<p>ಬೆಳಗಾವಿ: ಅಭಿವೃದ್ಧಿಯೇ ಮಂತ್ರ ಎನ್ನುತ್ತಾರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಅಭಿವೃದ್ಧಿ ಹೋಗಲಿ, ಅಭಿವೃದ್ಧಿ ಪರಿಶೀಲನೆಯ ತ್ರೈಮಾಸಿಕ ಸಭೆಗಳೂ ಸರಿಯಾಗಿ ನಡೆಯುತ್ತಿಲ್ಲ.<br /> ವಿವಿಧ ಇಲಾಖೆಗಳು ಜಿಲ್ಲೆಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಆದರೆ ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಈ ಸಭೆಗಳೂ ಸರಿಯಾಗಿ ನಡೆದಿಲ್ಲ. <br /> <br /> ಬಿಜೆಪಿ ನೇತೃತ್ವದ ಸರ್ಕಾರ 2008ರಲ್ಲಿ ಅಸ್ವಿತ್ವಕ್ಕೆ ಬಂದಾಗ ಹಾವೇರಿ ಜಿಲ್ಲೆಯ ಶಿಗ್ಗಾಂವದಿಂದ ಆಯ್ಕೆಯಾಗಿರುವ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಹೀಗಾಗಿ ಅವರು ನಿಗದಿತ ಸಮಯದಲ್ಲಿ ಸಭೆ ನಡೆಸುತ್ತಿಲ್ಲ ಎಂಬ ಆರೋಪವಿತ್ತು.<br /> <br /> ಆದರೆ ಒಂದು ವರ್ಷದಿಂದ ಜಿಲ್ಲಾ ಉಸ್ತುವಾರಿಯನ್ನು ಜಿಲ್ಲೆಯ ಜನಪ್ರತಿನಿಧಿಯೇ ಆಗಿರುವ ಕೃಷಿ ಸಚಿವ ಉಮೇಶ ಕತ್ತಿ ವಹಿಸಿಕೊಂಡಿದ್ದಾರೆ. ಈಗಲೂ ಸಭೆಗಳು ಸರಿಯಾಗಿ ನಡೆಯುತ್ತಿಲ್ಲ.<br /> <br /> ಇದುವರೆಗೆ ಕೇವಲ ಮೂರು ಸಭೆಗಳು ಮಾತ್ರ ನಡೆದಿವೆ. ಅವೂ ಮೂರರಿಂದ ನಾಲ್ಕು ತಿಂಗಳು ವಿಳಂಬವಾಗಿ ನಡೆದಿವೆ. ಇಂತಹ ಸಭೆಗಳಲ್ಲಿ ಗುರಿ ಸಾಧನೆ ಬಗೆಗೆ ಪ್ರಶ್ನಿಸಿದರೆ, ~ಅದು ಮೂರು ತಿಂಗಳ ಹಿಂದಿನ ವರದಿ. ಈಗ ಗುರಿ ಸಾಧನೆ ಮಾಡಲಾಗಿದೆ~ ಎಂದು ಹೇಳಿ ಅಧಿಕಾರಿಗಳು ಕೈತೊಳೆದುಕೊಳ್ಳುತ್ತಾರೆ. ಅದರಲ್ಲೂ ಕಳೆದ ಆರ್ಥಿಕ ವರ್ಷಾಂತ್ಯದ ಮಾರ್ಚ್ ಹಾಗೂ ಪ್ರಸಕ್ತ ವರ್ಷದ ಮಾರ್ಚ್ ಅಂತ್ಯದ ಪರಿಶೀಲನಾ ಸಭೆಗಳು ನಡೆದಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ. <br /> <br /> ~ವಾರ್ಷಿಕ ಗುರಿ ಸಾಧನೆ, ಅನುದಾನ ಬಳಕೆಯ ಲೆಕ್ಕ ಇನ್ನೂ ಸಿಗಬೇಕಿದೆ. ಬಿಜೆಪಿ ಸರ್ಕಾರದ ಸಾಧನೆಗಳೆಲ್ಲ ಕಾಗದದಲ್ಲಿ ಆಗಿವೆ. ಸಭೆ ಕರೆದರೆ ಈ ಹುಳುಕುಗಳನ್ನು ಪ್ರತಿಪಕ್ಷಗಳು ಹೊರ ತರುತ್ತವೆ ಎಂಬ ಭಯದಿಂದ ಸಭೆಗಳನ್ನು ನಿಗದಿತವಾಗಿ ನಡೆಸುತ್ತಿಲ್ಲ. ಜಿಲ್ಲೆಯ ಆಡಳಿತದ ಮೇಲೂ ಹಿಡಿತ ತಪ್ಪಿದೆ~ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸುತ್ತಾರೆ.<br /> <br /> `ನಿಯಮಿತವಾಗಿ ಸಭೆ ಕರೆಯದ್ದರಿಂದಾಗಿ ಪ್ರಗತಿ ಕುಂಠಿತಗೊಂಡಿದೆ. ಯೋಜನೆಗಳ ಜಾರಿಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗೆಗೆ ಗೊತ್ತಾಗುತ್ತಿಲ್ಲ. ಅಭಿವೃದ್ಧಿಗೆ ವೇಗ ನೀಡಲು ಸಭೆ ನಡೆಸಬೇಕು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಭೆ ನಡೆಸುವಂತೆ ಆಗ್ರಹಿಸಲಾಗುವುದು ಎಂದು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ~ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಅವರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದಾರೆ. ತಪ್ಪಿದರೆ ಬೆಳಗಾವಿ ನಗರಕ್ಕೆ ಸಂಬಂಧಿಸಿದ ಯೋಜನೆಗಳ ಬಗೆಗೆ ಸಭೆ ನಡೆಸುತ್ತಾರೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿ ಕೈಗೆತ್ತಿಕೊಂಡಿರುವ ಯೋಜನೆಗಳ ಜಾರಿ ಬಗ್ಗೆ ಸಮಗ್ರವಾಗಿ ಪರಿಶೀಲನೆಯ ಗೋಜಿಗೆ ಹೋಗುವುದಿಲ್ಲ ಎಂಬ ಆರೋಪಗಳೂ ಇವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಅಭಿವೃದ್ಧಿಯೇ ಮಂತ್ರ ಎನ್ನುತ್ತಾರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಅಭಿವೃದ್ಧಿ ಹೋಗಲಿ, ಅಭಿವೃದ್ಧಿ ಪರಿಶೀಲನೆಯ ತ್ರೈಮಾಸಿಕ ಸಭೆಗಳೂ ಸರಿಯಾಗಿ ನಡೆಯುತ್ತಿಲ್ಲ.<br /> ವಿವಿಧ ಇಲಾಖೆಗಳು ಜಿಲ್ಲೆಯಲ್ಲಿ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಆದರೆ ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಈ ಸಭೆಗಳೂ ಸರಿಯಾಗಿ ನಡೆದಿಲ್ಲ. <br /> <br /> ಬಿಜೆಪಿ ನೇತೃತ್ವದ ಸರ್ಕಾರ 2008ರಲ್ಲಿ ಅಸ್ವಿತ್ವಕ್ಕೆ ಬಂದಾಗ ಹಾವೇರಿ ಜಿಲ್ಲೆಯ ಶಿಗ್ಗಾಂವದಿಂದ ಆಯ್ಕೆಯಾಗಿರುವ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಹೀಗಾಗಿ ಅವರು ನಿಗದಿತ ಸಮಯದಲ್ಲಿ ಸಭೆ ನಡೆಸುತ್ತಿಲ್ಲ ಎಂಬ ಆರೋಪವಿತ್ತು.<br /> <br /> ಆದರೆ ಒಂದು ವರ್ಷದಿಂದ ಜಿಲ್ಲಾ ಉಸ್ತುವಾರಿಯನ್ನು ಜಿಲ್ಲೆಯ ಜನಪ್ರತಿನಿಧಿಯೇ ಆಗಿರುವ ಕೃಷಿ ಸಚಿವ ಉಮೇಶ ಕತ್ತಿ ವಹಿಸಿಕೊಂಡಿದ್ದಾರೆ. ಈಗಲೂ ಸಭೆಗಳು ಸರಿಯಾಗಿ ನಡೆಯುತ್ತಿಲ್ಲ.<br /> <br /> ಇದುವರೆಗೆ ಕೇವಲ ಮೂರು ಸಭೆಗಳು ಮಾತ್ರ ನಡೆದಿವೆ. ಅವೂ ಮೂರರಿಂದ ನಾಲ್ಕು ತಿಂಗಳು ವಿಳಂಬವಾಗಿ ನಡೆದಿವೆ. ಇಂತಹ ಸಭೆಗಳಲ್ಲಿ ಗುರಿ ಸಾಧನೆ ಬಗೆಗೆ ಪ್ರಶ್ನಿಸಿದರೆ, ~ಅದು ಮೂರು ತಿಂಗಳ ಹಿಂದಿನ ವರದಿ. ಈಗ ಗುರಿ ಸಾಧನೆ ಮಾಡಲಾಗಿದೆ~ ಎಂದು ಹೇಳಿ ಅಧಿಕಾರಿಗಳು ಕೈತೊಳೆದುಕೊಳ್ಳುತ್ತಾರೆ. ಅದರಲ್ಲೂ ಕಳೆದ ಆರ್ಥಿಕ ವರ್ಷಾಂತ್ಯದ ಮಾರ್ಚ್ ಹಾಗೂ ಪ್ರಸಕ್ತ ವರ್ಷದ ಮಾರ್ಚ್ ಅಂತ್ಯದ ಪರಿಶೀಲನಾ ಸಭೆಗಳು ನಡೆದಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ. <br /> <br /> ~ವಾರ್ಷಿಕ ಗುರಿ ಸಾಧನೆ, ಅನುದಾನ ಬಳಕೆಯ ಲೆಕ್ಕ ಇನ್ನೂ ಸಿಗಬೇಕಿದೆ. ಬಿಜೆಪಿ ಸರ್ಕಾರದ ಸಾಧನೆಗಳೆಲ್ಲ ಕಾಗದದಲ್ಲಿ ಆಗಿವೆ. ಸಭೆ ಕರೆದರೆ ಈ ಹುಳುಕುಗಳನ್ನು ಪ್ರತಿಪಕ್ಷಗಳು ಹೊರ ತರುತ್ತವೆ ಎಂಬ ಭಯದಿಂದ ಸಭೆಗಳನ್ನು ನಿಗದಿತವಾಗಿ ನಡೆಸುತ್ತಿಲ್ಲ. ಜಿಲ್ಲೆಯ ಆಡಳಿತದ ಮೇಲೂ ಹಿಡಿತ ತಪ್ಪಿದೆ~ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸುತ್ತಾರೆ.<br /> <br /> `ನಿಯಮಿತವಾಗಿ ಸಭೆ ಕರೆಯದ್ದರಿಂದಾಗಿ ಪ್ರಗತಿ ಕುಂಠಿತಗೊಂಡಿದೆ. ಯೋಜನೆಗಳ ಜಾರಿಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗೆಗೆ ಗೊತ್ತಾಗುತ್ತಿಲ್ಲ. ಅಭಿವೃದ್ಧಿಗೆ ವೇಗ ನೀಡಲು ಸಭೆ ನಡೆಸಬೇಕು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಭೆ ನಡೆಸುವಂತೆ ಆಗ್ರಹಿಸಲಾಗುವುದು ಎಂದು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ~ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಅವರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದಾರೆ. ತಪ್ಪಿದರೆ ಬೆಳಗಾವಿ ನಗರಕ್ಕೆ ಸಂಬಂಧಿಸಿದ ಯೋಜನೆಗಳ ಬಗೆಗೆ ಸಭೆ ನಡೆಸುತ್ತಾರೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿ ಕೈಗೆತ್ತಿಕೊಂಡಿರುವ ಯೋಜನೆಗಳ ಜಾರಿ ಬಗ್ಗೆ ಸಮಗ್ರವಾಗಿ ಪರಿಶೀಲನೆಯ ಗೋಜಿಗೆ ಹೋಗುವುದಿಲ್ಲ ಎಂಬ ಆರೋಪಗಳೂ ಇವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>