<p><strong>ನವದೆಹಲಿ (ಪಿಟಿಐ): </strong>ಅಭಿವೃದ್ಧಿ ಜತೆ ಸ್ಥಿರತೆಗೆ ಉತ್ತೇಜನ ನೀಡುವ ಗುರಿಯೊಂದಿಗೆ ಬಜೆಟ್ ರೂಪಿಸಲಾಗಿದ್ದು, ಆರ್ಥಿಕ ಬಲವರ್ಧನೆಯ ಹಾದಿಯಲ್ಲಿ ಸಾಗುವ ದೃಢ ನಿಶ್ಚಯ ಮಾಡಲಾಗಿದೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.<br /> <br /> ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ಅಸ್ಥಿರತೆ ಕಾಣಿಸಿಕೊಳ್ಳುತ್ತಿರುವಾಗ ಬೆಲೆಗಳು ಮತ್ತು ಬೃಹತ್ ಆರ್ಥಿಕತೆಯ ವಲಯದಲ್ಲಿ ಸ್ಥಿರತೆ ಕಾಪಾಡಿಕೊಳ್ಳಬೇಕಾಗಿದೆ. ಹಾಗಾಗಿ ಇದು ಅಭಿವೃದ್ಧಿ ಜತೆ ಸ್ಥಿರತೆಗೆ ಉತ್ತೇಜನ ನೀಡುವ ಬಜೆಟ್ ಎಂದು ಮುಖರ್ಜಿ ಪ್ರತಿಪಾದಿಸಿದರು.<br /> <br /> ಪೂರೈಕೆಯ ಕೊರತೆ ನೀಗಲು ವಿಶೇಷವಾಗಿ ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಎಲ್ಲ ಬಗೆಯ ಹೂಡಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಈ ಹೆಜ್ಜೆ ಹಣದುಬ್ಬರ ಎದುರಿಸಲು ಹಾಗೂ ಉನ್ನತ ಆರ್ಥಿಕ ಅಭಿವೃದ್ಧಿಯ ಪಥಕ್ಕೆ ಮರಳಲು ಸರ್ಕಾರಕ್ಕೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.<br /> <br /> ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿರುವುದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸೇರ್ಪಡೆಯ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಹಣಕಾಸು ಸಚಿವರು ಹೇಳಿದರು.<br /> <br /> ದೀದಿಯ ಬಂಡಾಯದ ಮಧ್ಯೆ ದಾದಾ ಮಂಡಿಸಿದ ಈ ಬಜೆಟ್ ಯುಪಿಎ ಸರ್ಕಾರದ ಬೀಳ್ಕೊಡುಗೆಗೆ ಕಾರಣವಾಗಲಿದೆ<br /> <strong>ಬಿಜೆಪಿ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಕ್ವಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಅಭಿವೃದ್ಧಿ ಜತೆ ಸ್ಥಿರತೆಗೆ ಉತ್ತೇಜನ ನೀಡುವ ಗುರಿಯೊಂದಿಗೆ ಬಜೆಟ್ ರೂಪಿಸಲಾಗಿದ್ದು, ಆರ್ಥಿಕ ಬಲವರ್ಧನೆಯ ಹಾದಿಯಲ್ಲಿ ಸಾಗುವ ದೃಢ ನಿಶ್ಚಯ ಮಾಡಲಾಗಿದೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ.<br /> <br /> ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ಅಸ್ಥಿರತೆ ಕಾಣಿಸಿಕೊಳ್ಳುತ್ತಿರುವಾಗ ಬೆಲೆಗಳು ಮತ್ತು ಬೃಹತ್ ಆರ್ಥಿಕತೆಯ ವಲಯದಲ್ಲಿ ಸ್ಥಿರತೆ ಕಾಪಾಡಿಕೊಳ್ಳಬೇಕಾಗಿದೆ. ಹಾಗಾಗಿ ಇದು ಅಭಿವೃದ್ಧಿ ಜತೆ ಸ್ಥಿರತೆಗೆ ಉತ್ತೇಜನ ನೀಡುವ ಬಜೆಟ್ ಎಂದು ಮುಖರ್ಜಿ ಪ್ರತಿಪಾದಿಸಿದರು.<br /> <br /> ಪೂರೈಕೆಯ ಕೊರತೆ ನೀಗಲು ವಿಶೇಷವಾಗಿ ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಎಲ್ಲ ಬಗೆಯ ಹೂಡಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಈ ಹೆಜ್ಜೆ ಹಣದುಬ್ಬರ ಎದುರಿಸಲು ಹಾಗೂ ಉನ್ನತ ಆರ್ಥಿಕ ಅಭಿವೃದ್ಧಿಯ ಪಥಕ್ಕೆ ಮರಳಲು ಸರ್ಕಾರಕ್ಕೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.<br /> <br /> ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿರುವುದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸೇರ್ಪಡೆಯ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಹಣಕಾಸು ಸಚಿವರು ಹೇಳಿದರು.<br /> <br /> ದೀದಿಯ ಬಂಡಾಯದ ಮಧ್ಯೆ ದಾದಾ ಮಂಡಿಸಿದ ಈ ಬಜೆಟ್ ಯುಪಿಎ ಸರ್ಕಾರದ ಬೀಳ್ಕೊಡುಗೆಗೆ ಕಾರಣವಾಗಲಿದೆ<br /> <strong>ಬಿಜೆಪಿ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಕ್ವಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>