ್ಕ್ಯಾನ್ ಉಪಕರಣ ಸೌಲಭ್ಯ ಕಲ್ಪಿಸಲು ಆದೇಶಿಸಲಾ ಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>