<p>ಮಹದೇವಪುರ: ಅಧಿಕಾರಕ್ಕಾಗಿ ಕಿತ್ತಾಟದಲ್ಲಿಯೇ ಮಗ್ನರಾಗಿರುವ ಬಿಜೆಪಿ ನಾಯಕರು ರಾಜ್ಯದ ಅಭಿವೃದ್ಧಿ ವಿಚಾರವನ್ನೇ ಸಂಪೂರ್ಣ ಮರೆತು ಬಿಟ್ಟಿದ್ದಾರೆ ಎಂದು ಮಾಜಿ ಶಾಸಕ ಬಿ.ವಿ.ರಾಮಚಂದ್ರರೆಡ್ಡಿ ಶುಕ್ರವಾರ ಆರೋಪಿಸಿದರು.<br /> <br /> ವರ್ತೂರಿನಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಾರ್ಷಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುವುದೇ ಸಚಿವರ ಗುರಿಯಾಗಿದೆ ಎಂದು ದೂರಿದರು.<br /> <br /> ಸಭೆಯ ಅಧ್ಯಕ್ಷತೆ ವಹಿಸಿದ್ದ ವರ್ತೂರು ವಾರ್ಡ್ ಸದಸ್ಯ ಎಸ್.ಉದಯಕುಮಾರ್, ವಾರ್ಡ್ ವ್ಯಾಪ್ತಿಯಲ್ಲಿನ ಪ್ರತಿಯೊಂದು ಗ್ರಾಮದಲ್ಲಿ ಬೂತ್ ಕಮಿಟಿಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಮುಂದಿನ ವಾರ ಚಾಲನೆ ನೀಡಲಾಗುವುದು ಎಂದರು.<br /> <br /> ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಪಿಳ್ಳಾರೆಡ್ಡಿ ದೇವರಬಿಸನಹಳ್ಳಿ, ಬಿಬಿಎಂಪಿ ಬೆಳ್ಳಂದೂರು ವಾರ್ಡ್ ಸದಸ್ಯ ಬಿ.ಪಿ.ಬಾಬುರೆಡ್ಡಿ, ಮುಖಂಡ ಎಚ್.ಎ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣಪ್ಪ, ತಾ.ಪಂ. ಸದಸ್ಯರಾದ ಶ್ರೀನಿವಾಸರೆಡ್ಡಿ, ವಿ.ಟಿ.ಬಿ. ಬಾಬುರೆಡ್ಡಿ ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹದೇವಪುರ: ಅಧಿಕಾರಕ್ಕಾಗಿ ಕಿತ್ತಾಟದಲ್ಲಿಯೇ ಮಗ್ನರಾಗಿರುವ ಬಿಜೆಪಿ ನಾಯಕರು ರಾಜ್ಯದ ಅಭಿವೃದ್ಧಿ ವಿಚಾರವನ್ನೇ ಸಂಪೂರ್ಣ ಮರೆತು ಬಿಟ್ಟಿದ್ದಾರೆ ಎಂದು ಮಾಜಿ ಶಾಸಕ ಬಿ.ವಿ.ರಾಮಚಂದ್ರರೆಡ್ಡಿ ಶುಕ್ರವಾರ ಆರೋಪಿಸಿದರು.<br /> <br /> ವರ್ತೂರಿನಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಾರ್ಷಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಬೊಕ್ಕಸವನ್ನು ಲೂಟಿ ಮಾಡುವುದೇ ಸಚಿವರ ಗುರಿಯಾಗಿದೆ ಎಂದು ದೂರಿದರು.<br /> <br /> ಸಭೆಯ ಅಧ್ಯಕ್ಷತೆ ವಹಿಸಿದ್ದ ವರ್ತೂರು ವಾರ್ಡ್ ಸದಸ್ಯ ಎಸ್.ಉದಯಕುಮಾರ್, ವಾರ್ಡ್ ವ್ಯಾಪ್ತಿಯಲ್ಲಿನ ಪ್ರತಿಯೊಂದು ಗ್ರಾಮದಲ್ಲಿ ಬೂತ್ ಕಮಿಟಿಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಮುಂದಿನ ವಾರ ಚಾಲನೆ ನೀಡಲಾಗುವುದು ಎಂದರು.<br /> <br /> ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಪಿಳ್ಳಾರೆಡ್ಡಿ ದೇವರಬಿಸನಹಳ್ಳಿ, ಬಿಬಿಎಂಪಿ ಬೆಳ್ಳಂದೂರು ವಾರ್ಡ್ ಸದಸ್ಯ ಬಿ.ಪಿ.ಬಾಬುರೆಡ್ಡಿ, ಮುಖಂಡ ಎಚ್.ಎ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣಪ್ಪ, ತಾ.ಪಂ. ಸದಸ್ಯರಾದ ಶ್ರೀನಿವಾಸರೆಡ್ಡಿ, ವಿ.ಟಿ.ಬಿ. ಬಾಬುರೆಡ್ಡಿ ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>