<p>ಚಾಮರಾಜನಗರ: ಮೌಲಾನ ಅಬ್ದುಲ್ ಕಲಂ ಆಜಾದ್ ಅವರು ಶಿಕ್ಷಣ ಬಗ್ಗೆ ತಮ್ಮದೇ ಆದ ದೃಷ್ಟಿಕೋನ ಹೊಂದಿದ್ದರು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಾದುಲ್ಲ ತಿಳಿಸಿದರು.<br /> <br /> ನಗರದ ಗಾಳೀಪುರ ಬಡಾವಣೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಮೌಲಾನಾ ಅಬ್ದುಲ್ ಕಲಂ ಆಜಾದ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಅವರು, ಬ್ರಿಟೀಷರು ದೇಶವನ್ನು ತೊರೆದ ನಂತರವೇ ಜ್ಞಾನ, ವಿಜ್ಞಾನ ತಂತ್ರಜ್ಞಾನಗಳಲ್ಲಿ ಸುಧಾರಣೆ ಕಾಣಲು ಸಾಧ್ಯ. ಪ್ರೌಢ ಶಿಕ್ಷಣ, ಸಂಶೋಧನೆ, ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದ ಅವರು ಶಿಕ್ಷಕರ ಏಳಿಗಾಗಿ ಶ್ರಮಿಸಿದರು.<br /> <br /> ಹಿಂದುಳಿದ ವರ್ಗಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಶಿಕ್ಷಣ ಸಚಿವರಾದ ಬಳಿಕ ಮೂರು ಲಕ್ಷಗಳಿಗೆ ಮೀಸಲಾಗಿದ್ದ ವಿದ್ಯಾರ್ಥಿ ವೇತನವನ್ನು ಎರಡು ಕೋಟಿ ರೂಪಾಯಿಗೆ ಏರಿಕೆ ಮಾಡಿದರು ಎಂದು ತಿಳಿಸಿದರು. <br /> <br /> ಇವರ ಅವಧಿಯಲ್ಲಿ ಅಕಾಡೆಮಿಗಳು ಸ್ಥಾಪನೆಯಾದವು. ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ ನೀಡಲು ಶ್ರಮಿಸಿದ್ದರು. ಇದರ ಸ್ಮರಣಾರ್ಥ ಅವರ ಜನ್ಮ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಉಪನ್ಯಾಸಕ ಎನ್.ಹನುಮಯ್ಯ ಮಾತನಾಡಿ, ಅಬ್ದುಲ್ ಕಲಂ ಆಜಾದ್ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದರು ಎಂದು ತಿಳಿಸಿದರು. ಶಿಕ್ಷಕಿ ಕೌಸರಿ, ಶಮಾಭಾನು, ನೂರ್ ಅಹಮದಿ ಬೇಗಂ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಮೌಲಾನ ಅಬ್ದುಲ್ ಕಲಂ ಆಜಾದ್ ಅವರು ಶಿಕ್ಷಣ ಬಗ್ಗೆ ತಮ್ಮದೇ ಆದ ದೃಷ್ಟಿಕೋನ ಹೊಂದಿದ್ದರು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಾದುಲ್ಲ ತಿಳಿಸಿದರು.<br /> <br /> ನಗರದ ಗಾಳೀಪುರ ಬಡಾವಣೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಮೌಲಾನಾ ಅಬ್ದುಲ್ ಕಲಂ ಆಜಾದ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಅವರು, ಬ್ರಿಟೀಷರು ದೇಶವನ್ನು ತೊರೆದ ನಂತರವೇ ಜ್ಞಾನ, ವಿಜ್ಞಾನ ತಂತ್ರಜ್ಞಾನಗಳಲ್ಲಿ ಸುಧಾರಣೆ ಕಾಣಲು ಸಾಧ್ಯ. ಪ್ರೌಢ ಶಿಕ್ಷಣ, ಸಂಶೋಧನೆ, ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದ ಅವರು ಶಿಕ್ಷಕರ ಏಳಿಗಾಗಿ ಶ್ರಮಿಸಿದರು.<br /> <br /> ಹಿಂದುಳಿದ ವರ್ಗಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಶಿಕ್ಷಣ ಸಚಿವರಾದ ಬಳಿಕ ಮೂರು ಲಕ್ಷಗಳಿಗೆ ಮೀಸಲಾಗಿದ್ದ ವಿದ್ಯಾರ್ಥಿ ವೇತನವನ್ನು ಎರಡು ಕೋಟಿ ರೂಪಾಯಿಗೆ ಏರಿಕೆ ಮಾಡಿದರು ಎಂದು ತಿಳಿಸಿದರು. <br /> <br /> ಇವರ ಅವಧಿಯಲ್ಲಿ ಅಕಾಡೆಮಿಗಳು ಸ್ಥಾಪನೆಯಾದವು. ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ ನೀಡಲು ಶ್ರಮಿಸಿದ್ದರು. ಇದರ ಸ್ಮರಣಾರ್ಥ ಅವರ ಜನ್ಮ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.<br /> <br /> ಉಪನ್ಯಾಸಕ ಎನ್.ಹನುಮಯ್ಯ ಮಾತನಾಡಿ, ಅಬ್ದುಲ್ ಕಲಂ ಆಜಾದ್ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದರು ಎಂದು ತಿಳಿಸಿದರು. ಶಿಕ್ಷಕಿ ಕೌಸರಿ, ಶಮಾಭಾನು, ನೂರ್ ಅಹಮದಿ ಬೇಗಂ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>