<p>ಕನಕಪುರ: `ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕುಗಳು ಅಭಿವೃದ್ಧಿ ಹೊಂದುತ್ತಿರುವ ಸಂದರ್ಭದಲ್ಲಿಯೂ ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಅಭಿವೃದ್ಧಿ ಕಾಣದೆ ಹಿಂದುಳಿಯುತ್ತಿವೆ~ ಎಂದು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಜೆ. ನಟರಾಜು ಬೇಸರ ವ್ಯಕ್ತಪಡಿಸಿದರು. <br /> <br /> ಪಟ್ಟಣದ ಟೌನ್ ಟೆನ್ನಿಸ್ ಕ್ಲಬ್ನಲ್ಲಿ ನಡೆದ 59ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಆರ್ಥಿಕ ವ್ಯವಸ್ಥೆಗೆ ಅನುಗುಣವಾಗಿ ರಾಷ್ಟ್ರೀಕೃತ ಬ್ಯಾಂಕುಗಳು ಬದಲಾವಣೆ ಹೊಂದಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿವೆ.<br /> <br /> ಬದಲಾದ ಪರಿಸ್ಥಿತಿಗೆ ತಕ್ಕಂತೆ ಬ್ಯಾಂಕುಗಳನ್ನು ಮಾರ್ಪಾಡು ಮಾಡಿಕೊಂಡು ಗ್ರಾಹಕರನ್ನು ಆಕರ್ಷಿಸುತ್ತಾ ಬ್ಯಾಂಕುಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಆದರೆ ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಹಿಂದಿನಮಾನದಂಡವನ್ನೇ ಅನುಸರಿಸಿ ವ್ಯವಹರಿಸುತ್ತಿರುವುದರಿಂದ ಪೈಪೋಟಿಗೆ ತಕ್ಕಂತೆ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಅಭಿವೃದ್ಧಿಹೊಂದಲು ಸಾಧ್ಯವಾಗುತ್ತಿಲ್ಲ~ ಎಂದರು. <br /> <br /> ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ಒಂದು ಸಂಸ್ಥೆಯನ್ನು ಕಟ್ಟಿ ನಿಸ್ವಾರ್ಥ ಸೇವೆಯಿಂದ ದುಡಿದಾಗ ಮಾತ್ರ ಆ ಸಂಸ್ಥೆಯು ಅಭಿವೃದ್ಧಿ ಹೊಂದಲು ಸಾಧ್ಯ. ಅರ್ಬನ್ ಕೋ-ಆಪರೇಟಿವ್ ಸೊಸೈಟಿಯು ಸಂಸ್ಥೆಯ ಆಡಳಿತ ಮಂಡಳಿಯ ಜೊತೆಗೆ ಬ್ಯಾಂಕ್ ಸಿಬ್ಬಂದಿ ಮತ್ತು ಗ್ರಾಹಕರ ಸಹಕಾರದಿಂದ ಉತ್ತಮವ್ಯವಹಾರದೊಂದಿಗೆ ಲಾಭಾಂಶದಲ್ಲಿ ನಡೆಯುತ್ತಿದೆ ಎಂದರು. <br /> <br /> ಅರ್ಬನ್ ಬ್ಯಾಂಕಿನ ಮಾಜಿ ಅಧ್ಯಕ್ಷ ರಾಮಚಂದ್ರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರವು ಅಭಿವೃದ್ಧಿಯಾಗಿದೆ. ಸಹಕಾರಿ ಕ್ಷೇತ್ರದಿಂದ ಜನತೆಗೆ ಉಪಯೋಗವಿರುವುದರಿಂದ ಇಲ್ಲಿಯೂ ಅದನ್ನು ಅಭಿವೃದ್ಧಿ ಪಡಿಸಬೇಕು ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಮನಗರ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಕೆ.ಎಸ್. ನರಸಿಂಹ ಮೂರ್ತಿ ಮಾತನಾಡಿದರು. ಕಾರ್ಯದರ್ಶಿ ರಾಮಚಂದ್ರ, ಅಪ್ಪಾಜಿಗೌಡ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: `ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕುಗಳು ಅಭಿವೃದ್ಧಿ ಹೊಂದುತ್ತಿರುವ ಸಂದರ್ಭದಲ್ಲಿಯೂ ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಅಭಿವೃದ್ಧಿ ಕಾಣದೆ ಹಿಂದುಳಿಯುತ್ತಿವೆ~ ಎಂದು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಜೆ. ನಟರಾಜು ಬೇಸರ ವ್ಯಕ್ತಪಡಿಸಿದರು. <br /> <br /> ಪಟ್ಟಣದ ಟೌನ್ ಟೆನ್ನಿಸ್ ಕ್ಲಬ್ನಲ್ಲಿ ನಡೆದ 59ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಆರ್ಥಿಕ ವ್ಯವಸ್ಥೆಗೆ ಅನುಗುಣವಾಗಿ ರಾಷ್ಟ್ರೀಕೃತ ಬ್ಯಾಂಕುಗಳು ಬದಲಾವಣೆ ಹೊಂದಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿವೆ.<br /> <br /> ಬದಲಾದ ಪರಿಸ್ಥಿತಿಗೆ ತಕ್ಕಂತೆ ಬ್ಯಾಂಕುಗಳನ್ನು ಮಾರ್ಪಾಡು ಮಾಡಿಕೊಂಡು ಗ್ರಾಹಕರನ್ನು ಆಕರ್ಷಿಸುತ್ತಾ ಬ್ಯಾಂಕುಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಆದರೆ ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಹಿಂದಿನಮಾನದಂಡವನ್ನೇ ಅನುಸರಿಸಿ ವ್ಯವಹರಿಸುತ್ತಿರುವುದರಿಂದ ಪೈಪೋಟಿಗೆ ತಕ್ಕಂತೆ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಅಭಿವೃದ್ಧಿಹೊಂದಲು ಸಾಧ್ಯವಾಗುತ್ತಿಲ್ಲ~ ಎಂದರು. <br /> <br /> ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ಒಂದು ಸಂಸ್ಥೆಯನ್ನು ಕಟ್ಟಿ ನಿಸ್ವಾರ್ಥ ಸೇವೆಯಿಂದ ದುಡಿದಾಗ ಮಾತ್ರ ಆ ಸಂಸ್ಥೆಯು ಅಭಿವೃದ್ಧಿ ಹೊಂದಲು ಸಾಧ್ಯ. ಅರ್ಬನ್ ಕೋ-ಆಪರೇಟಿವ್ ಸೊಸೈಟಿಯು ಸಂಸ್ಥೆಯ ಆಡಳಿತ ಮಂಡಳಿಯ ಜೊತೆಗೆ ಬ್ಯಾಂಕ್ ಸಿಬ್ಬಂದಿ ಮತ್ತು ಗ್ರಾಹಕರ ಸಹಕಾರದಿಂದ ಉತ್ತಮವ್ಯವಹಾರದೊಂದಿಗೆ ಲಾಭಾಂಶದಲ್ಲಿ ನಡೆಯುತ್ತಿದೆ ಎಂದರು. <br /> <br /> ಅರ್ಬನ್ ಬ್ಯಾಂಕಿನ ಮಾಜಿ ಅಧ್ಯಕ್ಷ ರಾಮಚಂದ್ರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರವು ಅಭಿವೃದ್ಧಿಯಾಗಿದೆ. ಸಹಕಾರಿ ಕ್ಷೇತ್ರದಿಂದ ಜನತೆಗೆ ಉಪಯೋಗವಿರುವುದರಿಂದ ಇಲ್ಲಿಯೂ ಅದನ್ನು ಅಭಿವೃದ್ಧಿ ಪಡಿಸಬೇಕು ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಮನಗರ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಕೆ.ಎಸ್. ನರಸಿಂಹ ಮೂರ್ತಿ ಮಾತನಾಡಿದರು. ಕಾರ್ಯದರ್ಶಿ ರಾಮಚಂದ್ರ, ಅಪ್ಪಾಜಿಗೌಡ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>