<p><strong>ಬಂಗಾರಪೇಟೆ:</strong> ಅಬಕಾರಿ ಕಚೇರಿಯನ್ನು ಪಟ್ಟಣದಿಂದ ರಾತ್ರೋ ರಾತ್ರಿ ಕೆಜಿಎಫ್ ಸಮೀಪದ ಪಾರಾಂಡಹಳ್ಳಿಗೆ ಸ್ಥಳಾಂತರಿಸಿರುವುದನ್ನು ವಿರೋಧಿಸಿ ಕರ್ನಾಟಕ ದಲಿತ ಸಿಂಹ ಸೇನೆ ಕಾರ್ಯಕರ್ತರು ಪಟ್ಟಣದ ಅಬಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಇದುವರೆಗೂ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸರ್ಕಾರದ ಆದೇಶವಿಲ್ಲದೆ ಸ್ಥಳಾಂತರಿಸಿರುವುದು ಖಂಡನೀಯ. ಈ ಬಗ್ಗೆ ನಿರ್ಧಾರ ಕೈಗೊಂಡಿರುವ ಅಬಕಾರಿ ನಿರೀಕ್ಷಕ ರಘುನಾಥರೆಡ್ಡಿ ಅಮಾನತು ಮಾಡಬೇಕೆಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸೂಲಿಕುಂಟೆ ಆನಂದ್, ತಾಲ್ಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಕಾರ್ಯದರ್ಶಿ ಮುತ್ತೇನಹಳ್ಳಿ ಕೃಷ್ಣಪ್ಪ, ಪಿಳ್ಳಪ್ಪ ಮುಂತಾದವರು ಹಾಜರಿದ್ದರು.<br /> <strong><br /> ಅಪರಿಚಿತ ಮಹಿಳೆ ಶವ ಪತ್ತೆ<br /> ಮುಳಬಾಗಲು:</strong> ತಾಲ್ಲೂಕಿನ ಭೀಮಪುರ ಗ್ರಾಮದ ಹೊರವಲಯದ ಬೊಡಿಬಂಡ ಗುಡ್ಡದ ಮೇಲೆ ಬುಧವಾರ 30 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.</p>.<p>ಮಹಿಳೆಯನ್ನು ಹತ್ಯೆ ಮಾಡಿ ಗುರುತು ಸಿಗದಷ್ಟು ಸುಟ್ಟು ಹಾಕಲಾಗಿದೆ. ವೈರಿನಿಂದ ಕತ್ತು ಹಿಸುಕಿರುವುದು ಕಂಡು ಬಂದಿದೆ. ಮಂಗಳವಾರ ರಾತ್ರಿ ಕೊಲೆ ನಡೆದಿರಬಹುದು ಎಂದು ಸಬ್ ಇನ್ಸ್ಪೆ ಕ್ಟರ್ ಬಸವರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಅಬಕಾರಿ ಕಚೇರಿಯನ್ನು ಪಟ್ಟಣದಿಂದ ರಾತ್ರೋ ರಾತ್ರಿ ಕೆಜಿಎಫ್ ಸಮೀಪದ ಪಾರಾಂಡಹಳ್ಳಿಗೆ ಸ್ಥಳಾಂತರಿಸಿರುವುದನ್ನು ವಿರೋಧಿಸಿ ಕರ್ನಾಟಕ ದಲಿತ ಸಿಂಹ ಸೇನೆ ಕಾರ್ಯಕರ್ತರು ಪಟ್ಟಣದ ಅಬಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಇದುವರೆಗೂ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸರ್ಕಾರದ ಆದೇಶವಿಲ್ಲದೆ ಸ್ಥಳಾಂತರಿಸಿರುವುದು ಖಂಡನೀಯ. ಈ ಬಗ್ಗೆ ನಿರ್ಧಾರ ಕೈಗೊಂಡಿರುವ ಅಬಕಾರಿ ನಿರೀಕ್ಷಕ ರಘುನಾಥರೆಡ್ಡಿ ಅಮಾನತು ಮಾಡಬೇಕೆಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸೂಲಿಕುಂಟೆ ಆನಂದ್, ತಾಲ್ಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಕಾರ್ಯದರ್ಶಿ ಮುತ್ತೇನಹಳ್ಳಿ ಕೃಷ್ಣಪ್ಪ, ಪಿಳ್ಳಪ್ಪ ಮುಂತಾದವರು ಹಾಜರಿದ್ದರು.<br /> <strong><br /> ಅಪರಿಚಿತ ಮಹಿಳೆ ಶವ ಪತ್ತೆ<br /> ಮುಳಬಾಗಲು:</strong> ತಾಲ್ಲೂಕಿನ ಭೀಮಪುರ ಗ್ರಾಮದ ಹೊರವಲಯದ ಬೊಡಿಬಂಡ ಗುಡ್ಡದ ಮೇಲೆ ಬುಧವಾರ 30 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.</p>.<p>ಮಹಿಳೆಯನ್ನು ಹತ್ಯೆ ಮಾಡಿ ಗುರುತು ಸಿಗದಷ್ಟು ಸುಟ್ಟು ಹಾಕಲಾಗಿದೆ. ವೈರಿನಿಂದ ಕತ್ತು ಹಿಸುಕಿರುವುದು ಕಂಡು ಬಂದಿದೆ. ಮಂಗಳವಾರ ರಾತ್ರಿ ಕೊಲೆ ನಡೆದಿರಬಹುದು ಎಂದು ಸಬ್ ಇನ್ಸ್ಪೆ ಕ್ಟರ್ ಬಸವರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>