<p><strong>ಕಾನ್ಪುರ (ಪಿಟಿಐ): </strong>ಅತ್ಯಾಚಾರಕ್ಕೆ ಒಳಗಾಗುವ ಸಂತ್ರಸ್ತರಿಗೆ ನಡೆಸುವ ಅಮಾನವೀಯ ಎರಡು ಬೆರಳು ಪರೀಕ್ಷೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ವಿಧಿವಿಜ್ಞಾನ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಪ್ರತ್ಯೇಕ ಕೊಠಡಿ ಸಜ್ಜುಗೊಳಿಸುವಂತೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.<br /> <br /> ಅತ್ಯಾಚಾರಕ್ಕೆ ಒಳಗಾದವರ ಗೋಪ್ಯತೆ ಕಾಯ್ದುಕೊಳ್ಳುವ ಸೂಕ್ತ ವ್ಯವಸ್ಥೆಯೊಂದಿಗೆ ಮಾರ್ಗದರ್ಶಿ ಸೂತ್ರದಲ್ಲಿ ಪಟ್ಟಿ ಮಾಡಲಾದ ಎಲ್ಲ ಅಗತ್ಯ ಉಪಕರಣಗಳೂ ಈ ಕೊಠಡಿಯಲ್ಲಿ ಇರಬೇಕು ಎಂದು ತಿಳಿಸಲಾಗಿದೆ.<br /> <br /> ಸಂತ್ರಸ್ತರ ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪರೀಕ್ಷೆಗಳನ್ನು ನಡೆಸಲು ಅಗತ್ಯ ಉಪಕರಣಗಳನ್ನು ಒಳಗೊಂಡ ಪ್ರತ್ಯೇಕ ಕೋಣೆ ಇರಬೇಕು. ಮೇಲಾಗಿ ಅತ್ಯಾಚಾರ ದೃಢಪಡಿಸಲು ಈಗ ಅನುಸರಿಸಲಾಗುತ್ತಿರುವ ತೀವ್ರ ಆಘಾತಕಾರಿಯಾದ ‘ಎರಡು ಬೆರಳು ಪರೀಕ್ಷೆ’ ಅವೈಜ್ಞಾನಿಕ ಎಂದು ಹೇಳಲಾಗಿದೆ.<br /> <br /> ತಜ್ಞರ ಸಹಕಾರದೊಂದಿಗೆ ಆರೋಗ್ಯ ಸಂಶೋಧನೆ ಇಲಾಖೆ (ಡಿಎಚ್ಆರ್) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜಂಟಿಯಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು ಇವು ಈಗ ಅನುಸರಿಸಲಾಗುತ್ತಿರುವ ‘ಅಮಾನವೀಯ’ ಪದ್ಧತಿಯನ್ನು ಕೊನೆಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.<br /> <br /> <strong>ವೈದ್ಯಕೀಯ ಸಿಬ್ಬಂದಿಗೆ ಸಲಹೆ:</strong> ಅತ್ಯಾಚಾರ ಪ್ರಕರಣಗಳನ್ನು ನಿಭಾಯಿಸುವ ಸಂದರ್ಭದಲ್ಲಿ ಸಂಬಂಧಿಸಿದ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿ ಹೇಗೆ ನಡೆದುಕೊಳ್ಳಬೇಕು ಎನ್ನುವ ಕುರಿತು ತರಬೇತಿ ನೀಡುವ ಪ್ರಸ್ತಾಪವೂ ಮಾರ್ಗಸೂಚಿಯಲ್ಲಿದೆ.<br /> <br /> ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ವೈದ್ಯರನ್ನು ಹೊರತುಪಡಿಸಿ ಮೂರನೇ ವ್ಯಕ್ತಿ ಹಾಜರಿರಕೂಡದು, ಪುರುಷ ವೈದ್ಯರು ಪರೀಕ್ಷೆ ನಡೆಸುವುದಾದರೆ ಒಬ್ಬ ಮಹಿಳಾ ಸಹಾಯಕಿ ಅಲ್ಲಿ ಇರಬೇಕಾಗುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ.<br /> <br /> ‘ಅತ್ಯಾಚಾರ’ ಎನ್ನುವುದು ಕಾನೂನು ವ್ಯಾಖ್ಯೆಯಾಗಿದ್ದು ವೈದ್ಯಕೀಯ ಪದ ಅಲ್ಲ, ಹಾಗಾಗಿ ವೈದ್ಯರು ತಮ್ಮ ಅಭಿಪ್ರಾಯ ಮಂಡಿಸುವ ಸಂದರ್ಭ ‘ಅತ್ಯಾಚಾರ’ ಎಂಬ ಪದ ಬಳಸುವಂತಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ (ಪಿಟಿಐ): </strong>ಅತ್ಯಾಚಾರಕ್ಕೆ ಒಳಗಾಗುವ ಸಂತ್ರಸ್ತರಿಗೆ ನಡೆಸುವ ಅಮಾನವೀಯ ಎರಡು ಬೆರಳು ಪರೀಕ್ಷೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ವಿಧಿವಿಜ್ಞಾನ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಪ್ರತ್ಯೇಕ ಕೊಠಡಿ ಸಜ್ಜುಗೊಳಿಸುವಂತೆ ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.<br /> <br /> ಅತ್ಯಾಚಾರಕ್ಕೆ ಒಳಗಾದವರ ಗೋಪ್ಯತೆ ಕಾಯ್ದುಕೊಳ್ಳುವ ಸೂಕ್ತ ವ್ಯವಸ್ಥೆಯೊಂದಿಗೆ ಮಾರ್ಗದರ್ಶಿ ಸೂತ್ರದಲ್ಲಿ ಪಟ್ಟಿ ಮಾಡಲಾದ ಎಲ್ಲ ಅಗತ್ಯ ಉಪಕರಣಗಳೂ ಈ ಕೊಠಡಿಯಲ್ಲಿ ಇರಬೇಕು ಎಂದು ತಿಳಿಸಲಾಗಿದೆ.<br /> <br /> ಸಂತ್ರಸ್ತರ ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪರೀಕ್ಷೆಗಳನ್ನು ನಡೆಸಲು ಅಗತ್ಯ ಉಪಕರಣಗಳನ್ನು ಒಳಗೊಂಡ ಪ್ರತ್ಯೇಕ ಕೋಣೆ ಇರಬೇಕು. ಮೇಲಾಗಿ ಅತ್ಯಾಚಾರ ದೃಢಪಡಿಸಲು ಈಗ ಅನುಸರಿಸಲಾಗುತ್ತಿರುವ ತೀವ್ರ ಆಘಾತಕಾರಿಯಾದ ‘ಎರಡು ಬೆರಳು ಪರೀಕ್ಷೆ’ ಅವೈಜ್ಞಾನಿಕ ಎಂದು ಹೇಳಲಾಗಿದೆ.<br /> <br /> ತಜ್ಞರ ಸಹಕಾರದೊಂದಿಗೆ ಆರೋಗ್ಯ ಸಂಶೋಧನೆ ಇಲಾಖೆ (ಡಿಎಚ್ಆರ್) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜಂಟಿಯಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು ಇವು ಈಗ ಅನುಸರಿಸಲಾಗುತ್ತಿರುವ ‘ಅಮಾನವೀಯ’ ಪದ್ಧತಿಯನ್ನು ಕೊನೆಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.<br /> <br /> <strong>ವೈದ್ಯಕೀಯ ಸಿಬ್ಬಂದಿಗೆ ಸಲಹೆ:</strong> ಅತ್ಯಾಚಾರ ಪ್ರಕರಣಗಳನ್ನು ನಿಭಾಯಿಸುವ ಸಂದರ್ಭದಲ್ಲಿ ಸಂಬಂಧಿಸಿದ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿ ಹೇಗೆ ನಡೆದುಕೊಳ್ಳಬೇಕು ಎನ್ನುವ ಕುರಿತು ತರಬೇತಿ ನೀಡುವ ಪ್ರಸ್ತಾಪವೂ ಮಾರ್ಗಸೂಚಿಯಲ್ಲಿದೆ.<br /> <br /> ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ವೈದ್ಯರನ್ನು ಹೊರತುಪಡಿಸಿ ಮೂರನೇ ವ್ಯಕ್ತಿ ಹಾಜರಿರಕೂಡದು, ಪುರುಷ ವೈದ್ಯರು ಪರೀಕ್ಷೆ ನಡೆಸುವುದಾದರೆ ಒಬ್ಬ ಮಹಿಳಾ ಸಹಾಯಕಿ ಅಲ್ಲಿ ಇರಬೇಕಾಗುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ.<br /> <br /> ‘ಅತ್ಯಾಚಾರ’ ಎನ್ನುವುದು ಕಾನೂನು ವ್ಯಾಖ್ಯೆಯಾಗಿದ್ದು ವೈದ್ಯಕೀಯ ಪದ ಅಲ್ಲ, ಹಾಗಾಗಿ ವೈದ್ಯರು ತಮ್ಮ ಅಭಿಪ್ರಾಯ ಮಂಡಿಸುವ ಸಂದರ್ಭ ‘ಅತ್ಯಾಚಾರ’ ಎಂಬ ಪದ ಬಳಸುವಂತಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>