<p>ಈ ಸಾಲಿನ ಬಜೆಟ್ನಲ್ಲಿ ಎಲ್ಲ ವರ್ಗದವರನ್ನು ಖುಷಿ ಪಡಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಇದು ಅಭಿವೃದ್ಧಿಪರವಾದ ಬಜೆಟ್ ಅಲ್ಲ. ರಾಜ್ಯದ ವಿಕಾಸಕ್ಕೆ ಅನುಕೂಲವಾಗುವ ದೂರದೃಷ್ಟಿಯ ಯೋಜನೆಗಳು ಕಾಣುತ್ತಿಲ್ಲ.<br /> <br /> ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟಾರೆ ಬಜೆಟ್ ವೆಚ್ಚ ಶೇ 20ರಷ್ಟು ಹೆಚ್ಚಾಗಿದೆ. ಆದರೆ ಅಭಿವೃದ್ಧಿ ವೆಚ್ಚ ಜಾಸ್ತಿಯಾಗಿಲ್ಲ. ರೆವೆನ್ಯೊ ಕೊರತೆಯೂ ಹೆಚ್ಚಳವಾಗಿದೆ. ಹಣದುಬ್ಬರ ಜಾಸ್ತಿಯಾಗಬಹುದು. ಬಡವರಿಗೆ ವಿನಾಯಿತಿ ನೀಡಿ, ಶ್ರೀಮಂತರಿಗೆ ತೆರಿಗೆ ಹಾಕಲಾಗಿದೆ ಎಂದು ಹೇಳುತ್ತಾರೆ. <br /> <br /> ಆದರೆ ಬಡವರಿಗೆ ಅನುಕೂಲವಾಗುವುದಿಲ್ಲ. ತೆರಿಗೆ ವಿನಾಯಿತಿಯ ನೇರ ಲಾಭ ಬಡವರಿಗೆ ಸಿಗುವುದಿಲ್ಲ.<br /> ಕಳೆದ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಅಭಿವೃದ್ಧಿ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಅನು ಷ್ಠಾನವಾಗಿಲ್ಲ ಇಲಾಖಾವಾರು ಹಂಚಿಕೆಯಾಗಿದ್ದ ಹಣ ಖರ್ಚಾಗಿಲ್ಲ. ಒಟ್ಟಾರೆ ಬಜೆಟ್ ವೆಚ್ಚ ಶೇ 20ರಷ್ಟು ಜಾಸ್ತಿಯಾಗಿದ್ದರೂ, ಸಕಾರಾತ್ಮಕವಾಗಿ ಕಾಣುತ್ತಿಲ್ಲ.<br /> <br /> ವೈದ್ಯಕೀಯ ಪದವೀಧರರಿಗೆ ಗ್ರಾಮೀಣ ಪ್ರದೇಶದ ಸೇವೆಯನ್ನು ಕಡ್ಡಾಯಗೊಳಿಸುವುದು ಒಳ್ಳೆಯ ನಿರ್ಧಾರ. ಆದರೆ ಅದನ್ನು ಯಾವ ರೀತಿ ಅನುಷ್ಠಾನಗೊಳಿಸಲಾಗುತ್ತದೆ ಎಂಬುದು ಮುಖ್ಯ. ಇದು ಕೇವಲ ಘೋಷಣೆಯಾಗಿ ಉಳಿಯಬಾರದು. ಎಲ್ಲ ವರ್ಗದವರನ್ನು ತೃಪಿಪಡಿಸುವ ಕೆಲಸ ಬಜೆಟ್ನಲ್ಲಿ ಆಗಿದೆ. <br /> <br /> ಆದರೆ ಹೇಗೆ ಅನುಷ್ಠಾನಗೊಳಿಸುತ್ತೀರಿ ಎಂಬುದು ಮುಖ್ಯ. ಅಬಕಾರಿ ತೆರಿಗೆ ಜಾಸ್ತಿ ಮಾಡಿರುವುದರಿಂದ ಆದಾಯ ಹೆಚ್ಚಳವಾಗುತ್ತದೆ ನಿಜ. ಆದರೆ ಅಭಿವೃದ್ಧಿಗೆ ಪ್ರೋತ್ಸಾಹ ಕೊಟ್ಟಿರುವಂತಹ ಕಾರ್ಯಕ್ರಮಗಳು ಕಂಡು ಬರುತ್ತಿಲ್ಲ. ಇರುವುದರಲ್ಲಿ ಕೃಷಿ, ಗ್ರಾಮೀಣಾಭಿವೃದ್ಧಿಗೆ ಸ್ವಲ್ಪ ಒತ್ತು ಸಿಕ್ಕಿದೆ.<br /> <br /> ಬಜೆಟ್ ಮಹತ್ವ 2-3 ದಿನಗಳಲ್ಲಿ ಗೊತ್ತಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿರುವುದರಿಂದ ಬಜೆಟ್ ಕಾರ್ಯಕ್ರಮಗಳು ಎಷ್ಟರಮಟ್ಟಿಗೆ ಅನುಷ್ಠಾನವಾಗುತ್ತವೆ ಎಂಬುದನ್ನು ಈಗಲೇ ಹೇಳುವುದು ಕಷ್ಟ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಸಾಲಿನ ಬಜೆಟ್ನಲ್ಲಿ ಎಲ್ಲ ವರ್ಗದವರನ್ನು ಖುಷಿ ಪಡಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಇದು ಅಭಿವೃದ್ಧಿಪರವಾದ ಬಜೆಟ್ ಅಲ್ಲ. ರಾಜ್ಯದ ವಿಕಾಸಕ್ಕೆ ಅನುಕೂಲವಾಗುವ ದೂರದೃಷ್ಟಿಯ ಯೋಜನೆಗಳು ಕಾಣುತ್ತಿಲ್ಲ.<br /> <br /> ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟಾರೆ ಬಜೆಟ್ ವೆಚ್ಚ ಶೇ 20ರಷ್ಟು ಹೆಚ್ಚಾಗಿದೆ. ಆದರೆ ಅಭಿವೃದ್ಧಿ ವೆಚ್ಚ ಜಾಸ್ತಿಯಾಗಿಲ್ಲ. ರೆವೆನ್ಯೊ ಕೊರತೆಯೂ ಹೆಚ್ಚಳವಾಗಿದೆ. ಹಣದುಬ್ಬರ ಜಾಸ್ತಿಯಾಗಬಹುದು. ಬಡವರಿಗೆ ವಿನಾಯಿತಿ ನೀಡಿ, ಶ್ರೀಮಂತರಿಗೆ ತೆರಿಗೆ ಹಾಕಲಾಗಿದೆ ಎಂದು ಹೇಳುತ್ತಾರೆ. <br /> <br /> ಆದರೆ ಬಡವರಿಗೆ ಅನುಕೂಲವಾಗುವುದಿಲ್ಲ. ತೆರಿಗೆ ವಿನಾಯಿತಿಯ ನೇರ ಲಾಭ ಬಡವರಿಗೆ ಸಿಗುವುದಿಲ್ಲ.<br /> ಕಳೆದ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಅಭಿವೃದ್ಧಿ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಅನು ಷ್ಠಾನವಾಗಿಲ್ಲ ಇಲಾಖಾವಾರು ಹಂಚಿಕೆಯಾಗಿದ್ದ ಹಣ ಖರ್ಚಾಗಿಲ್ಲ. ಒಟ್ಟಾರೆ ಬಜೆಟ್ ವೆಚ್ಚ ಶೇ 20ರಷ್ಟು ಜಾಸ್ತಿಯಾಗಿದ್ದರೂ, ಸಕಾರಾತ್ಮಕವಾಗಿ ಕಾಣುತ್ತಿಲ್ಲ.<br /> <br /> ವೈದ್ಯಕೀಯ ಪದವೀಧರರಿಗೆ ಗ್ರಾಮೀಣ ಪ್ರದೇಶದ ಸೇವೆಯನ್ನು ಕಡ್ಡಾಯಗೊಳಿಸುವುದು ಒಳ್ಳೆಯ ನಿರ್ಧಾರ. ಆದರೆ ಅದನ್ನು ಯಾವ ರೀತಿ ಅನುಷ್ಠಾನಗೊಳಿಸಲಾಗುತ್ತದೆ ಎಂಬುದು ಮುಖ್ಯ. ಇದು ಕೇವಲ ಘೋಷಣೆಯಾಗಿ ಉಳಿಯಬಾರದು. ಎಲ್ಲ ವರ್ಗದವರನ್ನು ತೃಪಿಪಡಿಸುವ ಕೆಲಸ ಬಜೆಟ್ನಲ್ಲಿ ಆಗಿದೆ. <br /> <br /> ಆದರೆ ಹೇಗೆ ಅನುಷ್ಠಾನಗೊಳಿಸುತ್ತೀರಿ ಎಂಬುದು ಮುಖ್ಯ. ಅಬಕಾರಿ ತೆರಿಗೆ ಜಾಸ್ತಿ ಮಾಡಿರುವುದರಿಂದ ಆದಾಯ ಹೆಚ್ಚಳವಾಗುತ್ತದೆ ನಿಜ. ಆದರೆ ಅಭಿವೃದ್ಧಿಗೆ ಪ್ರೋತ್ಸಾಹ ಕೊಟ್ಟಿರುವಂತಹ ಕಾರ್ಯಕ್ರಮಗಳು ಕಂಡು ಬರುತ್ತಿಲ್ಲ. ಇರುವುದರಲ್ಲಿ ಕೃಷಿ, ಗ್ರಾಮೀಣಾಭಿವೃದ್ಧಿಗೆ ಸ್ವಲ್ಪ ಒತ್ತು ಸಿಕ್ಕಿದೆ.<br /> <br /> ಬಜೆಟ್ ಮಹತ್ವ 2-3 ದಿನಗಳಲ್ಲಿ ಗೊತ್ತಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿರುವುದರಿಂದ ಬಜೆಟ್ ಕಾರ್ಯಕ್ರಮಗಳು ಎಷ್ಟರಮಟ್ಟಿಗೆ ಅನುಷ್ಠಾನವಾಗುತ್ತವೆ ಎಂಬುದನ್ನು ಈಗಲೇ ಹೇಳುವುದು ಕಷ್ಟ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>