<p><strong>ಪ್ಯಾರಿಸ್ (ಐಎಎನ್ಎಸ್):</strong> ಅಭಿವೃದ್ಧಿ ಹೊಂದಿದ ದೇಶಗಳ ಹಣಕಾಸು ಬಿಕ್ಕಟ್ಟು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟೀನ್ ಲಗಾರ್ಡೆ ಅಭಿಪ್ರಾಯಪಟ್ಟಿದ್ದಾರೆ.</p>.<p>ಪ್ರಪಂಚದ ಪ್ರಮುಖ ಆರ್ಥಿಕ ದೇಶಗಳ ಸದ್ಯದ ಹಣಕಾಸು ಬಿಕ್ಕಟ್ಟು, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಅದರಲ್ಲೂ ಕಳೆದ ಮೂರು ವಾರಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಉತ್ತಮ ಪರಿಸ್ಥಿತಿಯಲ್ಲಿ ಇದ್ದರೂ, ಜಾಗತಿಕ ಅರ್ಥಿಕ ಬಿಕ್ಕಟ್ಟಿನ ಬಲಿಪಶುಗಳಾಗಬೇಕಾಗಿ ಬಂದಿರುವ ಜಗತ್ತಿನ ಹಲವು ದೇಶಗಳ ಆರ್ಥಿಕ ಪ್ರಗತಿಗೆ ಸಂಬಂಧಿಸಿದಂತೆ ಐಎಂಎಫ್ `ನಿರ್ದಿಷ್ಟ ಪ್ರಸ್ತಾವವೊಂದನ್ನು ಮುಂದಿನ `ಜಿ-20~ ಶೃಂಗಸಭೆಯಲ್ಲಿ ಮಂಡಿಸಲಿದೆ. ಈ ಪ್ರಸ್ತಾವವು ಪ್ರವರ್ಧಮಾಕ್ಕೆ ಬರುತ್ತಿರುವ ದೇಶಗಳು ಬಿಕ್ಕಟ್ಟು ಪೂರ್ವದಲ್ಲಿ ಕೈಗೊಳ್ಳಬೇಕಾದ ಅಲ್ಪಾವಧಿ ಮುನ್ನೆಚ್ಚರಿಕೆ ಕ್ರಮಗಳನ್ನು ಒಳಗೊಂಡಿದೆ ಎಂದರು.</p>.<p>`ಐಎಂಎಫ್~ ಸದಸ್ಯ ರಾಷ್ಟ್ರಗಳು ಜಾಗತಿಕ ಆರ್ಥಿಕತೆಗೆ ಶೇ 80ರಷ್ಟು ಕೊಡುಗೆ ನೀಡುತ್ತಿವೆ. ಪ್ರಮುಖ ಆರ್ಥಿಕ ಶಕ್ತಿಗಳಾದ ಈ ರಾಷ್ಟ್ರಗಳು ಅಂತರರಾಷ್ಟೀಯ ಹಣಕಾಸು ನಿಧಿಯನ್ನು ಬಲಪಡಿಸುವಲ್ಲಿ ತೆಗೆದುಕೊಳ್ಳಬೇಕಾದ ಇತರ ಕ್ರಮಗಳ ಕುರಿತೂ ಪ್ಯಾರಿಸ್ನಲ್ಲಿ ನಡೆದ `ಜಿ-20~ ವಾಣಿಜ್ಯ ಸಚಿವರ ಸಭೆಯಲ್ಲಿ ಚರ್ಚಿಸಲಾಯಿತು. ಈ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಮತ್ತು ಹಣಕಾಸು ವಹಿವಾಟಿನಲ್ಲಿ ಇನ್ನಷ್ಟು ಪ್ರಮುಖ ಪಾತ್ರವನ್ನು ನಿರ್ವಹಿಸಬೇಕು ಎಂದು ಲಗಾರ್ಡೆ ಹೇಳಿದರು.</p>.<p>`ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಚೀನಾ ಮತ್ತು ಬ್ರೆಜಿಲ್ ಕರೆನ್ಸಿಗಳನ್ನೂ ಸೇರ್ಪಡೆಗೊಳಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ಯಾರಿಸ್ (ಐಎಎನ್ಎಸ್):</strong> ಅಭಿವೃದ್ಧಿ ಹೊಂದಿದ ದೇಶಗಳ ಹಣಕಾಸು ಬಿಕ್ಕಟ್ಟು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟೀನ್ ಲಗಾರ್ಡೆ ಅಭಿಪ್ರಾಯಪಟ್ಟಿದ್ದಾರೆ.</p>.<p>ಪ್ರಪಂಚದ ಪ್ರಮುಖ ಆರ್ಥಿಕ ದೇಶಗಳ ಸದ್ಯದ ಹಣಕಾಸು ಬಿಕ್ಕಟ್ಟು, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಅದರಲ್ಲೂ ಕಳೆದ ಮೂರು ವಾರಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಉತ್ತಮ ಪರಿಸ್ಥಿತಿಯಲ್ಲಿ ಇದ್ದರೂ, ಜಾಗತಿಕ ಅರ್ಥಿಕ ಬಿಕ್ಕಟ್ಟಿನ ಬಲಿಪಶುಗಳಾಗಬೇಕಾಗಿ ಬಂದಿರುವ ಜಗತ್ತಿನ ಹಲವು ದೇಶಗಳ ಆರ್ಥಿಕ ಪ್ರಗತಿಗೆ ಸಂಬಂಧಿಸಿದಂತೆ ಐಎಂಎಫ್ `ನಿರ್ದಿಷ್ಟ ಪ್ರಸ್ತಾವವೊಂದನ್ನು ಮುಂದಿನ `ಜಿ-20~ ಶೃಂಗಸಭೆಯಲ್ಲಿ ಮಂಡಿಸಲಿದೆ. ಈ ಪ್ರಸ್ತಾವವು ಪ್ರವರ್ಧಮಾಕ್ಕೆ ಬರುತ್ತಿರುವ ದೇಶಗಳು ಬಿಕ್ಕಟ್ಟು ಪೂರ್ವದಲ್ಲಿ ಕೈಗೊಳ್ಳಬೇಕಾದ ಅಲ್ಪಾವಧಿ ಮುನ್ನೆಚ್ಚರಿಕೆ ಕ್ರಮಗಳನ್ನು ಒಳಗೊಂಡಿದೆ ಎಂದರು.</p>.<p>`ಐಎಂಎಫ್~ ಸದಸ್ಯ ರಾಷ್ಟ್ರಗಳು ಜಾಗತಿಕ ಆರ್ಥಿಕತೆಗೆ ಶೇ 80ರಷ್ಟು ಕೊಡುಗೆ ನೀಡುತ್ತಿವೆ. ಪ್ರಮುಖ ಆರ್ಥಿಕ ಶಕ್ತಿಗಳಾದ ಈ ರಾಷ್ಟ್ರಗಳು ಅಂತರರಾಷ್ಟೀಯ ಹಣಕಾಸು ನಿಧಿಯನ್ನು ಬಲಪಡಿಸುವಲ್ಲಿ ತೆಗೆದುಕೊಳ್ಳಬೇಕಾದ ಇತರ ಕ್ರಮಗಳ ಕುರಿತೂ ಪ್ಯಾರಿಸ್ನಲ್ಲಿ ನಡೆದ `ಜಿ-20~ ವಾಣಿಜ್ಯ ಸಚಿವರ ಸಭೆಯಲ್ಲಿ ಚರ್ಚಿಸಲಾಯಿತು. ಈ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಮತ್ತು ಹಣಕಾಸು ವಹಿವಾಟಿನಲ್ಲಿ ಇನ್ನಷ್ಟು ಪ್ರಮುಖ ಪಾತ್ರವನ್ನು ನಿರ್ವಹಿಸಬೇಕು ಎಂದು ಲಗಾರ್ಡೆ ಹೇಳಿದರು.</p>.<p>`ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಚೀನಾ ಮತ್ತು ಬ್ರೆಜಿಲ್ ಕರೆನ್ಸಿಗಳನ್ನೂ ಸೇರ್ಪಡೆಗೊಳಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>