<p><strong>ನವದೆಹಲಿ (ಪಿಟಿಐ):`</strong>ವೋಟಿಗಾಗಿ ನೋಟು~ ಹಗರಣದ ಪ್ರಮುಖ ಆರೋಪಿ ಹಾಗೂ ಬಂಧಿತ ರಾಜ್ಯಸಭಾ ಸದಸ್ಯ ಅಮರ್ಸಿಂಗ್ಗೆ ಗುರುವಾರ ದೆಹಲಿಯ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.<br /> <br /> ಪ್ರಕರಣದ ವಿಚಾರಣೆ ನಡೆಸುತ್ತಿರುವ ಇಲ್ಲಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸಂಗೀತಾ ಧಿಂಗ್ರಾ ಸೆಹಗಲ್ ಅವರು ಸೆಪ್ಟೆಂಬರ್ 19ರ ವರೆಗೆ ಅಮರ್ಸಿಂಗ್ಗೆ ಮಧ್ಯಂತರ ಜಾಮೀನು ನೀಡಲು ಸಮ್ಮತಿಸಿದರು.<br /> <br /> 2 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಭದ್ರತೆಯ ಆಧಾರದ ಮೇಲೆ ಈ ಜಾಮೀನು ನೀಡಲಾಗಿದ್ದು, ಸಿಂಗ್ ತಮ್ಮ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಮತ್ತು ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೆಹಲಿ ಬಿಟ್ಟು ಹೊರಹೋಗುವಂತಿಲ್ಲ ಎಂದೂ ಷರತ್ತು ವಿಧಿಸಿದ್ದಾರೆ.<br /> <br /> ಮೂತ್ರಪಿಂಡ ಕಸಿಗೆ ಒಳಗಾಗಿರುವ ಅಮರ್ ಸಿಂಗ್ ಅವರಿಗೆ ತಕ್ಷಣವೇ ಜಾಮೀನು ನೀಡುವಂತೆ ಅವರ ಪರ ವಕೀಲರಾದ ಹರಿಹರನ್ ಸಿಂಗ್ ಬುಧವಾರ ನ್ಯಾಯಾಲಯಕ್ಕೆ ವೈದ್ಯಕೀಯ ದಾಖಲೆ ಒದಗಿಸಿದ್ದರು.<br /> 55 ವರ್ಷದ ಅಮರ್ಸಿಂಗ್ ಸಮಾಜವಾದಿ ಪಕ್ಷದ ಮಾಜಿ ನಾಯಕರಾಗಿದ್ದು ಸೆ.6ರಂದು ಇವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):`</strong>ವೋಟಿಗಾಗಿ ನೋಟು~ ಹಗರಣದ ಪ್ರಮುಖ ಆರೋಪಿ ಹಾಗೂ ಬಂಧಿತ ರಾಜ್ಯಸಭಾ ಸದಸ್ಯ ಅಮರ್ಸಿಂಗ್ಗೆ ಗುರುವಾರ ದೆಹಲಿಯ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.<br /> <br /> ಪ್ರಕರಣದ ವಿಚಾರಣೆ ನಡೆಸುತ್ತಿರುವ ಇಲ್ಲಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸಂಗೀತಾ ಧಿಂಗ್ರಾ ಸೆಹಗಲ್ ಅವರು ಸೆಪ್ಟೆಂಬರ್ 19ರ ವರೆಗೆ ಅಮರ್ಸಿಂಗ್ಗೆ ಮಧ್ಯಂತರ ಜಾಮೀನು ನೀಡಲು ಸಮ್ಮತಿಸಿದರು.<br /> <br /> 2 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಭದ್ರತೆಯ ಆಧಾರದ ಮೇಲೆ ಈ ಜಾಮೀನು ನೀಡಲಾಗಿದ್ದು, ಸಿಂಗ್ ತಮ್ಮ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಮತ್ತು ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೆಹಲಿ ಬಿಟ್ಟು ಹೊರಹೋಗುವಂತಿಲ್ಲ ಎಂದೂ ಷರತ್ತು ವಿಧಿಸಿದ್ದಾರೆ.<br /> <br /> ಮೂತ್ರಪಿಂಡ ಕಸಿಗೆ ಒಳಗಾಗಿರುವ ಅಮರ್ ಸಿಂಗ್ ಅವರಿಗೆ ತಕ್ಷಣವೇ ಜಾಮೀನು ನೀಡುವಂತೆ ಅವರ ಪರ ವಕೀಲರಾದ ಹರಿಹರನ್ ಸಿಂಗ್ ಬುಧವಾರ ನ್ಯಾಯಾಲಯಕ್ಕೆ ವೈದ್ಯಕೀಯ ದಾಖಲೆ ಒದಗಿಸಿದ್ದರು.<br /> 55 ವರ್ಷದ ಅಮರ್ಸಿಂಗ್ ಸಮಾಜವಾದಿ ಪಕ್ಷದ ಮಾಜಿ ನಾಯಕರಾಗಿದ್ದು ಸೆ.6ರಂದು ಇವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>