ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಬಂಧನ
ಹೊಸಕೋಟೆ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇರೆ ಪೊಲೀಸರು ಯುವಕನೊಬ್ಬನನ್ನು ಬಂಧಿಸಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ರಾಯಚೂರು ಮೂಲದ ಬಸವರಾಜು (23) ಬಂಧಿತ ಆರೋಪಿ. ವಿದ್ಯಾರಣ್ಯಪುರದ ಬಳಿಯ ತಿಂಡ್ಲು ಗ್ರಾಮದಲ್ಲಿ ವಾಸವಾಗಿದ್ದ ಬಸವರಾಜು ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಆತ ಮನೆಯ ಪಕ್ಕದ ಯುವತಿಯೊಬ್ಬಳ ಜೊತೆ ಸ್ನೇಹ ಬೆಳಸಿದ. ಅದರಂತೆ ಮೇ.9 ರಂದು ಯುವತಿ ತನ್ನ ಸಂಬಂಧಿಕರ ಮನೆ ಮದುವೆ ಕಾರ್ಯದಲ್ಲಿ ಭಾಗವಹಿಸಲು ಬಿದರಹಳ್ಳಿ ಗ್ರಾಮಕ್ಕೆ ಬಂದಿದ್ದಳು. ಅಲ್ಲಿ ಯವತಿಯನ್ನು ಅಪಹರಿಸಿದ ಬಸವರಾಜು ಆಕೆಯನ್ನು ರಾಯಚೂರು ಜಿಲ್ಲೆಯ ಗಲಿಗ ಗ್ರಾಮದ ತನ್ನ ದೊಡ್ಡಮ್ಮನ ಮನೆಗೆ ಕರೆದೋಯ್ದಿದ್ದ.
ಮಗಳು ಕಾಣೆಯಾದ ಬಗ್ಗೆ ತಾಯಿ ಗೌರಮ್ಮ ಆವಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಯುವತಿ ಕೊಟ್ಟ ಹೇಳಿಕೆಯನ್ನು ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.