<p><strong>ಮಂಡ್ಯ: </strong>ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ ಅಂಶಗಳು ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿ, ನಿಗದಿತ ಕಾಲಮಿತಿಯೊಳಗೆ ನಿಖರವಾದ ಮಾಹಿತಿಯನ್ನು ಕ್ರೋಡೀಕರಿಸಲು ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಜಯರಾಂ ಹೇಳಿದರು.<br /> <br /> ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಸಾಂಖ್ಯಿಕ ವ್ಯವಸ್ಥೆ ಅಭಿವೃದ್ಧಿ ಸಂಸ್ಥೆ, ಜಿಪಂ ಸಹಭಾಗಿತ್ವದಲ್ಲಿ ಜಿಲ್ಲಾ ಆದಾಯ ಅಂದಾಜು, ಬೆಲೆ ಸೂಚ್ಯಾಂಕ, ಸ್ಥಳೀಯ ಸಂಸ್ಥೆಗಳ ಅಂಕಿ-ಅಂಶಗಳ ಕ್ರೋಡೀಕರಣದ ಬಗ್ಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.<br /> <br /> ಅರ್ಥ ವ್ಯವಸ್ಥೆಯ ಬೆಳವಣಿಗೆಯನ್ನು ಅಳೆಯಲು ಅಂಕಿ ಅಂಶಗಳು ಪ್ರಮುಖ ಮಾನದಂಡ ಆಗಿರುವುದರಿಂದ, ಸ್ಥಳೀಯವಾಗಿ ಲಭ್ಯವಿರುವ ಮಾಹಿತಿ ಬಳಸಿಕೊಂಡು ಜಿಲ್ಲಾ ಆದಾಯ ಅಂದಾಜುಗಳನ್ನು ಸೂಕ್ತ ರೀತಿಯಲ್ಲಿ ತಯಾರಿಸಬಹುದಾಗಿದೆ ಎಂದು ಹೇಳಿದರು.<br /> <br /> ಕೃಷಿ, ಅರಣ್ಯ, ಮೀನುಗಾರಿಕೆ, ಗಣಿಗಾರಿಕೆ ಸೇರಿದಂತೆ ವಿವಿಧ ವಲಯ ಗಳ ಕೊಡುಗೆಯು ಜಿಲ್ಲಾದಾಯಕ್ಕಿದೆ. ಇದರ ಆಧಾರದಲ್ಲೇ ಅಭಿವೃದ್ಧಿ ಯೋಜನೆ ರೂಪಿಸಲು ಸಾಧ್ಯ. ಆದರೆ, ಈ ಕ್ಷೇತ್ರಗಳ ಸಾಮರ್ಥ್ಯವನ್ನು ಸ್ಪಷ್ಟವಾಗಿ ಅರಿಯಲು ವಿಫಲರಾಗಿದ್ದೇವೆ ಎಂದು ಹೇಳಿದರು.<br /> <br /> ವೈಫಲ್ಯಕ್ಕೆ ವೈಜ್ಞಾನಿಕ ಚರ್ಚೆ ನಡೆಸಬೇಕು. ಪ್ರಗತಿ ಮತ್ತು ತೊಡಕುಗಳನ್ನು ವಿಶ್ಲೇಷಣಾತ್ಮಕವಾಗಿ ಅಧ್ಯಾಯನ ಮಾಡಬೇಕು. ಈ ಕುರಿತ ಲಭ್ಯ ವರದಿಗಳು, ಸಮೀಕ್ಷೆಗಳ ಮಾಹಿತಿ ಇದ್ದರೂ, ತಿಳಿದುಕೊಳ್ಳುವ ಪ್ರಯತ್ನವಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಮ್ಮ ದೃಷ್ಟಿಕೋನವನ್ನು ಬದಲಾಯಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಅಂಕಿ ಅಂಶಗಳನ್ನು ಸರಿಯಾಗಿ ಅಂದಾಜು ಮಾಡುವಲ್ಲಿ ವಿಫಲವಾದರೆ ಅಸಮತೋಲನಕ್ಕೆ ಕಾರಣವಾಗುತ್ತದೆ. ತಾತ್ಕಾಲಿಕ ಪರಿಹಾರಕ್ಕಿಂತ, ಶಾಶ್ವತ ಪರಿಹಾರ ದೊರಕಿಸಲು ಆದ್ಯತೆ ನೀಡಬೇಕಿದ್ದು, ಅಧಿಕಾರಿಗಳು ತಮ್ಮ ವೃತ್ತಿಪರತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿರ್ದೇಶಕ ರಾಜಶೇಖರಪ್ಪ, ಯೋಜನಾ ನಿರ್ದೇಶಕ ಶಂಕರರಾಜು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶ್ರೀನಿವಾಸರಾವ್, ಜಿಪಂ ಮುಖ್ಯ ಯೋಜನಾಧಿಕಾರಿ ಕೆಂಡಗಣ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ ಅಂಶಗಳು ಮಹತ್ವದ ಪಾತ್ರವಹಿಸುತ್ತದೆ. ಹೀಗಾಗಿ, ನಿಗದಿತ ಕಾಲಮಿತಿಯೊಳಗೆ ನಿಖರವಾದ ಮಾಹಿತಿಯನ್ನು ಕ್ರೋಡೀಕರಿಸಲು ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಜಯರಾಂ ಹೇಳಿದರು.<br /> <br /> ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಸಾಂಖ್ಯಿಕ ವ್ಯವಸ್ಥೆ ಅಭಿವೃದ್ಧಿ ಸಂಸ್ಥೆ, ಜಿಪಂ ಸಹಭಾಗಿತ್ವದಲ್ಲಿ ಜಿಲ್ಲಾ ಆದಾಯ ಅಂದಾಜು, ಬೆಲೆ ಸೂಚ್ಯಾಂಕ, ಸ್ಥಳೀಯ ಸಂಸ್ಥೆಗಳ ಅಂಕಿ-ಅಂಶಗಳ ಕ್ರೋಡೀಕರಣದ ಬಗ್ಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.<br /> <br /> ಅರ್ಥ ವ್ಯವಸ್ಥೆಯ ಬೆಳವಣಿಗೆಯನ್ನು ಅಳೆಯಲು ಅಂಕಿ ಅಂಶಗಳು ಪ್ರಮುಖ ಮಾನದಂಡ ಆಗಿರುವುದರಿಂದ, ಸ್ಥಳೀಯವಾಗಿ ಲಭ್ಯವಿರುವ ಮಾಹಿತಿ ಬಳಸಿಕೊಂಡು ಜಿಲ್ಲಾ ಆದಾಯ ಅಂದಾಜುಗಳನ್ನು ಸೂಕ್ತ ರೀತಿಯಲ್ಲಿ ತಯಾರಿಸಬಹುದಾಗಿದೆ ಎಂದು ಹೇಳಿದರು.<br /> <br /> ಕೃಷಿ, ಅರಣ್ಯ, ಮೀನುಗಾರಿಕೆ, ಗಣಿಗಾರಿಕೆ ಸೇರಿದಂತೆ ವಿವಿಧ ವಲಯ ಗಳ ಕೊಡುಗೆಯು ಜಿಲ್ಲಾದಾಯಕ್ಕಿದೆ. ಇದರ ಆಧಾರದಲ್ಲೇ ಅಭಿವೃದ್ಧಿ ಯೋಜನೆ ರೂಪಿಸಲು ಸಾಧ್ಯ. ಆದರೆ, ಈ ಕ್ಷೇತ್ರಗಳ ಸಾಮರ್ಥ್ಯವನ್ನು ಸ್ಪಷ್ಟವಾಗಿ ಅರಿಯಲು ವಿಫಲರಾಗಿದ್ದೇವೆ ಎಂದು ಹೇಳಿದರು.<br /> <br /> ವೈಫಲ್ಯಕ್ಕೆ ವೈಜ್ಞಾನಿಕ ಚರ್ಚೆ ನಡೆಸಬೇಕು. ಪ್ರಗತಿ ಮತ್ತು ತೊಡಕುಗಳನ್ನು ವಿಶ್ಲೇಷಣಾತ್ಮಕವಾಗಿ ಅಧ್ಯಾಯನ ಮಾಡಬೇಕು. ಈ ಕುರಿತ ಲಭ್ಯ ವರದಿಗಳು, ಸಮೀಕ್ಷೆಗಳ ಮಾಹಿತಿ ಇದ್ದರೂ, ತಿಳಿದುಕೊಳ್ಳುವ ಪ್ರಯತ್ನವಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಮ್ಮ ದೃಷ್ಟಿಕೋನವನ್ನು ಬದಲಾಯಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಅಂಕಿ ಅಂಶಗಳನ್ನು ಸರಿಯಾಗಿ ಅಂದಾಜು ಮಾಡುವಲ್ಲಿ ವಿಫಲವಾದರೆ ಅಸಮತೋಲನಕ್ಕೆ ಕಾರಣವಾಗುತ್ತದೆ. ತಾತ್ಕಾಲಿಕ ಪರಿಹಾರಕ್ಕಿಂತ, ಶಾಶ್ವತ ಪರಿಹಾರ ದೊರಕಿಸಲು ಆದ್ಯತೆ ನೀಡಬೇಕಿದ್ದು, ಅಧಿಕಾರಿಗಳು ತಮ್ಮ ವೃತ್ತಿಪರತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.<br /> <br /> ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿರ್ದೇಶಕ ರಾಜಶೇಖರಪ್ಪ, ಯೋಜನಾ ನಿರ್ದೇಶಕ ಶಂಕರರಾಜು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶ್ರೀನಿವಾಸರಾವ್, ಜಿಪಂ ಮುಖ್ಯ ಯೋಜನಾಧಿಕಾರಿ ಕೆಂಡಗಣ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>