<p><strong>ಮಂಗಳೂರು</strong>: ಪಂಚಾಯತ್ರಾಜ್ ವ್ಯವಸ್ಥೆಯು ಕಾಯ್ದೆ ಪುಸ್ತಕದಲ್ಲಿ ಇರುವಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆಯೇ ಎಂಬ ಆತ್ಮವಿಮರ್ಶೆ ಮಾಡಿಕೊಳ್ಳುವುದಕ್ಕೆ ಇದು ಸಕಾಲ ಎಂದು ಜಿಲ್ಲಾ ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಜನಾರ್ದನ ಗೌಡ ಹೇಳಿದರು.<br /> <br /> ಅವರು ಮಂಗಳವಾರ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಿಯ ಪಂಚಾಯತ್ರಾಜ್ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ದೇಶದ ದುರ್ಬಲ ವರ್ಗದವರ ಆರ್ಥಿಕ ಚೈತನ್ಯ ಕಾರ್ಯಕ್ರಮಗಳ ಅನುಷ್ಠಾನದಿಂದ ಮೊದಲ್ಗೊಂಡು ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿ ಇಲಾಖೆಯ ಗುರಿಯಾಗಿರುವುದರಿಂದ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಮಾಡುವ ಜವಾಬ್ದಾರಿ ಇಂದಿನ ಜನಪ್ರತಿನಿಧಿಗಳ ಮೇಲಿದೆ ಎಂದರು.<br /> <br /> ಪಂಚಾಯತ್ರಾಜ್ ವ್ಯವಸ್ಥೆಯ ಜನಪ್ರತಿನಿಧಿಗಳು ವೈಯಕ್ತಿಕ ಹಿತಾಸಕ್ತಿಯನ್ನು ಬದಿಗಿಟ್ಟು ಸಮುದಾಯದ ಹಿತಕ್ಕಾಗಿ ಕೆಲಸ ಮಾಡಿದಾಗ ಕಾಯ್ದೆ ಇನ್ನಷ್ಟು ಬಲಗೊಳ್ಳುತ್ತದೆ ಎಂದ ಅವರು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜನತೆಯ ಪಾಲ್ಗೊಳ್ಳುವಿಕೆ ಅಗತ್ಯ ಎಂದರು. ಪಂಚಾಯತ್ರಾಜ್ ವ್ಯವಸ್ಥೆಯ ಯಶಸ್ಸು ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕುವುದರಲ್ಲಿ ಅಡಗಿದೆ ಎಂದರು.<br /> <br /> ಮುಖ್ಯ ಭಾಷಣ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಶ್ರೀಪತಿ ಕಲ್ಲೂರಾಯ, ಭಾರತದ ಅಭಿವೃದ್ಧಿಗೆ ಪಂಚಾಯತ್ರಾಜ್ ಇಲಾಖೆಯ ಕೊಡುಗೆ ಅನನ್ಯ ಎಂದರು.<br /> ಸರ್ಕಾರದಿಂದ ಲಭ್ಯವಾದ ಅನುದಾನವನ್ನು ಹೇಗಾದರೂ ಖರ್ಚು ಮಾಡಬೇಕೆಂಬ ಇರಾದೆ ದ.ಕ. ಜಿ.ಪಂ.ಗೆ ಇಲ್ಲ. <br /> <br /> ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದ ಗಮನ ಸೆಳೆದು ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಜಿ.ಪಂ.ನ ಕಾರ್ಯವೈಖರಿ ಇತರ ಪಂಚಾಯಿತಿಗಳಿಗೆ ಮಾದರಿ ಎಂದರು.<br /> <br /> ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್. ವಿಜಯಪ್ರಕಾಶ್ ಮಾತನಾಡಿ, ದ.ಕ. ಜಿಲ್ಲಾ ಪಂಚಾಯಿತಿ ಕೆಲವು ಸಂಕಲ್ಪಗಳನ್ನು ಹೊಂದಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವಿನೊಂದಿಗೆ ಮುಂದಿನ ವರ್ಷದ ಏಪ್ರಿಲ್ 24ರೊಳಗೆ ಕೆಲವು ಸಂಕಲ್ಪಗಳನ್ನಾದರೂ ಈಡೇರಿಸುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ನಡೆಸಲಾಗುವುದು ಎಂದರು.<br /> <br /> ಜಿ.ಪಂ. ಉಪಾಧ್ಯಕ್ಷೆ ಧನಲಕ್ಷ್ಮಿ ಜನಾರ್ದನ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರಾದ ಯಶವಂತಿ ಆಳ್ವ ಮತ್ತು ಮಮತಾ ಗಟ್ಟಿ, ಮುಖ್ಯ ಯೋಜನಾಧಿಕಾರಿ ಮಹಮ್ಮದ್ ನಜೀರ್, ಉಪ ಕಾರ್ಯದರ್ಶಿ ಕೆ. ಶಿವರಾಮೇ ಗೌಡ ಇತರರು ಇದ್ದರು.<br /> </p>.<p><strong>ಗೌರವದ ಸಂಭ್ರಮ<br /> </strong>ಪಂಚಾಯತ್ರಾಜ್ ಸಂಸ್ಥೆಗಳ ಸಬಲೀಕರಣ ಮತ್ತು ಉತ್ತರದಾಯಿತ್ವವನ್ನು ಪ್ರೋತ್ಸಾಹಿಸುವ ಯೋಜನೆಯಡಿ ರಾಜ್ಯಕ್ಕೆ ಕಳೆದ ಸಾಲಿನಲ್ಲಿ ಎರಡನೇ ಬಹುಮಾನ ಬಂದಿದೆ. ನೈರ್ಮಲ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಗೆ ಪ್ರಶಸ್ತಿ ಬಂದಿದೆ.<br /> <br /> ಲಾಯಿಲಾ ಗ್ರಾಮ ಪಂಚಾಯಿತಿಗೆ ಗೌರವ ಗ್ರಾಮ ಪಂಚಾಯಿತಿ ಪ್ರಶಸ್ತಿ ಸಂದಿದೆ. ಉಡುಪಿ ಜಿಲ್ಲೆಯ ಮಡಾಮಕ್ಕಿ ಗ್ರಾಮ ಪಂಚಾಯಿತಿಗೂ ಪುರಸ್ಕಾರ ಸಂದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಪಂಚಾಯತ್ರಾಜ್ ದಿವಸಕ್ಕೆ ಹೆಚ್ಚಿನ ಮಹತ್ವ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪಂಚಾಯತ್ರಾಜ್ ವ್ಯವಸ್ಥೆಯು ಕಾಯ್ದೆ ಪುಸ್ತಕದಲ್ಲಿ ಇರುವಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆಯೇ ಎಂಬ ಆತ್ಮವಿಮರ್ಶೆ ಮಾಡಿಕೊಳ್ಳುವುದಕ್ಕೆ ಇದು ಸಕಾಲ ಎಂದು ಜಿಲ್ಲಾ ಪಂಚಾಯಿತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಜನಾರ್ದನ ಗೌಡ ಹೇಳಿದರು.<br /> <br /> ಅವರು ಮಂಗಳವಾರ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಿಯ ಪಂಚಾಯತ್ರಾಜ್ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ದೇಶದ ದುರ್ಬಲ ವರ್ಗದವರ ಆರ್ಥಿಕ ಚೈತನ್ಯ ಕಾರ್ಯಕ್ರಮಗಳ ಅನುಷ್ಠಾನದಿಂದ ಮೊದಲ್ಗೊಂಡು ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿ ಇಲಾಖೆಯ ಗುರಿಯಾಗಿರುವುದರಿಂದ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಮಾಡುವ ಜವಾಬ್ದಾರಿ ಇಂದಿನ ಜನಪ್ರತಿನಿಧಿಗಳ ಮೇಲಿದೆ ಎಂದರು.<br /> <br /> ಪಂಚಾಯತ್ರಾಜ್ ವ್ಯವಸ್ಥೆಯ ಜನಪ್ರತಿನಿಧಿಗಳು ವೈಯಕ್ತಿಕ ಹಿತಾಸಕ್ತಿಯನ್ನು ಬದಿಗಿಟ್ಟು ಸಮುದಾಯದ ಹಿತಕ್ಕಾಗಿ ಕೆಲಸ ಮಾಡಿದಾಗ ಕಾಯ್ದೆ ಇನ್ನಷ್ಟು ಬಲಗೊಳ್ಳುತ್ತದೆ ಎಂದ ಅವರು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜನತೆಯ ಪಾಲ್ಗೊಳ್ಳುವಿಕೆ ಅಗತ್ಯ ಎಂದರು. ಪಂಚಾಯತ್ರಾಜ್ ವ್ಯವಸ್ಥೆಯ ಯಶಸ್ಸು ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕುವುದರಲ್ಲಿ ಅಡಗಿದೆ ಎಂದರು.<br /> <br /> ಮುಖ್ಯ ಭಾಷಣ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಶ್ರೀಪತಿ ಕಲ್ಲೂರಾಯ, ಭಾರತದ ಅಭಿವೃದ್ಧಿಗೆ ಪಂಚಾಯತ್ರಾಜ್ ಇಲಾಖೆಯ ಕೊಡುಗೆ ಅನನ್ಯ ಎಂದರು.<br /> ಸರ್ಕಾರದಿಂದ ಲಭ್ಯವಾದ ಅನುದಾನವನ್ನು ಹೇಗಾದರೂ ಖರ್ಚು ಮಾಡಬೇಕೆಂಬ ಇರಾದೆ ದ.ಕ. ಜಿ.ಪಂ.ಗೆ ಇಲ್ಲ. <br /> <br /> ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದ ಗಮನ ಸೆಳೆದು ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಜಿ.ಪಂ.ನ ಕಾರ್ಯವೈಖರಿ ಇತರ ಪಂಚಾಯಿತಿಗಳಿಗೆ ಮಾದರಿ ಎಂದರು.<br /> <br /> ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎನ್. ವಿಜಯಪ್ರಕಾಶ್ ಮಾತನಾಡಿ, ದ.ಕ. ಜಿಲ್ಲಾ ಪಂಚಾಯಿತಿ ಕೆಲವು ಸಂಕಲ್ಪಗಳನ್ನು ಹೊಂದಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವಿನೊಂದಿಗೆ ಮುಂದಿನ ವರ್ಷದ ಏಪ್ರಿಲ್ 24ರೊಳಗೆ ಕೆಲವು ಸಂಕಲ್ಪಗಳನ್ನಾದರೂ ಈಡೇರಿಸುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ನಡೆಸಲಾಗುವುದು ಎಂದರು.<br /> <br /> ಜಿ.ಪಂ. ಉಪಾಧ್ಯಕ್ಷೆ ಧನಲಕ್ಷ್ಮಿ ಜನಾರ್ದನ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯರಾದ ಯಶವಂತಿ ಆಳ್ವ ಮತ್ತು ಮಮತಾ ಗಟ್ಟಿ, ಮುಖ್ಯ ಯೋಜನಾಧಿಕಾರಿ ಮಹಮ್ಮದ್ ನಜೀರ್, ಉಪ ಕಾರ್ಯದರ್ಶಿ ಕೆ. ಶಿವರಾಮೇ ಗೌಡ ಇತರರು ಇದ್ದರು.<br /> </p>.<p><strong>ಗೌರವದ ಸಂಭ್ರಮ<br /> </strong>ಪಂಚಾಯತ್ರಾಜ್ ಸಂಸ್ಥೆಗಳ ಸಬಲೀಕರಣ ಮತ್ತು ಉತ್ತರದಾಯಿತ್ವವನ್ನು ಪ್ರೋತ್ಸಾಹಿಸುವ ಯೋಜನೆಯಡಿ ರಾಜ್ಯಕ್ಕೆ ಕಳೆದ ಸಾಲಿನಲ್ಲಿ ಎರಡನೇ ಬಹುಮಾನ ಬಂದಿದೆ. ನೈರ್ಮಲ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಗೆ ಪ್ರಶಸ್ತಿ ಬಂದಿದೆ.<br /> <br /> ಲಾಯಿಲಾ ಗ್ರಾಮ ಪಂಚಾಯಿತಿಗೆ ಗೌರವ ಗ್ರಾಮ ಪಂಚಾಯಿತಿ ಪ್ರಶಸ್ತಿ ಸಂದಿದೆ. ಉಡುಪಿ ಜಿಲ್ಲೆಯ ಮಡಾಮಕ್ಕಿ ಗ್ರಾಮ ಪಂಚಾಯಿತಿಗೂ ಪುರಸ್ಕಾರ ಸಂದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಪಂಚಾಯತ್ರಾಜ್ ದಿವಸಕ್ಕೆ ಹೆಚ್ಚಿನ ಮಹತ್ವ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>