<p><strong>ಚನ್ನಗಿರಿ: </strong>ತಾಲ್ಲೂಕಿನಲ್ಲಿ ಯಾವುದೇ ಜಾತಿಮತ ಭೇದ ಇಲ್ಲದೇ ಎಲ್ಲಾ ವರ್ಗಗಳ ಅಭಿವೃದ್ಧಿಗೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಗ್ರಾಮಗಳ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೆರೆಸಬೇಡಿ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲಹೆ ನೀಡಿದರು.<br /> <br /> ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಸುವರ್ಣ ಗ್ರಾಮ 1ನೇ ಹಂತದ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಉಪ್ಪಾರ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಈ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗೆ ರೂ 60 ಲಕ್ಷ, ಕುಡಿಯುವ ನೀರಿನ ಕಾಮಗಾರಿಗೆ ರೂ 14 ಲಕ್ಷ, ಸಮುದಾಯ ಭವನಕ್ಕೆ ರೂ 25 ಲಕ್ಷ ಹಾಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ 3 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಬಡ ಕಾರ್ಮಿಕರಿಗೆ ಸಾಕಷ್ಟು ಕೆಲಸಗಳು ಸಿಕ್ಕಿವೆ. ಈ ಗ್ರಾಮಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸಲಾಗುವುದು ಎಂದರು.<br /> <br /> ಜಿ.ಪಂ. ಸದಸ್ಯೆ ಪ್ರೇಮಾ ಲೋಕೇಶ್, ತಾ.ಪಂ. ಇಒ ಬಿ.ಇ. ಶಿವಕುಮಾರ್, ಗ್ರಾಮದ ಮುಖಂಡರಾದ ಯು. ಶಿವನಪ್ಪ, ಎಚ್. ಕೃಷ್ಣಪ್ಪ, ಜಿ.ಬಿ. ಹಾಲೇಶ್, ಸಾದಿಕ್, ಸತ್ತಾರ್ಸಾಬ್, ಎನ್.ಬಿ. ಅನಿಲ್, ಕೆ.ಆರ್. ವಿಜಯ್ ಮುಂತಾದವರು ಉಪಸ್ಥಿತರಿದ್ದರು.<br /> <br /> ಗ್ರಾ.ಪಂ. ಅಧ್ಯಕ್ಷೆ ಶ್ವೇತಾ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ್ ಪ್ರಾರ್ಥಿಸಿದರು. ಎನ್. ಚಂದ್ರಶೇಖರಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ: </strong>ತಾಲ್ಲೂಕಿನಲ್ಲಿ ಯಾವುದೇ ಜಾತಿಮತ ಭೇದ ಇಲ್ಲದೇ ಎಲ್ಲಾ ವರ್ಗಗಳ ಅಭಿವೃದ್ಧಿಗೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಗ್ರಾಮಗಳ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೆರೆಸಬೇಡಿ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲಹೆ ನೀಡಿದರು.<br /> <br /> ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಸುವರ್ಣ ಗ್ರಾಮ 1ನೇ ಹಂತದ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಉಪ್ಪಾರ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಈ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗೆ ರೂ 60 ಲಕ್ಷ, ಕುಡಿಯುವ ನೀರಿನ ಕಾಮಗಾರಿಗೆ ರೂ 14 ಲಕ್ಷ, ಸಮುದಾಯ ಭವನಕ್ಕೆ ರೂ 25 ಲಕ್ಷ ಹಾಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ 3 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಬಡ ಕಾರ್ಮಿಕರಿಗೆ ಸಾಕಷ್ಟು ಕೆಲಸಗಳು ಸಿಕ್ಕಿವೆ. ಈ ಗ್ರಾಮಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸಲಾಗುವುದು ಎಂದರು.<br /> <br /> ಜಿ.ಪಂ. ಸದಸ್ಯೆ ಪ್ರೇಮಾ ಲೋಕೇಶ್, ತಾ.ಪಂ. ಇಒ ಬಿ.ಇ. ಶಿವಕುಮಾರ್, ಗ್ರಾಮದ ಮುಖಂಡರಾದ ಯು. ಶಿವನಪ್ಪ, ಎಚ್. ಕೃಷ್ಣಪ್ಪ, ಜಿ.ಬಿ. ಹಾಲೇಶ್, ಸಾದಿಕ್, ಸತ್ತಾರ್ಸಾಬ್, ಎನ್.ಬಿ. ಅನಿಲ್, ಕೆ.ಆರ್. ವಿಜಯ್ ಮುಂತಾದವರು ಉಪಸ್ಥಿತರಿದ್ದರು.<br /> <br /> ಗ್ರಾ.ಪಂ. ಅಧ್ಯಕ್ಷೆ ಶ್ವೇತಾ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ್ ಪ್ರಾರ್ಥಿಸಿದರು. ಎನ್. ಚಂದ್ರಶೇಖರಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>