<p><strong>ನವದೆಹಲಿ (ಪಿಟಿಐ</strong>): ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಲೆಕ್ಕ ತೋರಿಸಿದರೆ ಅಂತಹ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಅಧಿಕಾರ ತನಗೆ ಇದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.<br /> <br /> ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ ಚವ್ಹಾಣ್ ಅವರಿಗೆ ಸಂಬಂಧಿಸಿದ `ಕಾಸಿಗಾಗಿ ಸುದ್ದಿ' ಪ್ರಕರಣದಲ್ಲಿ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿರುವ ಆಯೋಗವು, ತನ್ನ ಅಧಿಕಾರವನ್ನು ಬಲವಾಗಿ ಸಮರ್ಥಿಸಿಕೊಂಡಿದೆ.<br /> <br /> ಸುಳ್ಳು ಲೆಕ್ಕ ಕೊಡುವ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ ಎಂಬ ಕಾನೂನು ಸಚಿವಾಲಯದ ಹೇಳಿಕೆಯನ್ನು ಪ್ರಮಾಣಪತ್ರದಲ್ಲಿ ಅಲ್ಲಗಳೆದಿದೆ.<br /> <br /> ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸರಿಯಾದ ಲೆಕ್ಕಾಚಾರ ನಿರ್ವಹಿಸದೇ ಹೋದರೆ ಅಂತಹ ಅಭ್ಯರ್ಥಿಯನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲು ಅಧಿಕಾರವಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.<br /> <br /> ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವೆಚ್ಚದ ಕುರಿತು ಪರಿಶೀಲನೆ ನಡೆಸುವುದಷ್ಟೇ ತನ್ನ ಕೆಲಸವಲ್ಲ, ಇದಕ್ಕೆ ಸಂಬಂಧಿಸಿದಂತೆ ಸುಳ್ಳು ಲೆಕ್ಕಾಚಾರ ಕೊಡುವವರ ವಿರುದ್ಧ ಕ್ರಮ ಜರುಗಿಸಲು ಕೂಡ ತನಗೆ ಅಧಿಕಾರವಿದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಲೆಕ್ಕ ತೋರಿಸಿದರೆ ಅಂತಹ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಅಧಿಕಾರ ತನಗೆ ಇದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.<br /> <br /> ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ ಚವ್ಹಾಣ್ ಅವರಿಗೆ ಸಂಬಂಧಿಸಿದ `ಕಾಸಿಗಾಗಿ ಸುದ್ದಿ' ಪ್ರಕರಣದಲ್ಲಿ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿರುವ ಆಯೋಗವು, ತನ್ನ ಅಧಿಕಾರವನ್ನು ಬಲವಾಗಿ ಸಮರ್ಥಿಸಿಕೊಂಡಿದೆ.<br /> <br /> ಸುಳ್ಳು ಲೆಕ್ಕ ಕೊಡುವ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ ಎಂಬ ಕಾನೂನು ಸಚಿವಾಲಯದ ಹೇಳಿಕೆಯನ್ನು ಪ್ರಮಾಣಪತ್ರದಲ್ಲಿ ಅಲ್ಲಗಳೆದಿದೆ.<br /> <br /> ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸರಿಯಾದ ಲೆಕ್ಕಾಚಾರ ನಿರ್ವಹಿಸದೇ ಹೋದರೆ ಅಂತಹ ಅಭ್ಯರ್ಥಿಯನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲು ಅಧಿಕಾರವಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.<br /> <br /> ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ವೆಚ್ಚದ ಕುರಿತು ಪರಿಶೀಲನೆ ನಡೆಸುವುದಷ್ಟೇ ತನ್ನ ಕೆಲಸವಲ್ಲ, ಇದಕ್ಕೆ ಸಂಬಂಧಿಸಿದಂತೆ ಸುಳ್ಳು ಲೆಕ್ಕಾಚಾರ ಕೊಡುವವರ ವಿರುದ್ಧ ಕ್ರಮ ಜರುಗಿಸಲು ಕೂಡ ತನಗೆ ಅಧಿಕಾರವಿದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>