<p><strong>ಲಂಡನ್ (ಐಎಎನ್ಎಸ್): </strong> ಅಲ್ಖೈದಾ ಸ್ಥಾಪಕ ಒಸಾಮ ಬಿನ್ ಲಾಡೆನ್ ಹತ್ಯೆಯ ನಂತರ ಆತನ ಉತ್ತರಾಧಿಕಾರಿ ಎನಿಸಿರುವ ಐಮನ್ ಅಲ್-ಜವಾಹಿರಿ, ಸಂಘಟನೆಯ ಮೇಲೆ ತನ್ನ ಹಿಡಿತ ಸಾಧಿಸಲು ಮುಂದಾಗಿದ್ದಾನೆ. <br /> <br /> ಈ ನಿಟ್ಟಿನಲ್ಲಿ 9/11ರ ಉಗ್ರರ ದಾಳಿಯ ಹತ್ತನೇ ವರ್ಷಾಚರಣೆ ಸಂದರ್ಭದಲ್ಲಿ ಅಮೆರಿಕದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಬೆಂಬಲಿಗ ಉಗ್ರರಿಗೆ ಆದೇಶಿಸಿದ್ದಾನೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.<br /> <br /> ಅಮೆರಿಕದಲ್ಲಿ ಮತ್ತೆ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಅಲ್ಖೈದಾ ನಾಯಕತ್ವವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಜವಾಹಿರಿ ಬಯಸಿದ್ದಾನೆ ಎಂದು `ದಿ ಸನ್~ ಶನಿವಾರ ಪ್ರಕಟಿಸಿದೆ.<br /> <br /> ಅಮೆರಿಕದ ಮೇಲೆ ಕಾರು ಅಥವಾ ಟ್ರಕ್ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಈ ಹಿಂದೆ ದಾಳಿಗೆ ಒಳಗಾಗಿದ್ದ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ನಗರಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಈಗಿನ ಬೆದರಿಕೆ ಜವಾಹಿರಿ ಸೂಚನೆ ಮೇರೆಗೆ ಇದ್ದು, ಸೇತುವೆಗಳು ಮತ್ತು ಸುರಂಗಗಳನ್ನು ಸ್ಫೋಟಿಸಲು ಉಗ್ರರು ಸಂಚು ರೂಪಿಸಿರುವುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್ (ಐಎಎನ್ಎಸ್): </strong> ಅಲ್ಖೈದಾ ಸ್ಥಾಪಕ ಒಸಾಮ ಬಿನ್ ಲಾಡೆನ್ ಹತ್ಯೆಯ ನಂತರ ಆತನ ಉತ್ತರಾಧಿಕಾರಿ ಎನಿಸಿರುವ ಐಮನ್ ಅಲ್-ಜವಾಹಿರಿ, ಸಂಘಟನೆಯ ಮೇಲೆ ತನ್ನ ಹಿಡಿತ ಸಾಧಿಸಲು ಮುಂದಾಗಿದ್ದಾನೆ. <br /> <br /> ಈ ನಿಟ್ಟಿನಲ್ಲಿ 9/11ರ ಉಗ್ರರ ದಾಳಿಯ ಹತ್ತನೇ ವರ್ಷಾಚರಣೆ ಸಂದರ್ಭದಲ್ಲಿ ಅಮೆರಿಕದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಬೆಂಬಲಿಗ ಉಗ್ರರಿಗೆ ಆದೇಶಿಸಿದ್ದಾನೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.<br /> <br /> ಅಮೆರಿಕದಲ್ಲಿ ಮತ್ತೆ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಅಲ್ಖೈದಾ ನಾಯಕತ್ವವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಜವಾಹಿರಿ ಬಯಸಿದ್ದಾನೆ ಎಂದು `ದಿ ಸನ್~ ಶನಿವಾರ ಪ್ರಕಟಿಸಿದೆ.<br /> <br /> ಅಮೆರಿಕದ ಮೇಲೆ ಕಾರು ಅಥವಾ ಟ್ರಕ್ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಈ ಹಿಂದೆ ದಾಳಿಗೆ ಒಳಗಾಗಿದ್ದ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ನಗರಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಈಗಿನ ಬೆದರಿಕೆ ಜವಾಹಿರಿ ಸೂಚನೆ ಮೇರೆಗೆ ಇದ್ದು, ಸೇತುವೆಗಳು ಮತ್ತು ಸುರಂಗಗಳನ್ನು ಸ್ಫೋಟಿಸಲು ಉಗ್ರರು ಸಂಚು ರೂಪಿಸಿರುವುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>