<p><strong>ಕೋಲಾರ: </strong>ಆರು ಬಾರಿ ಸಂಸದರಾಗಿ, ಮೂರು ಬಾರಿ ಕೇಂದ್ರ ಸಚಿವರಾಗಿ ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆಯಾಗಲಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಬುಧವಾರ ಹೇಳಿದರು.<br /> <br /> ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಲಾರವೂ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.<br /> <br /> ತಮ್ಮ ಪ್ರತಿಸ್ಪರ್ಧಿ ಯಾರು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ವಿವಿಧ ಪಕ್ಷದ ಅಭ್ಯರ್ಥಿಗಳು ಬದಲಾಗಬಹುದು. ಹೀಗಾಗಿ ನಾಮಪತ್ರ ಸಲ್ಲಿಸುವ ಕೊನೆಯ ದಿನ ಮುಗಿದ ಬಳಿಕವಷ್ಟೇ ಕಣದಲ್ಲಿ ಉಳಿದವರನ್ನು ಪ್ರತಿಸ್ಪರ್ಧಿಯ ಬಗ್ಗೆ ಸ್ಪಷ್ಟವಾಗಿ ಹೇಳಬಹುದು ಎಂದರು.<br /> <br /> ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿದ್ದವರು. ಹಣಕ್ಕಾಗಿ ತಮ್ಮನ್ನು ಮಾರಿಕೊಂಡು ಬಿಜೆಪಿಗೆ ಸೇರ್ಪಡೆಯಾದವರು. ಅವರ ಬಗ್ಗೆ ಹೇಳುವಂಥದ್ದು ಏನೂ ಇಲ್ಲ. ಕ್ಷೇತ್ರದ ಜನರಿಗೆ ಎಲ್ಲವೂ ಗೊತ್ತಿದೆ ಎಂದರು.<br /> <br /> ಜೆಡಿಎಸ್ ಪಕ್ಷಕ್ಕೆ ಸ್ಥಳೀಯರಾದ ಅರ್ಹ ಅಭ್ಯರ್ಥಿಗಳೇ ಇಲ್ಲದ ಸನ್ನಿವೇಶ ನಿರ್ಮಾಣವಾಗಿರುವುದು ವಿಷಾದನೀಯ. ಕ್ಷೇತ್ರದಲ್ಲಿ ಅರ್ಹರಿದ್ದರೂ, ಅವರನ್ನು ಕಡೆಗಣಿಸಿ ಬೆಂಗಳೂರಿನಿಂದ ಹಣವಂತರನ್ನು ಕರೆತಂದು ಕಣಕ್ಕೆ ಇಳಿಸುತ್ತಿರುವುದು ಬೇಸರದ ಸಂಗತಿ ಎಂದರು.<br /> <br /> ಮಾಲೂರು ಮಾಜಿ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಖಚಿತ. ಇನ್ನೆರಡು ದಿನದೊಳಗೆ ಇದು ಸ್ಪಷ್ಟವಾಗಲಿದೆ. ಪಕ್ಷದ ಹಿರಿಯ ಮುಖಂಡ ಜಾಫರ್ ಷರೀಫ್ ಅವರು ಪಕ್ಷ ಬಿಡದಂತೆ ಮನ ಒಲಿಸುವ ಪ್ರಯತ್ನ ನಡೆದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಆರು ಬಾರಿ ಸಂಸದರಾಗಿ, ಮೂರು ಬಾರಿ ಕೇಂದ್ರ ಸಚಿವರಾಗಿ ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆಯಾಗಲಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಬುಧವಾರ ಹೇಳಿದರು.<br /> <br /> ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಲಾರವೂ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.<br /> <br /> ತಮ್ಮ ಪ್ರತಿಸ್ಪರ್ಧಿ ಯಾರು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ವಿವಿಧ ಪಕ್ಷದ ಅಭ್ಯರ್ಥಿಗಳು ಬದಲಾಗಬಹುದು. ಹೀಗಾಗಿ ನಾಮಪತ್ರ ಸಲ್ಲಿಸುವ ಕೊನೆಯ ದಿನ ಮುಗಿದ ಬಳಿಕವಷ್ಟೇ ಕಣದಲ್ಲಿ ಉಳಿದವರನ್ನು ಪ್ರತಿಸ್ಪರ್ಧಿಯ ಬಗ್ಗೆ ಸ್ಪಷ್ಟವಾಗಿ ಹೇಳಬಹುದು ಎಂದರು.<br /> <br /> ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿದ್ದವರು. ಹಣಕ್ಕಾಗಿ ತಮ್ಮನ್ನು ಮಾರಿಕೊಂಡು ಬಿಜೆಪಿಗೆ ಸೇರ್ಪಡೆಯಾದವರು. ಅವರ ಬಗ್ಗೆ ಹೇಳುವಂಥದ್ದು ಏನೂ ಇಲ್ಲ. ಕ್ಷೇತ್ರದ ಜನರಿಗೆ ಎಲ್ಲವೂ ಗೊತ್ತಿದೆ ಎಂದರು.<br /> <br /> ಜೆಡಿಎಸ್ ಪಕ್ಷಕ್ಕೆ ಸ್ಥಳೀಯರಾದ ಅರ್ಹ ಅಭ್ಯರ್ಥಿಗಳೇ ಇಲ್ಲದ ಸನ್ನಿವೇಶ ನಿರ್ಮಾಣವಾಗಿರುವುದು ವಿಷಾದನೀಯ. ಕ್ಷೇತ್ರದಲ್ಲಿ ಅರ್ಹರಿದ್ದರೂ, ಅವರನ್ನು ಕಡೆಗಣಿಸಿ ಬೆಂಗಳೂರಿನಿಂದ ಹಣವಂತರನ್ನು ಕರೆತಂದು ಕಣಕ್ಕೆ ಇಳಿಸುತ್ತಿರುವುದು ಬೇಸರದ ಸಂಗತಿ ಎಂದರು.<br /> <br /> ಮಾಲೂರು ಮಾಜಿ ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಖಚಿತ. ಇನ್ನೆರಡು ದಿನದೊಳಗೆ ಇದು ಸ್ಪಷ್ಟವಾಗಲಿದೆ. ಪಕ್ಷದ ಹಿರಿಯ ಮುಖಂಡ ಜಾಫರ್ ಷರೀಫ್ ಅವರು ಪಕ್ಷ ಬಿಡದಂತೆ ಮನ ಒಲಿಸುವ ಪ್ರಯತ್ನ ನಡೆದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>