<p>ಅರಸೀಕೆರೆ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಾಗಲಿ ಅಥವಾ ಜಾತೀಯತೆ ಮಾಡುತ್ತ ಪ್ರಗತಿಗೆ ಮಾರಕವಾಗಿದ್ದೇನೆ ಎಂಬುದನ್ನು ಸಾಬೀತು ಪಡಿಸಿದರೆ ಶಾಸಕ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸವಾಲೆಸೆದರು.<br /> <br /> ತಾಲ್ಲೂಕಿನ ಕೆ.ಶಂಕರನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಡಲಮಗೆ ಗ್ರಾಮದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನವನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> ಶಾಸಕನಾಗಿ ಆಯ್ಕೆಯಾದ ಬಳಿಕ ಜಾತ್ಯತೀತವಾಗಿ ಯಾವ ಸಮುದಾಯಕ್ಕೂ ತೊಂದರೆಯಾಗದಂತೆ ನಡೆದುಕೊಂಡು ಬಂದಿದ್ದರೂ, ಪದೇ ಪದೇ ತಮ್ಮ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಆದರೆ, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಹೋದರೆ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂದು ಹೇಳಿದರು.<br /> <br /> ಶಂಕರನಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಸ್.ಆರ್.ಮರುಳಪ್ಪ ಉದ್ಘಾಟಿಸಿದರು. ತಾ.ಪಂ. ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಅರಸೀಕೆರೆ ಪುರಸಭಾ ಮಾಜಿ ಅಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ, ಇಓ ಚಂದ್ರಶೇಖರ್ ಮಾತನಾಡಿದರು.<br /> <br /> ಜಿ.ಪಂ. ಸದಸ್ಯೆ ಪಾರ್ವತಮ್ಮ, ಮಾಜಿ ಸದಸ್ಯ ಕೆ.ಪಿ.ಶಿವಮೂರ್ತಿ, ಗ್ರಾ.ಪಂ. ಸದಸ್ಯರಾದ ಚನ್ನಬಸಪ್ಪ, ಗಂಗಾಧರಪ್ಪ, ಭಾಗ್ಯಮ್ಮ, ಮಹೇಶ್, ಮೈಲಾರಪ್ಪ, ಡಿ.ಎಂಕುರ್ಕೆ ಗ್ರಾ.ಪಂ. ಅಧ್ಯಕ್ಷ ದಯಾನಂದ, ಮುಖಂಡರಾದ ನಂಜುಂಡಶೆಟ್ಟಿ, ಬಸವರಾಜು, ಉಪ ತಹಶೀಲ್ದಾರ್ ಮೋಹನ್ಬೆಣ್ಣಿ ಉಪಸ್ಥಿತರಿದ್ದರು. <br /> ತಾ.ಪಂ. ಅಧ್ಯಕ್ಷ ಕೆ.ಎಂ. ನಂಜುಂಡಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಾಗಲಿ ಅಥವಾ ಜಾತೀಯತೆ ಮಾಡುತ್ತ ಪ್ರಗತಿಗೆ ಮಾರಕವಾಗಿದ್ದೇನೆ ಎಂಬುದನ್ನು ಸಾಬೀತು ಪಡಿಸಿದರೆ ಶಾಸಕ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸವಾಲೆಸೆದರು.<br /> <br /> ತಾಲ್ಲೂಕಿನ ಕೆ.ಶಂಕರನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಡಲಮಗೆ ಗ್ರಾಮದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನವನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.<br /> <br /> ಶಾಸಕನಾಗಿ ಆಯ್ಕೆಯಾದ ಬಳಿಕ ಜಾತ್ಯತೀತವಾಗಿ ಯಾವ ಸಮುದಾಯಕ್ಕೂ ತೊಂದರೆಯಾಗದಂತೆ ನಡೆದುಕೊಂಡು ಬಂದಿದ್ದರೂ, ಪದೇ ಪದೇ ತಮ್ಮ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಆದರೆ, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಹೋದರೆ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂದು ಹೇಳಿದರು.<br /> <br /> ಶಂಕರನಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಸ್.ಆರ್.ಮರುಳಪ್ಪ ಉದ್ಘಾಟಿಸಿದರು. ತಾ.ಪಂ. ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಅರಸೀಕೆರೆ ಪುರಸಭಾ ಮಾಜಿ ಅಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ, ಇಓ ಚಂದ್ರಶೇಖರ್ ಮಾತನಾಡಿದರು.<br /> <br /> ಜಿ.ಪಂ. ಸದಸ್ಯೆ ಪಾರ್ವತಮ್ಮ, ಮಾಜಿ ಸದಸ್ಯ ಕೆ.ಪಿ.ಶಿವಮೂರ್ತಿ, ಗ್ರಾ.ಪಂ. ಸದಸ್ಯರಾದ ಚನ್ನಬಸಪ್ಪ, ಗಂಗಾಧರಪ್ಪ, ಭಾಗ್ಯಮ್ಮ, ಮಹೇಶ್, ಮೈಲಾರಪ್ಪ, ಡಿ.ಎಂಕುರ್ಕೆ ಗ್ರಾ.ಪಂ. ಅಧ್ಯಕ್ಷ ದಯಾನಂದ, ಮುಖಂಡರಾದ ನಂಜುಂಡಶೆಟ್ಟಿ, ಬಸವರಾಜು, ಉಪ ತಹಶೀಲ್ದಾರ್ ಮೋಹನ್ಬೆಣ್ಣಿ ಉಪಸ್ಥಿತರಿದ್ದರು. <br /> ತಾ.ಪಂ. ಅಧ್ಯಕ್ಷ ಕೆ.ಎಂ. ನಂಜುಂಡಪ್ಪ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>