<p>ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ನೀಡಿ ಸಮಗ್ರ ಅಭಿವೃದ್ಧಿ ಮಾಡಬೇಕು ಎಂಬ ಜನರ ಒತ್ತಾಯ ಕಾರ್ಯಗತವಾಗುವ ಲಕ್ಷಣಗಳು ಕಾಣುತ್ತಿವೆ. ಹೈ ಕ ಭಾಗದ ಜನರು ಅಂತಹ ಕ್ಷಣಗಳಿಗಾಗಿ ಎದುರು ನೋಡುತ್ತಿದ್ದಾರೆ.<br /> <br /> ಸಮಗ್ರ ಅಭಿವೃದ್ಧಿ ಎಂದರೆ ಶಿಕ್ಷಣ, ಉದ್ಯೋಗ ಮೀಸಲಾತಿ ಸೇರಿದಂತೆ ಆರೂ ಜಿಲ್ಲೆಗಳನ್ನು ರಾಜ್ಯ ಮುಂದುವರಿದ ಜಿಲ್ಲೆಗಳ ಸಮಾನವಾಗಿ ಅಭಿವೃದ್ಧಿಪಡಿಸುವುದು. ಅದಕ್ಕಾಗಿ ಒಂದು ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚಿಸುವುದು ಉದ್ದೇಶಿತ ಪ್ರಸ್ತಾವದಲ್ಲಿದೆ. ಈ ಮಂಡಳಿಯಲ್ಲಿ ಶೈಕ್ಷಣಿಕವಾಗಿ, ಆರ್ಥಿಕ ಪರಿಣತಿ ಹೊಂದಿದ ತಜ್ಞ ಸದಸ್ಯರು ಇರುವಂತೆ ಸರ್ಕಾರ ನೋಡಿಕೊಳ್ಳಬೇಕು. <br /> <br /> ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ, ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ - ಸಂಪರ್ಕ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಈ ಪ್ರದೇಶ ಹಿಂದುಳಿದಿದೆ. ಬಡತನ ಈ ಆರೂ ಜಿಲ್ಲೆಗಳಲ್ಲಿದೆ.<br /> <br /> ಅದಕ್ಕೆ ಆಗಾಗ ಸಂಭವಿಸಿವ ಬರಗಾಲವೇ ಮುಖ್ಯ ಕಾರಣ. ಬರಗಾಲ ಪ್ರದೇಶಗಳ ಸರಿಯಾದ ಸಮೀಕ್ಷೆ ನಡೆಯದಿರುವುದು ಸರ್ಕಾರದಿಂದ ಬಿಡುಗಡೆಯಾದ ಹಣ ನಿಜವಾದ ಯೋಜನೆಗಳಿಗೆ, ಫಲಾನುಭವಿಗಳಿಗೆ ಮುಟ್ಟದೇ ಇರುವುದು, ರಾಜಕೀಯ ಇಚ್ಛಾಶಕ್ತಿಯ ಕೊರತೆ. ಚುನಾಯಿತ ಪ್ರತಿನಿಧಿಗಳ ನಿರಾಸಕ್ತಿ ಕಾರಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್ ಕರ್ನಾಟಕ ಪ್ರದೇಶದ ಆರು ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ನೀಡಿ ಸಮಗ್ರ ಅಭಿವೃದ್ಧಿ ಮಾಡಬೇಕು ಎಂಬ ಜನರ ಒತ್ತಾಯ ಕಾರ್ಯಗತವಾಗುವ ಲಕ್ಷಣಗಳು ಕಾಣುತ್ತಿವೆ. ಹೈ ಕ ಭಾಗದ ಜನರು ಅಂತಹ ಕ್ಷಣಗಳಿಗಾಗಿ ಎದುರು ನೋಡುತ್ತಿದ್ದಾರೆ.<br /> <br /> ಸಮಗ್ರ ಅಭಿವೃದ್ಧಿ ಎಂದರೆ ಶಿಕ್ಷಣ, ಉದ್ಯೋಗ ಮೀಸಲಾತಿ ಸೇರಿದಂತೆ ಆರೂ ಜಿಲ್ಲೆಗಳನ್ನು ರಾಜ್ಯ ಮುಂದುವರಿದ ಜಿಲ್ಲೆಗಳ ಸಮಾನವಾಗಿ ಅಭಿವೃದ್ಧಿಪಡಿಸುವುದು. ಅದಕ್ಕಾಗಿ ಒಂದು ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚಿಸುವುದು ಉದ್ದೇಶಿತ ಪ್ರಸ್ತಾವದಲ್ಲಿದೆ. ಈ ಮಂಡಳಿಯಲ್ಲಿ ಶೈಕ್ಷಣಿಕವಾಗಿ, ಆರ್ಥಿಕ ಪರಿಣತಿ ಹೊಂದಿದ ತಜ್ಞ ಸದಸ್ಯರು ಇರುವಂತೆ ಸರ್ಕಾರ ನೋಡಿಕೊಳ್ಳಬೇಕು. <br /> <br /> ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ, ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ - ಸಂಪರ್ಕ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಈ ಪ್ರದೇಶ ಹಿಂದುಳಿದಿದೆ. ಬಡತನ ಈ ಆರೂ ಜಿಲ್ಲೆಗಳಲ್ಲಿದೆ.<br /> <br /> ಅದಕ್ಕೆ ಆಗಾಗ ಸಂಭವಿಸಿವ ಬರಗಾಲವೇ ಮುಖ್ಯ ಕಾರಣ. ಬರಗಾಲ ಪ್ರದೇಶಗಳ ಸರಿಯಾದ ಸಮೀಕ್ಷೆ ನಡೆಯದಿರುವುದು ಸರ್ಕಾರದಿಂದ ಬಿಡುಗಡೆಯಾದ ಹಣ ನಿಜವಾದ ಯೋಜನೆಗಳಿಗೆ, ಫಲಾನುಭವಿಗಳಿಗೆ ಮುಟ್ಟದೇ ಇರುವುದು, ರಾಜಕೀಯ ಇಚ್ಛಾಶಕ್ತಿಯ ಕೊರತೆ. ಚುನಾಯಿತ ಪ್ರತಿನಿಧಿಗಳ ನಿರಾಸಕ್ತಿ ಕಾರಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>