<p><strong>ನವದೆಹಲಿ (ಪಿಟಿಐ):</strong> ಅಮೆರಿಕದ ಕೆಲವು ಶ್ರೇಣಿಯ ರಾಜತಾಂತ್ರಿಕ ಅಧಿಕಾರಿಗಳ ರಕ್ಷಣೆಯನ್ನು ಭಾರತ ಸರ್ಕಾರ ಕಡಿತಗೊಳಿಸಿದೆ. ಹಾಗೆಯೇ ಅವರ ಕುಟುಂಬ ಸದಸ್ಯರ ಎಲ್ಲ ರೀತಿಯ ರಾಜತಾಂತ್ರಿಕ ರಕ್ಷಣೆಯನ್ನು ರದ್ದುಪಡಿಸಿದೆ.<br /> <br /> ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಪ್ರಕರಣಕ್ಕೆ ಕಠಿಣ ಪ್ರತಿ ಕ್ರಮದ ಭಾಗವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತ್ತೀಚೆಗೆ, ವೀಸಾ ವಂಚನೆ ಪ್ರಕರಣದಲ್ಲಿ ದೇವಯಾನಿ ಅವರನ್ನು ಬಂಧಿಸಿ, ಅಪಮಾನಕರ ದೇಹ ಶೋಧಕ್ಕೆ ಒಳಪಡಿಸಲಾಗಿತ್ತು. ಭಾರತದಲ್ಲಿರುವ ಅಮೆರಿಕದ ನಾಲ್ಕು ಕಾನ್ಸುಲ್ ಕಚೇರಿಗಳ ಅಧಿಕಾರಿಗಳಿಗೆ ಹೊಸ ಗುರುತು ಚೀಟಿಗಳನ್ನು ನೀಡಲಾಗುವುದು.<br /> <br /> ‘ಈ ಗುರುತು ಚೀಟಿಗಳ ಪ್ರಕಾರ, ಈ ಅಧಿಕಾರಿಗಳ ರಾಜತಾಂತ್ರಿಕ ರಕ್ಷಣೆ ಕಡಿತಗೊಳ್ಳಲಿದ್ದು, ಗಂಭೀರ ಪ್ರಕರಣಗಳಲ್ಲಿ ಅವರಿಗೆ ರಕ್ಷಣೆ ದೊರೆಯುವುದೇ ಇಲ್ಲ. ’ ಅಮೆರಿಕದಲ್ಲಿರುವ ಭಾರತೀಯ ಕಾನ್ಸುಲ್ ಅಧಿಕಾರಿಗಳಿಗೆ ನಿರ್ಬಂಧಿತ ರಕ್ಷಣೆ ಮಾತ್ರ ಇರುವುದಕ್ಕೆ ಪ್ರತಿಯಾಗಿ ಭಾರತ ಸರ್ಕಾರ ಈ ಕ್ರಮ ಕೈಗೊಂಡಿದೆ.</p>.<p>ಅಮೆರಿಕದ ಕಾನ್ಸುಲ್ ಅಧಿಕಾರಿಗಳ ಕುಟುಂಬದ ಸದಸ್ಯರ ರಾಜತಾಂತ್ರಿಕ ಗುರುತು ಪತ್ರಗಳನ್ನು ರದ್ದು ಪಡಿಸಲಾಗಿದೆ. ಅಮೆರಿಕದಲ್ಲಿರುವ ಭಾರತೀಯ ಕಾನ್ಸುಲ್ ಅಧಿಕಾರಿಗಳ ಕುಟುಂಬ ಸದಸ್ಯರಿಗೆ ಇಂತಹ ಯಾವುದೇ ಅನುಕೂಲಗಳನ್ನು ಅಮೆರಿಕ ಸರ್ಕಾರ ಒದಗಿಸುತ್ತಿಲ್ಲ.<br /> <br /> ವೀಸಾ ವಂಚನೆ ಪ್ರಕರಣದಲ್ಲಿ, ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ಬಂಧನ ಮತ್ತು ಅಪಮಾನಕರ ದೇಹ ಶೋಧದ ನಂತರ ಭಾರತ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡುತ್ತಿದೆ. ಅಮೆರಿಕದ ರಾಜತಾಂತ್ರಿಕ ಅಧಿಕಾರಿಗಳಿಗೆ ನೀಡಲಾಗುತ್ತಿದ್ದ ಹಲವು ಅನುಕೂಲಗಳನ್ನು ಹಿಂದಕ್ಕೆ ಪಡೆಯಲಾಗಿದೆ.<br /> <br /> ರಾಜತಾಂತ್ರಿಕ ರಕ್ಷಣೆ ಮತ್ತು ಇತರ ಅನುಕೂಲಗಳ ಪರಾಮರ್ಶೆಗಾಗಿ ಅಮೆರಿಕದ ಎಲ್ಲ ಕಾನ್ಸುಲ್ ಅಧಿಕಾರಿಗಳು ಮತ್ತು ಅವರ ಕುಟುಂಬದ ಸದಸ್ಯರ ಗುರುತು ಪತ್ರಗಳನ್ನು ಹಿಂದಿರುಗಿಸಲು ಸೋಮವಾರದವರೆಗೆ ಗಡುವು ನೀಡಲಾಗಿತ್ತು. ಗಡುವು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ದೃಢ ಕ್ರಮಗಳನ್ನು ಕೈಗೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಅಮೆರಿಕದ ಕೆಲವು ಶ್ರೇಣಿಯ ರಾಜತಾಂತ್ರಿಕ ಅಧಿಕಾರಿಗಳ ರಕ್ಷಣೆಯನ್ನು ಭಾರತ ಸರ್ಕಾರ ಕಡಿತಗೊಳಿಸಿದೆ. ಹಾಗೆಯೇ ಅವರ ಕುಟುಂಬ ಸದಸ್ಯರ ಎಲ್ಲ ರೀತಿಯ ರಾಜತಾಂತ್ರಿಕ ರಕ್ಷಣೆಯನ್ನು ರದ್ದುಪಡಿಸಿದೆ.<br /> <br /> ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಪ್ರಕರಣಕ್ಕೆ ಕಠಿಣ ಪ್ರತಿ ಕ್ರಮದ ಭಾಗವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತ್ತೀಚೆಗೆ, ವೀಸಾ ವಂಚನೆ ಪ್ರಕರಣದಲ್ಲಿ ದೇವಯಾನಿ ಅವರನ್ನು ಬಂಧಿಸಿ, ಅಪಮಾನಕರ ದೇಹ ಶೋಧಕ್ಕೆ ಒಳಪಡಿಸಲಾಗಿತ್ತು. ಭಾರತದಲ್ಲಿರುವ ಅಮೆರಿಕದ ನಾಲ್ಕು ಕಾನ್ಸುಲ್ ಕಚೇರಿಗಳ ಅಧಿಕಾರಿಗಳಿಗೆ ಹೊಸ ಗುರುತು ಚೀಟಿಗಳನ್ನು ನೀಡಲಾಗುವುದು.<br /> <br /> ‘ಈ ಗುರುತು ಚೀಟಿಗಳ ಪ್ರಕಾರ, ಈ ಅಧಿಕಾರಿಗಳ ರಾಜತಾಂತ್ರಿಕ ರಕ್ಷಣೆ ಕಡಿತಗೊಳ್ಳಲಿದ್ದು, ಗಂಭೀರ ಪ್ರಕರಣಗಳಲ್ಲಿ ಅವರಿಗೆ ರಕ್ಷಣೆ ದೊರೆಯುವುದೇ ಇಲ್ಲ. ’ ಅಮೆರಿಕದಲ್ಲಿರುವ ಭಾರತೀಯ ಕಾನ್ಸುಲ್ ಅಧಿಕಾರಿಗಳಿಗೆ ನಿರ್ಬಂಧಿತ ರಕ್ಷಣೆ ಮಾತ್ರ ಇರುವುದಕ್ಕೆ ಪ್ರತಿಯಾಗಿ ಭಾರತ ಸರ್ಕಾರ ಈ ಕ್ರಮ ಕೈಗೊಂಡಿದೆ.</p>.<p>ಅಮೆರಿಕದ ಕಾನ್ಸುಲ್ ಅಧಿಕಾರಿಗಳ ಕುಟುಂಬದ ಸದಸ್ಯರ ರಾಜತಾಂತ್ರಿಕ ಗುರುತು ಪತ್ರಗಳನ್ನು ರದ್ದು ಪಡಿಸಲಾಗಿದೆ. ಅಮೆರಿಕದಲ್ಲಿರುವ ಭಾರತೀಯ ಕಾನ್ಸುಲ್ ಅಧಿಕಾರಿಗಳ ಕುಟುಂಬ ಸದಸ್ಯರಿಗೆ ಇಂತಹ ಯಾವುದೇ ಅನುಕೂಲಗಳನ್ನು ಅಮೆರಿಕ ಸರ್ಕಾರ ಒದಗಿಸುತ್ತಿಲ್ಲ.<br /> <br /> ವೀಸಾ ವಂಚನೆ ಪ್ರಕರಣದಲ್ಲಿ, ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ಬಂಧನ ಮತ್ತು ಅಪಮಾನಕರ ದೇಹ ಶೋಧದ ನಂತರ ಭಾರತ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡುತ್ತಿದೆ. ಅಮೆರಿಕದ ರಾಜತಾಂತ್ರಿಕ ಅಧಿಕಾರಿಗಳಿಗೆ ನೀಡಲಾಗುತ್ತಿದ್ದ ಹಲವು ಅನುಕೂಲಗಳನ್ನು ಹಿಂದಕ್ಕೆ ಪಡೆಯಲಾಗಿದೆ.<br /> <br /> ರಾಜತಾಂತ್ರಿಕ ರಕ್ಷಣೆ ಮತ್ತು ಇತರ ಅನುಕೂಲಗಳ ಪರಾಮರ್ಶೆಗಾಗಿ ಅಮೆರಿಕದ ಎಲ್ಲ ಕಾನ್ಸುಲ್ ಅಧಿಕಾರಿಗಳು ಮತ್ತು ಅವರ ಕುಟುಂಬದ ಸದಸ್ಯರ ಗುರುತು ಪತ್ರಗಳನ್ನು ಹಿಂದಿರುಗಿಸಲು ಸೋಮವಾರದವರೆಗೆ ಗಡುವು ನೀಡಲಾಗಿತ್ತು. ಗಡುವು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ದೃಢ ಕ್ರಮಗಳನ್ನು ಕೈಗೊಳ್ಳಲು ಭಾರತ ಸರ್ಕಾರ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>